Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ

ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ

ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆಹಾನಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್ ಒದಗಿಸಿ
(ರಾಜ್ಯ ) ಜಿಲ್ಲೆ

ಬೆಳೆಹಾನಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್ ಒದಗಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಬೆಳೆ ಸಮೀಕ್ಷೆ ಅತ್ಯಂತ ನಿರ್ಲಕ್ಷ್ಯತನದಿಂದ ನಡೆಯುತ್ತಿದೆ, ಪರಿಹಾರ ಹಣವೂ ಸಹ ಅತ್ಯಲ್ಪ. ಹೀಗಾಗಿ ಕೂಡಲೇ ಮಹಾರಾಷ್ಟ್ರ ಮಾದರಿಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಬೆಳೆಹಾನಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪರಿಹಾರ ಅತ್ಯಂತ ಅತ್ಯಲ್ಪ, ರೈತರಿಗೆ ಯಾವ ಪ್ರಯೋಜನಕ್ಕೂ ಬಾರದಾಗಿದೆ, ರಾಜ್ಯ ಸರ್ಕಾರ ಕೇವಲ ೨೫೦೦ ಕೋಟಿ ರೂ. ಮಾತ್ರ ಪರಿಹಾರ ಬಿಡುಗಡೆ ಮಾಡಿದೆ, ಆದರೆ ನೆರೆಯ ಮಹಾರಾಷ್ಟ್ರ ಸರ್ಕಾರ ೩೧ ಸಾವಿರ ಕೋಟಿ ರೂ. ಮಹಾರಾಷ್ಟ್ರ ಪರಿಹಾರದ ಪ್ಯಾಕೇಜ್ ನೀಡಿದೆ. ಅಲ್ಲದೇ, ಪ್ರತಿ ಹೆಕ್ಟೇರ್ ಗೆ ೩೭ ಸಾವಿರ ಬೆಳೆ ಪರಿಹಾರ ಘೋಷಿಸಿದೆ, ಇದೇ ಮಾದರಿಯಲ್ಲಿ ನಮ್ಮ ಸರ್ಕಾರ ಸಹ ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ೭.೬೦ ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಕಬ್ಬು ಹೊರತು ಪಡಿಸಿ ಎಲ್ಲ ಬೆಳೆಗಳು ಹಾನಿಯಾಗಿವೆ. ಹೀಗಾಗಿ ಸಂಪೂರ್ಣವಾಗಿ ಬೆಳೆ ಹಾನಿಯಾಗಿದೆ ಎಂದು ಘೋಷಣೆ ಮಾಡಿದರೆ, ಕೇಂದ್ರ ಎನ್‌ಡಿಆರ್‌ಎಫ್, ವಿಮೆ ಕಂಪನಿಗಳಿಂದ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ನಡಹಳ್ಳಿ ಹೇಳಿದರು.
ಎರಡು ಗ್ರಾಮ ಪಂಚಾಯತಿಗೆ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಇದ್ದಾರೆ, ಇದರಿಂದ ಸಮೀಕ್ಷೆ ಸಮರ್ಪಕವಾಗಿ ನಡೆಯಲು ಸಾಧ್ಯವೇ? ಸಮೀಕ್ಷೆ ಹೆಸರಲ್ಲಿ ರೈತರ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸರ್ಕಾರದ ಈ ನಿರ್ಲಕ್ಷ್ಯ ನೀತಿಯ ವಿರುದ್ಧ ಬಿಜೆಪಿ ಪ್ರಬಲ ಜನಾಂದೋಲನ ರೂಪಿಸಲಿದ್ದು, ನಾಳೆಯಿಂದಲೇ ಸಿಂದಗಿಯಿಂದ ಬೃಹತ್ ಹೋರಾಟ ಆರಂಭವಾಗಲಿದೆ, ಪ್ರತಿ ತಾಲೂಕು ಕೇಂದ್ರದ ಮುಂದೆ ಸಾಂಕೇತಿಕವಾಗಿ ಹೋರಾಟ ಮಾಡಲಾಗುತ್ತದೆ. ಅಲ್ಲದೇ, ಹೋಬಳಿ ಸೇರಿ ಎಲ್ಲ ಹಂತದಲ್ಲೂ ನಿರಂತರವಾಗಿ ಹೋರಾಟ, ಧರಣಿ ನಡೆಸಲಾಗುತ್ತದೆ ಎಂದರು.
ಕರ್ನಾಟಕಕ್ಕೆ ಅತಿವೃಷ್ಟಿ, ಅನಾವೃಷ್ಟಿ ಹೊಸದಲ್ಲ. ಕಾಂಗ್ರೆಸ್, ಬಿಜೆಪಿ ಸರ್ಕಾರದ ಅವಧಿಯಲ್ಲೂ ಪ್ರಕೃತಿ ವಿಕೋಪವಾಗಿ ನಡೆದಿವೆ. ಬಿಜೆಪಿ ಸರ್ಕಾರದಲ್ಲಿ ಜನರು ಹಾಗೂ ರೈತರಿಗೆ ಸ್ಪಂದಿಸಿ ಪರಿಹಾರ ಒದಗಿಸುವ ಕೆಲಸ ಸಹ ನಡೆದಿತ್ತು. ೨೦೦೯ರಲ್ಲಿ ಪ್ರವಾಹ ಸಂದರ್ಭದಲ್ಲಿ ಅನೇಕ ಹಳ್ಳಿಗಳ ಸ್ಥಳಾಂತರ ಮಾಡಿರುವ ಕಾರ್ಯವನ್ನೂ ಮಾಡಲಾಗಿದೆ. ೨೦೨೦ರಲ್ಲಿ ಮಳೆ ಸಂದರ್ಭದಲ್ಲೂ ಬಿಜೆಪಿ ಸರ್ಕಾರ ರೈತರಿಗೆ ಉತ್ತಮವಾಗಿ ಸ್ಪಂದಿಸಿತ್ತು. ಆದರೆ ಈ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದೆ ಎಂದರು.
ಈಗ ಮಳೆ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದೆ. ಹತ್ತು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ. ಸಿಎಂ ಖುದ್ದಾಗಿ ಒಂದೇ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಮೂರು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿರುವುದಾಗಿ ಹೇಳಿ ಸಿಎಂ ಹೇಳಿದ್ದಾರೆ, ಇದು ಕಾಟಾಚಾರಕ್ಕಷ್ಟೇ ಸೀಮಿತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ೩೮.೪೦ ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಆದರೆ, ಸರ್ಕಾರ ೧೦ ಲಕ್ಷ ಹೆಕ್ಟೇರ್ ಬೆಳೆ ನಷ್ಡವಾಗಿದೆ ಎಂದು ಹೇಳಿದೆ. ಆದರೆ, ವಾಸ್ತವವಾಗಿ ಹೆಚ್ಚಿನ ಬೆಳೆ ನಷ್ಟವಾಗಿದೆ ಎಂದರು.
ಈ ಬಾರಿ ರೈತರು ಸಂಕಷ್ಟಕ್ಕೆ ಸಿಲುಕಿರುವಷ್ಟು ಯಾವತ್ತೂ ಸಿಲುಕಿರಲಿಲ್ಲ. ವಿಕೋಪದಲ್ಲಿ ರೈತರು ಮೃತಪಟ್ಟರೂ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿಗಳಾಗಲಿ ಅಥವಾ ತಾಲೂಕುಮಟ್ಟದ ಅಧಿಕಾರಿಗಳು ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಸಹ ಹೇಳಿಲ್ಲ ಎಂದರು.

ಸಚಿವರೊಂದಿಗೆ ಧರಣಿಗೆ ಸಿದ್ಧ

ಸಂಪೂರ್ಣವಾಗಿ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಲಿ. ಎನ್ ಡಿಆರ್ ಎಫ್ ಪ್ರಕಾರ ಕೇಂದ್ರ ಸರ್ಕಾರ ಪರಿಹಾರ ಕೊಡದೇ ಹೋದರೆ ನಾವು ಸಹ ಸಚಿವರೊಂದಿಗೆ ಧರಣಿ ಕೊಡಲು ಸಿದ್ದರಿದ್ದೇವೆ ಎಂದು ನಡಹಳ್ಳಿ ಘೋಷಿಸಿದರು. ಬೆಳೆಹಾನಿಯಾಗಿರುವ ಬಗ್ಗೆ ಸರಿಯಾದ ವರದಿ ತಯಾರಿಸಿ ಕೇಂದ್ರಕ್ಕೆ ಕಳುಹಿಸಿದರೆ, ಪರಿಹಾರ ಕಲ್ಪಿಸಲು ನಾವು ಸಹ ಒತ್ತಡ ತರಲು ಸಹಕಾರಿಯಾಗಲಿದೆ. ಅಧ್ಯಯನ ತಂಡ ಕಳುಹಿಸಲು ಸಹ ರಾಜ್ಯ ಸರ್ಕಾರ ಇದುವರೆಗೂ ಪತ್ರ ಬರೆದಿಲ್ಲ ಎಂದು ನಡಹಳ್ಳಿ ದೂರಿದರು.

BIJAPUR NEWS patil public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ

ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ

ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು

ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅ.16ರ ವಿಜಯಪುರ ಬಂದ್‌ಗೆ ಆಮ್ ಆದ್ಮಿ ಪಾರ್ಟಿ ಬೆಂಬಲ
    In (ರಾಜ್ಯ ) ಜಿಲ್ಲೆ
  • ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆಗೆ ಕಾಂಗ್ರೆಸ್ ಚಾಲನೆ
    In (ರಾಜ್ಯ ) ಜಿಲ್ಲೆ
  • ಸಿದ್ದೇಶ್ವರ ಬ್ಯಾಂಕ್ ಚುನಾವಣೆ: ಹಳೆಯ ಪೆನಲ್‌ಗೆ ಭರ್ಜರಿ ಗೆಲುವು
    In (ರಾಜ್ಯ ) ಜಿಲ್ಲೆ
  • ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್ ಒದಗಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯ ಪರಿಸರದಲ್ಲಿ ಗಣನೀಯ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಬಸ್‌ನಿಲ್ದಾಣದಲ್ಲಿ ಮೂಲಸೌಕರ್ಯ ಒದಗಿಸಲು ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಭಾಷಾಜ್ಞಾನ & ಸಂವಹನ ಕೌಶಲಗಳ ಸಂಪಾದನೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಅ.೨೩ಕ್ಕೆ ರಾಣಿ ಚನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.