Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ

ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ

ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೀಪಾವಳಿ ಬಳಿಕ ನನ್ನ ರಾಜಕೀಯ ಪಟಾಕಿ ಸದ್ದು :ಭೂಸನೂರ
(ರಾಜ್ಯ ) ಜಿಲ್ಲೆ

ದೀಪಾವಳಿ ಬಳಿಕ ನನ್ನ ರಾಜಕೀಯ ಪಟಾಕಿ ಸದ್ದು :ಭೂಸನೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನೆರೆ ಹಾವಳಿಯಿಂದಾಗಿ ತತ್ತರಿಸಿದ ಈ ಭಾಗಕ್ಕೆ ವಿಶೇಷ ಪ್ಯಾಕೇಜ ಬಿಡುಗಡೆ ಮಾಡಬೇಕು. ಅತಿವೃಷ್ಟಿಯಿಂದ ಹಾನಿಯಾದ ರೈತರಿಗೆ ೨೫ಸಾವಿರ ಪರಿಹಾರ ಕೊಡಬೇಕು. ಮಳೆಯಿಂದ ಬಿದ್ದ ಮನೆಗೆ ಬಿಜೆಪಿ ಸರಕಾರ ಕೊಟ್ಟಂತೆ ೫ಲಕ್ಷ ಕೊಡಬೇಕು. ಭೀಮಾ ನದಿ ಪ್ರವಾಹ ಬಾದಿತ ಗ್ರಾಮಗಳನ್ನು ಸ್ಥಳಾಂತರಿಸಿ ಶಾಶ್ವತ ವಸತಿ ಸೌಲಭ್ಯ ಒದಗಿಸಿಕೊಡಬೇಕು. ಬಸವ ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು. ಬಹುವಾರ್ಷಿಕ ಬೆಳೆಗಳಿಗೆ ಎಕರೆಗೆ ೧ಲಕ್ಷ ರೂ. ನೀಡಬೇಕು. ಸಿಂದಗಿ, ಆಲಮೇಲ ತಾಲೂಕಿನ ರಸ್ತೆ-ಗುಂಡಿಗಳನ್ನು ತಕ್ಷಣದಲ್ಲಿ ಮುಚ್ಚಿಸಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಒತ್ತಾಯಿಸಿದರು.
ಸಿಂದಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ವರುಣಾರ್ಭಟದಿಂದ ಕಬ್ಬಿನ ಬೆಳೆ ಶೇ.೨೦ರಷ್ಟು ಹಾನಿಯಾದದ್ದನ್ನು ಹೊರತು ಪಡಿಸಿದರೆ ಉಳಿದೆಲ್ಲ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಕೇಂದ್ರ ಸರಕಾರ ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿಪಡಿಸಿದೆ. ಹಾಗೆಯೇ ರಾಜ್ಯ ಸರಕಾರವು ಪ್ರತಿ ಟನ್‌ಗೆ ಕಬ್ಬಿಗೆ ೪೫೦೦ ರೂ. ಘೋಷಣೆ ಮಾಡಬೇಕು. ಉಳಿದೆಲ್ಲ ಬೆಳೆ ಹಾನಿಗೆ ಗರಿಷ್ಟ ಪರಿಹಾರ ಶೀಘ್ರವೇ ಬಿಡುಗಡೆ ಮಾಡಬೇಕು ಆಗ್ರಹಿಸಿದರು. ಗೋಲಗೇರಿ ಭಾಗದ ೧೫ರಸ್ತೆಗಳಲ್ಲಿ ಒಂದೇ ಕಿಮೀ. ರಸ್ತೆಯನ್ನು ಹಾಲಿ ಶಾಸಕರ ಅವಧಿಯಲ್ಲಿ ಆಗಿದ್ದನ್ನು ಸಾಬೀತು ಪಡಿಸಿದರೆ ನಾನು ರಾಜೀನಾಮೆ ಕೊಡುತ್ತೇನೆಂದು ಸವಾಲು ಹಾಕಿದ್ದೇನೆ. ಆದರೆ ಶಾಸಕರು ಈ ಸವಾಲನ್ನು ಸ್ವೀಕರಿಸಿಲ್ಲ. ದೀಪಾವಳಿಯ ಹಬ್ಬದ ಪಟಾಕಿ ಸದ್ದು ಮುಗಿದ ನಂತರ ನನ್ನ ರಾಜಕೀಯ ಪಟಾಕಿ ಸದ್ದು ಮಾಡಲಿದೆ ಎಂದು ಹೇಳಿದರು.
ಈ ವೇಳೆ ಮಾಜಿ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ, ಗುರು ತಳವಾರ ಮಾತನಾಡಿ, ಬಿಜೆಪಿ ರೈತ ಮೋರ್ಚಾ ಮತ್ತು ಮಂಡಲದ ವತಿಯಿಂದ ಮಾಜಿ ಶಾಸಕ ರಮೇಶ ಭುಸನೂರ ಅವರ ನೇತೃತ್ವದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅ.೧೪ರಿಂದ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ೪ಗಂಟೆಗೆ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪೀರು ಕೆರೂರ, ಗುರು ತಳವಾರ, ಅಶೋಕ ನಾರಾಯಣಪೂರ, ಪ್ರಶಾಂತ ಕದ್ದರಕಿ, ಬಂಗಾರೆಪ್ಪಗೌಡ ಬಿರಾದಾರ, ಸಿದ್ದರಾಮ ಆನಗೊಂಡ, ಮಲ್ಲಿಕಾರ್ಜುನ ಸಾವಳಸಂಗ, ಎಸ್.ಎನ್.ಹಿರೇಮಠ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ

ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ

ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು

ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ
    In (ರಾಜ್ಯ ) ಜಿಲ್ಲೆ
  • ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ
    In (ರಾಜ್ಯ ) ಜಿಲ್ಲೆ
  • ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು
    In (ರಾಜ್ಯ ) ಜಿಲ್ಲೆ
  • ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್ ಒದಗಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯ ಪರಿಸರದಲ್ಲಿ ಗಣನೀಯ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಬಸ್‌ನಿಲ್ದಾಣದಲ್ಲಿ ಮೂಲಸೌಕರ್ಯ ಒದಗಿಸಲು ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಭಾಷಾಜ್ಞಾನ & ಸಂವಹನ ಕೌಶಲಗಳ ಸಂಪಾದನೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಅ.೨೩ಕ್ಕೆ ರಾಣಿ ಚನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.