Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿಭೆ ಕಳೆದುಕೊಂಡು ಬಡವಾದ ಬಸವನಾಡು :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಪ್ರತಿಭೆ ಕಳೆದುಕೊಂಡು ಬಡವಾದ ಬಸವನಾಡು :ಸಚಿವ ಶಿವಾನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಂಗಕರ್ಮಿ ರಾಜು ತಾಳಿಕೋಟೆ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ (ವಿಜಯಪುರ): ರಂಗದ ಮೇಲೆ ಹಾಸ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಜನಮನ್ನಣೆ ಗಳಿಸಿದ್ದ ರಾಜು ತಾಳಿಕೋಟಿ ಎಂಬ ಅದ್ಬುತ ಕಲಾವಿದ ನಗುತ್ತಲೇ ಜೀವನ ರಂಗಕ್ಕೆ ವಿದಾಯ ಹೇಳಿದ್ದಾರೆ. ರಂಗಭೂಮಿ ಇಂಥ ಅದ್ಭುತ ಪ್ರತಿಭೆಯನ್ನು ಕಳೆದುಕೊಂಡು ಬಡವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ವಿಷಾದಿಸಿದರು.
ನಿಧನರಾಗಿರುವ ರಂಗಕರ್ಮಿ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ಅಂತಿಮ ದರ್ಶನ ಪಡೆದು ಸಿಂದಗಿ ಕನ್ನಡ ಸಾಹಿತ್ಯ ಬಳಗ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಸಚಿವರು, ಹಾಸ್ಯದ ಮೂಲಕ ಸಮಾಜದ ಲೋಪ ತಿದ್ದುವ ಮಹತ್ವದ ಸೇವೆ ಮಾಡಿದ್ದರು. ಸಾವಿರಾರು ಪ್ರತಿಭೆಗಳಿಗೆ ಮಾರ್ಗದರ್ಶನ ಮಾಡಿ, ರಂಗಭೂಮಿ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದರು ಎಂದು ವಿವರಿಸಿದರು.
ಬಡತನದಲ್ಲಿ ಹುಟ್ಟಿ, ತಾಳಿಕೋಟೆಯ ಶ್ರೀಖಾಸ್ಗತೇಶ್ವರ ಮಠದಲ್ಲಿ ತ್ರಿವಿಧ ದಾಸೋಹ ಮಾಡಿ, ಸ್ವಂತ ನಾಟಕ ಕಂಪನಿ ಕಟ್ಟಿ ಬೆಳೆಸಿದ್ದರು. ತಮ್ಮ ಕಷ್ಟದ ಮಧ್ಯೆಯೇ ಕುಟುಂಬದ ನಿರ್ವಹಣೆ ಮಾಡುತ್ತ, ಸಾಮಾಜಿಕ ಸೇವೆಯಲ್ಲೂ ತೊಡಗಿದ್ದರು ಎಂದು ವಿವರಿಸಿದರು.
ಹುಟ್ಟು ಆಕಸ್ಮಿಕವಾದರೂ ಸಾವು ನಿಶ್ಚಿತ. ಆದರೆ ಬದುಕಿರುವ ಮಾಡುವ ಕಾರ್ಯಗಳು, ಸಾಧನೆಗಳು ಶಾಶ್ವತವಾಗಿ ಜನರ ಮನಗಳಲ್ಲಿ ಉಳಿಯುತ್ತವೆ. ಹಾಸ್ಯ ಕಲಾವಿದರಾಗಿ ವಿಜಯಪುರ ಜಿಲ್ಲೆ ಮಾತ್ರವಲ್ಲ ಇಡೀ ಉತ್ತರ ಕರ್ನಾಟಕಕ್ಕೆ ಸಾಧನೆಯಿಂದ ಕೀರ್ತಿ ತಂದಿದ್ದರು ಎಂದು ವಿವರಿಸಿದರು.
ನನ್ನ ಒಡನಾಡಿಯೂ ಆಗಿದ್ದ ರಾಜು, ಬಸವನಬಾಗೇವಾಡಿ ಕ್ಷೇತ್ರದಲ್ಲೂ ಹಲವು ಕಾರ್ಯಕ್ರಮಗಳಲ್ಲಿ ನನ್ನೊಂದಿಗೆ ಭಾಗವಹಿಸಿದ್ದರು. ಅವರ ಅಗಲಿಕೆ ನಾಡಿನ ರಂಗಭೂಮಿ, ಸಾಂಸ್ಕೃತಿಕ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ರಾಜು ಅವರ ಸಾಧನೆಯನ್ನು ಮುಂಸಿನ ಪೀಳಿಗೆ ಸದಾ ಸ್ಮರಿಸುವಂತೆ ಚಿರಸ್ಥಾಯಿ ಆಗುವಂತೆ ಮಾಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಎಲ್.ಬಿ.ಶೇಖ ಮಾಸ್ತರ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಸಿದ್ದಲಿಂಗ ಚೌಧರಿ, ಬಸವರಾಜ ಪಂಚಗಲ್, ಮಹಾಂತೇಶ ಗಜೇಂದ್ರಗಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!
    In ವಿಶೇಷ ಲೇಖನ
  • ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..
    In ವಿಶೇಷ ಲೇಖನ
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
  • ಕಂಪೆನಿ ಸರ್ಕಾರಕ್ಕೆ ಸಿಂಹ ಸ್ವಪ್ನವಾಗಿದ್ದ ದೇಶಭಕ್ತ ಸಂಗೊಳ್ಳಿ ರಾಯಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.