ಕಲಕೇರಿಯ ಆದರ್ಶ ಪದವಿ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಆದಿಕವಿ ಮಹಾಋಷಿ ವಾಲ್ಮೀಕಿಯು ಬರೆದ ಮಹಾಕಾವ್ಯ ರಾಮಾಯಣವು ಭಾರತೀಯರಿಗೆ ಒಂದು ಪವಿತ್ರ ಗ್ರಂಥವಾಗಿದ್ದು, ನೀತಿ, ಧರ್ಮ, ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್.ಎಮ್.ಸಜ್ಜನ ಹೇಳಿದರು.
ಗ್ರಾಮದ ಆದರ್ಶ ಪ್ರಥಮದರ್ಜೆ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವೇಳೆ ಉಪನ್ಯಾಸಕಿ ಶ್ರೀದೇವಿ ಹೂಲಿ ಅವರು ಮಾತನಾಡಿ, ಪ್ರತಿಯೊಬ್ಬರೂ ವಾಲ್ಮೀಕಿ ರಾಮಾಯಣವನ್ನು ಓದಬೇಕು ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ತಿಳಿ ಹೇಳಬೇಕು ಅದು ಪ್ರಗತಿಪರ ಸಮಾಜಕ್ಕೆ ಸನ್ಮಾರ್ಗವನ್ನು ತೋರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವ ಸಮರ್ಪಣೆ ಮಾಡಲಾಯಿತು. ಈ ವೇಳೆ ಉಪನ್ಯಾಸಕರಾದ ಆಬಿದಅಲಿ ಸಾಲೋಡಗಿ, ಎಮ್.ಬಿ.ಸಜ್ಜನ, ಸದ್ದಾಮ ಬಡೇಘರ, ಅಬ್ದುಲ್ ಮುಶ್ರಿಫ್, ವಿನೋದ ನಂದಿಮಠ ಸೇರಿದಂತೆ ಇತರರು ಇದ್ದರು.

