Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮಿ ರಮಾನಂದ ತೀರ್ಥರ ರಸ್ತೆಗೆ ಕಮಾನು ನಿರ್ಮಿಸಿ :ಅಲ್ಲಾಪೂರ
(ರಾಜ್ಯ ) ಜಿಲ್ಲೆ

ಸ್ವಾಮಿ ರಮಾನಂದ ತೀರ್ಥರ ರಸ್ತೆಗೆ ಕಮಾನು ನಿರ್ಮಿಸಿ :ಅಲ್ಲಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನಕದಾಸ ವೃತ್ತದಿಂದ ಗೋಲಗೇರಿ ಬೈಪಾಸವರೆಗಿನ ರಸ್ತೆಗೆ ಸ್ವಾಮಿ ರಮಾನಂದ ತೀರ್ಥರ ಹೆಸರಿಟ್ಟಿದ್ದು ಸಂತಸ. ಅವರ ಹೆಸರಿನಲ್ಲಿ ಗೋಲಗೇರಿ ಬೈಪಾಸ್‌ಗೆ ಸ್ವಾಗತ ಬಾಗಿಲು ನಿರ್ಮಾಣ ಮಾಡಬೇಕು. ಮತ್ತು ಇದೊಂದು ರಾಷ್ಟ್ರ ಮಟ್ಟದ ಸ್ಮಾರಕ ಭವನ. ಇದನ್ನು ಯಾವುದೋ ಒಂದು ಸಮುದಾಯಕ್ಕೆ ಹಸ್ತಾಂತರಿಸುವುದು ನಮ್ಮ ವಿರೋಧವಿದೆ. ಹಸ್ತಾಂತರಿಸುವುದಾದರೆ ಅದಕ್ಕೆ ಖಂಡಿಸುತ್ತೇವೆ ಎಂದು ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.
ಸಿಂದಗಿ ಪಟ್ಟಣದ ಸ್ವಾಮಿ ರಮಾನಂದ ತೀರ್ಥರ ಸ್ಮಾರಕ ಭವನದಲ್ಲಿ ಹಮ್ಮಿಕೊಂಡ ಸ್ವಾಮಿರಮಾನಂದ ತೀರ್ಥರ ೧೨೨ನೆಯ ಜಯಂತಿ ಕಾರ್ಯಕ್ರಮದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರಾಷ್ಟ್ರಕ್ಕಾಗಿ ದುಡಿದ ಸ್ವಾತಂತ್ರ ಹೋರಾಟಗಾರರ ಜಯಂತಿಯನ್ನು ನಾವು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಚರಿಸಿ ಗೌರವಿಸುತ್ತೇವೆ. ಆದರೆ ಸ್ವಾಮಿರಮಾನಂದ ತೀರ್ಥರ ಜಯಂತಿ ಆಚರಣೆಯ ಕುರಿತು ರಾಜ್ಯ ಸರಕಾರ ಗಮನ ಹರಿಸದೇ ಇರುವದರಿಂದ ಅವರ ಅಭಿಮಾನಿಗಳು ಮತ್ತು ಸಿಂದಗಿ ನಗರದ ಜನತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಸರಕಾರದ ವತಿಯಿಂದ ಜಯಂತಿ ಆಚರಿಸುವಂತೆ ಒತ್ತಾಯಿಸಲಾಗುವುದು. ಜನತೆಯಲ್ಲಿ ಅವರ ಕುರಿತು ಸಂಪೂರ್ಣ ಮಾಹಿತಿ ಇಲ್ಲದಿರುವುದರಿಂದ ಅದನ್ನು ರಾಜ್ಯವ್ಯಾಪಿ ಪಸರಿಸುವ ಕಾರ್ಯ ಮಾಡಲಾಗುವುದು. ಇದಕ್ಕೆ ಬುದ್ದಿ ಜೀವಿಗಳು, ಹೋರಾಟಗಾರರು, ಸ್ವಾತಂತ್ರಾಭಿಮಾನಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.
ಈ ವೇಳೆ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮಾತನಾಡಿ, ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿ ಸ್ವಾಮಿರಮಾನಂದ ತೀರ್ಥರು ಆಂಧ್ರಪ್ರದೇಶ ಮತ್ತು ಮಹಾರಾಷ್ಟç ರಾಜ್ಯಗಳಲ್ಲಿ ರಾಷ್ಟç ಪುರುಷರಂತೆ ಪೂಜಿಸಲ್ಪಡುತ್ತಾರೆ. ಆದರೆ ಅವರ ಹುಟ್ಟೂರಾದ ಸಿಂದಗಿ ಪಟ್ಟಣದಲ್ಲಿಯೇ ಅವರಿಗೆ ಸಿಗಬೇಕಾದ ಗೌರವಗಳು ಸಿಗದೇ ಇದ್ದದ್ದು ಬೇಸರದ ಸಂಗತಿ. ಹೈದ್ರಾಬಾದ ನಿಜಾಮರ ದಬ್ಬಾಳಿಕೆಯಿಂದ ತತ್ತರಿಸಿ ಹೋದ ಈಗಿನ ಹೈದ್ರಾಬಾದ ಕರ್ನಾಟಕದ ವಿಮೋಚನೆಗೆ ಟೊಂಕ ಕಟ್ಟಿ ನಿಜಾಮರನ್ನು ದಮನ ಬಡಿಯುವವರೆಗು ವಿಶ್ರಮಿಸದ ಒಬ್ಬ ಮಹಾ ಪುರಷನ ಜನ್ಮಸ್ಥಳ ಸಿಂದಗಿ ಎಂಬುದು ನಮಗೆಲ್ಲ ಹೆಮ್ಮೆಯ ಸಂಗತಿ. ನೆರೆಯ ಮಹಾರಾಷ್ಟç ಹಾಗೂ ಆಂಧ್ರಪ್ರದೇಶಗಳಲ್ಲಿ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಕೇಂದ್ರಗಳಿದ್ದು, ಕರ್ನಾಟಕದಲ್ಲಿಯೇ ಅವರ ಹೆಸರು ಚಿರಸ್ಥಾಯಿಯಾಗಿರದಿರುವುದು ವಿಷಾದಕರ ಸಂಗತಿ. ಕಾರಣ ಮುಂಬರುವ ದಿನಮಾನಗಳಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ರಮಾನಂದ ತೀರ್ಥರಿಗೆ ರಾಷ್ಟ ಸಂತರಿಗೆ ದೊರೆಯಬೇಕಾದ ಗೌರವವನ್ನು, ಪೂಜ್ಯನೀಯ ಸ್ಥಾನವನ್ನು ಕಲ್ಪಿಸಿ ಕೊಡುವ ಪ್ರಯತ್ನ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಹೆಚ್.ಟಿ.ಕುಲಕರ್ಣಿ, ರಂಗನಾಥ ಖೇಡಗಿ, ಪ್ರಕಾಶ ಹಿರೇಕುರುಬರ, ಶಾಂತು ರಾಣಾಗೋಳ, ಪ್ರದೀಪ ದೇಶಪಾಂಡೆ, ಪುರಸಭೆ ಸದಸ್ಯ ರಾಜಣ್ಣ ನಾರಾಯಣಕರ, ಎಂ.ಪಿ.ಕುಲಕರ್ಣಿ, ಅರುಣ ಜೋಷಿ, ಬಸವರಾಜ ಕುಂಬಾರ, ಶಿವಕುಮಾರ ಶಿವಸಿಂಪಿ, ಆಯ್.ಎ.ಮಕಾಂದಾರ, ಶ್ರೀನಿವಾಸ ಜೋಷಿ, ಶ್ರೀಶೈಲ ಯಳಮೇಲಿ, ಬಸವರಾಜ ಕಕ್ಕಳಮೇಲಿ, ಎಪಿಎಂಸಿ ನಿರ್ದೇಶಕ ಮಾಳು ಪೂಜಾರಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.