ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ೧೧೦/೩೩/೧೧ಕೆವ್ಹಿ ಆಹೇರಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಸಿಂದಗಿ ನಗರ-೦೧ರ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಕೆಹೆಚ್ಬಿ ಕಾಲೋನಿ, ಬಂದಾಳ ಕ್ರಾಸ್, ವಿವೇಕಾನಂದ ವೃತ್ತ ಬಜಾರ್ ಏರಿಯಾ, ಕನಕದಾಸ ವೃತ್ತ, ಸಂಗಮೇಶ್ವರ ಕಾಲೋನಿ ಹಾಗೂ ಆದರ್ಶ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.೧೦ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.