Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬರದ ಕರಿ ನೆರಳು | ನೀರಿಲ್ಲದೇ ಕಮರುತ್ತಿರುವ ಬೆಳೆ | ಬಾಡುತ್ತಿರುವ ಅನ್ನದಾತರ ಮುಖ

ಆಲಮಟ್ಟಿ: ವಿಜಯಪುರ ಜಿಲ್ಲೆಯಾದ್ಯಂತ ಪ್ರಸ್ತುತ ಭೀಕರ ಬರದ ಕರಿ ನೆರಳಿನ ಕಾರ್ಮೋಡ ಆವರಿಸಿದ್ದು ಅನ್ನದಾತರು ತತ್ತರಗೊಂಡಿದ್ದಾರೆ. ಆಶಾಭಾವದಿಂದ ಭೂಮಿಯಲ್ಲಿ ಬಿತ್ತಿದ್ದ ಬೆಳೆಗಳು ನೀರಿಲ್ಲದೇ ಸೊರಗಿ ಕಮರಿ ಬೆಂಡಾಗುತ್ತಿವೆ. ಮೆಲ್ಲಗೆ ನಿತ್ರಾಣಾವಸ್ಥೆಯಲ್ಲಿ ನರಳಾಡಿ ಬಾಗಿ ಬಾಡುತ್ತಿವೆ. ಬೆಳೆಗಳ ಈ ದಯನೀಯ ಸ್ಥಿತಿಯನ್ನು ಕಣ್ಣಾರೆ ಕಂಡು ರೈತರ ಮೊಗಗಳು ಕಳಾಹೀನಗೊಂಡಿವೆ. ಕೂಡಲೇ ಸರ್ಕಾರ ಬೆಳೆಗಳ ನೆರವಿಗೆ ಧಾವಿಸಿ ಅನ್ನದಾತರನ್ನು ಉಳಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಒತ್ತಾಯಿಸಿದರು.
      ರೈತರ ಜಮೀನುಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಆಲಮಟ್ಟಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಕೃಷ್ಣಾ ಭಾಗ್ಯ ಜಲನಿಗಮ ಮುಖ್ಯ ಅಭಿಯಂತರರ ಕಚೇರಿಯವರೆಗೂ ತಮಟೆ ವಾದ್ಯದೊಂದಿಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಗಳು ಸಮರ್ಪಕವಾಗಿ ಆಗದೇ ಇರುವದರಿಂದ ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಕಾಲುವೆ ನೀರನ್ನು ನಂಬಿ ಬಿತ್ತನೆ ಮಾಡಿದ ರೈತರ ಜಮೀನಿಗೆ ಸಮರ್ಪಕವಾಗಿ ನೀರು ಹೋಗುತ್ತಿಲ್ಲ, ನೀರು ಪೂರೈಸಬೇಕು ಎಂದು ಅರವಿಂದ ಕುಲಕರ್ಣಿ ಆಗ್ರಹಿಸಿದರು.
    ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯಾಗದೇ ಇದ್ದರೂ ಮಹಾರಾಷ್ಟ್ರ ಪಶ್ಚಿಮಘಟ್ಟದಲ್ಲಿ ಮಳೆಯಾಗಿರುವದರಿಂದ ಕೃಷ್ಣೆ ಮತ್ತು ಉಪನದಿಗಳ ಮೂಲಕ ನೀರು ಹರಿದು ಬಂದ ಪರಿಣಾಮವಾಗಿ ಆಲಮಟ್ಟಿಯ ಲಾಲ್ಬಹಾದ್ದೂರ ಶಾಸ್ತ್ರಿ ಹಾಗೂ ನಾರಾಯಣಪುರದ ಬಸವಸಾಗರ ಜಲಾಶಯಗಳು ತುಂಬುವಂತಾಗಿದೆ, ಎಲ್ಲಾ ಕಾಲುವೆಗಳಿಗೂ ಸಮರ್ಪಕವಾಗಿ ನೀರು ಹರಿಸಿ ಕೆರೆಗಳನ್ನು ಭರ್ತಿಗೊಳಿಸಬೇಕು ಹಾಗೂ ಕಾಲುವೆಗಳ ಕೊನೆಯಂಚಿನ ರೈತರ ಜಮೀನಿಗೆ ನೀರು ತಲುಪುವಂತೆ ಕ್ರಮಕೈಗೊಳ್ಳಬೇಕು ಎಂದರು.
   ಈಗ ಜಲಾಶಯಗಳಿಗೆ ಒಳಹರಿವು ಇದ್ದು, ಅದನ್ನು ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ ಬಿಡದೇ ಸಮರ್ಪಕವಾಗಿ ಸಂಗ್ರಹಿಸಿಕೊಳ್ಳುವದರೊಂದಿಗೆ ಅಖಂಡ ಜಿಲ್ಲೆಯ ಎಲ್ಲಾ ಕಾಲುವೆಗಳ ಮೂಲಕ ಕೆರೆ, ಬಾಂದಾರಗಳನ್ನು ತುಂಬಿಸಬೇಕು ಎಂದು ಆಗ್ರಹಿಸಿದರು.
    ಮನವಿಯನ್ನು ಉಪಮುಖ್ಯ ಅಭಿಯಂತರ ಎ.ಸುರೇಶ ಹಾಗೂ ಮು.ಏ.ನೀ.ಯೋ.ವೃತ್ತ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ ಸ್ವೀಕರಿಸಿ ಮಾತನಾಡಿದ ಅವರು ತಮ್ಮ ಮನವಿಯನ್ನು ಮೇಲಾಧಿಕಾರಿಗಳ ಮೂಲಕ ಅಧ್ಯಕ್ಷರಿಗೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.
     ಪ್ರತಿಭಟನೆಯಲ್ಲಿ ವಿಠ್ಠಲ ಬಿರಾದಾರ, ಹೊನಕೇರಪ್ಪ ತೆಲಗಿ,  ಬಾಲಪ್ಪಗೌಡ ಲಿಂಗದಳ್ಳಿ, ಬಸನಗೌಡ ಬಿರಾದಾರ, ಮಲ್ಲನಗೌಡ ಪಾಟೀಲ, ಮಲ್ಲನಗೌಡ ಬಿರಾದಾರ, ಹಾಜಿಮಲಂಗ ಕೊಡಗಾನೂರ, ಭೀಮನಗೌಡ ಬಿರಾದಾರ, ವಿರಪಾಕ್ಷಪ್ಪ ಬಿರಾದಾರ, ಶ್ರೀಶೈಲ ಸಾಸನೂರ, ದೇವು ಪೋಲೆಶಿ, ಬಸವರಾಜ ಹಂದ್ರಾಳ ಮೊದಲಾದವರಿದ್ದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.