Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಚ್ಚಿನ ವಾಹನಗಳು ಅಲಭ್ಯ: ಬಸ್ ಪ್ರಯಾಣಿಕರ ಪರದಾಟ
(ರಾಜ್ಯ ) ಜಿಲ್ಲೆ

ಹೆಚ್ಚಿನ ವಾಹನಗಳು ಅಲಭ್ಯ: ಬಸ್ ಪ್ರಯಾಣಿಕರ ಪರದಾಟ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿರುವದರಿಂದಾಗಿ ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಬರುವ ಬಸ್ ಏರಲು ಒಮ್ಮೆಲೆ ಓಡಿ ಹೋಗಿ ಹತ್ತುವದು ಕಂಡುಬಂದಿತ್ತು. ಇದರಿಂದಾಗಿ ವೃದ್ಧ ಪ್ರಯಾಣಿಕರು, ಮಕ್ಕಳು ಪರದಾಡುವಂತಾಯಿತು.
ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯನವರ ಸಮಾವೇಶ ಇರುವದರಿಂದಾಗಿ ಹೆಚ್ಚಿನ ವಾಹನಗಳು ಲಭ್ಯವಿರದ ಕಾರಣದಿಂದಾಗಿ ದೂರ ಊರುಗಳಿಗೆ ತೆರಳುವ ಬಸ್ ಕಾರ್ಯಾಚರಣೆ ರದ್ದು ಪಡಿಸಿದ್ದ ಹಿನ್ನೆಲೆಯಲ್ಲಿ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಪರದಾಡಿದರು. ಪ್ರತಿನಿತ್ಯ ಬೆಳಗ್ಗೆ 7.15 ಗಂಟೆಗೆ ಬಸವನಬಾಗೇವಾಡಿಯಿಂದ ಹುಬ್ಬಳ್ಳಿಗೆ ತೆರಳುವ ಬಸ್ ಗೆ ತೆರಳಲು ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಹುಬ್ಬಳ್ಳಿ ಬಸ್ ಗೆ ತೆರಳಲು ಕಾಯುತ್ತಿರುವದು ಕಂಡುಬಂದಿತ್ತು. 7.30 ಗಂಟೆಯಾದರೂ ಬಸ್ ಬಾರದೇ ಇರುವದನ್ನು ಗಮನಿಸಿದ ಪ್ರಯಾಣಿಕರು ಸಾರಿಗೆ ನಿಯಂತ್ರಕರನ್ನು ಕೇಳಿದಾಗ ಕೊಪ್ಪಳಕ್ಕೆ ಬಸ್ ಸಿಸಿ ಹೋಗಿವೆ. ದೂರದ ಊರುಗಳಿಗೆ ತೆರಳುವ ಬಸ್ ಕಾರ್ಯಾಚರಣೆ ಇಂದು ರದ್ದುಪಡಿಸಲಾಗಿದೆ. ಕೇವಲ ಸ್ಥಳೀಯ ಬಸ್ ಕಾರ್ಯಾಚರಣೆ ಮಾತ್ರ ಇಂದು ಇದೆ. ಪ್ರಯಾಣಿಕರು ಸಹಕರಿಸಬೇಕೆಂದು ಹೇಳಿದರು.
ಹುಬ್ಬಳ್ಳಿ ಬಸ್ ಗೆ ತೆರಳುವ ಒರ್ವ ವಿದ್ಯಾರ್ಥಿನಿಯ ತಂದೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಬಸ್ ರದ್ದು ಮಾಡಿರುವ ಕುರಿತು ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ತಿಳಿಸಬೇಕು. ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ನಾವು ಕೇಳಿದಾಗ ದೂರದ ಊರುಗಳಿಗೆ ತೆರಳುವ ಬಸ್ ಕಾರ್ಯಾಚರಣೆ ಇಂದು ರದ್ದುಪಡಿಸಿಲಾಗಿದೆ ಎಂದು ಹೇಳುವುದು ಸರಿಯಾದ ಕ್ರಮವಲ್ಲ. ಇದರಿಂದಾಗಿ ನನ್ನ ಮಗಳು ಹುಬ್ಬಳ್ಳಿ ಬಸ್ ಮೂಲಕ ಗದ್ದನಕೇರಿ ಕ್ರಾಸ್ ವರೆಗೆ ತೆರಳಿ ಬೆಳಗಾವಿಗೆ ಹೋಗಿ ಮಧ್ಯಾನ್ಹ ಕಾಲೇಜಿನ ತರಗತಿಗೆ ಹಾಜರಾಗಬೇಕು. ನೀವು ಪ್ರಯಾಣಿಕರಿಗೆ ಸರಿಯಾದ ಮಾಹಿತಿ ನೀಡಿದರೆ ಹುಬ್ಬಳ್ಳಿ ಬಸ್ ಗೆ ಕಾಯ್ದದೇ ಕೊಲ್ಹಾರ ಬಸ್ ಗೆ ಹೋಗಿ ಮುಂದೆ ಬೇರೆ ಬಸ್ ಮೂಲಕ ನನ್ನ ಮಗಳು ತೆರಳಲು ಅನುಕೂಲವಾಗುತ್ತಿತ್ತು. ಈಗ ಅವಳಿಗೆ ತಡವಾಗಿದೆ ಎಂದು ಅಧಿಕಾರಿಗಳ ಮುಂದೆ ತಮ್ಮ ಆಕ್ರೋಶ ಹೊರಹಾಕುವದು ಕಂಡುಬಂದಿತ್ತು.
ಇಂದು ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿರುವದರಿಂದಾಗಿ ಬಸ್ ನಿಲ್ದಾಣದಲ್ಲಿ ಹೆಚ್ಚು ಪ್ರಯಾಣಿಕರು ಕಂಡುಬಂದರು. ವಿಜಯಪುರ, ಕೊಲ್ಹಾರ, ನಿಡಗುಂದಿ, ದೇವರಹಿಪ್ಪರಗಿ ಸೇರಿದಂತೆ ಸ್ಥಳೀಯವಾಗಿ ಊರುಗಳಿಗೆ ತೆರಳುವ ಬಸ್ ಕಾರ್ಯಾಚರಣೆ ಎಂದಿನಂತೆ ಇರುವದು ಕಂಡುಬಂದಿತ್ತಾದರೂ ಬಸ್ ನಲ್ಲಿ ನೂಕ್ಕುನುಗ್ಗಲು ಕಂಡುಬಂದಿತ್ತು. ಪ್ರತಿಯೊಂದು ಬಸ್ಸಿನಲ್ಲಿ ಪ್ರಯಾಣಿಕರು ನಿಂತುಕೊಂಡು ಹೋಗುವದು ಕಂಡುಬಂದಿತ್ತು.
ಈ ಕುರಿತು ಬಸ್ ಘಟಕದ ವ್ಯವಸ್ಥಾಪಕ ಚಿತ್ತವಾಡಗಿ ಅವರನ್ನು ಸಂಪರ್ಕಿಸಿದಾಗ, ಕೊಪ್ಪಳದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು,ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಬಸ್ ಗಳು ಹೋಗಿವೆ. ವಾಹನಗಳ ಲಭ್ಯವಿರದ ಕಾರಣದಿಂದಾಗಿ ದೂರದ ಊರುಗಳಿಗೆ ತೆರಳುವ ಬಸ್ ಕಾರ್ಯಾಚರಣೆ ಇಂದು ರದ್ದುಪಡಿಸಲಾಗಿದೆ. ಸ್ಥಳೀಯ ಬಸ್ ಕಾರ್ಯಾಚರಣೆ ಎಂದಿನಂತೆ ಇದೆ. ಇದರ ಕುರಿತು ನಿಯಂತ್ರಕರ ಕೋಣೆಯ ಗೋಡೆಗೆ ಮಾಹಿತಿ ಅಂಟಿಸಲಾಗಿದೆ. ಇಂದು ಪ್ರಯಾಣಿಕರು ಸಹಕರಿಸಬೇಕು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.