ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಪ್ರತಿಭಟನಾ ಮೆರವಣಿಗೆ ಕೈಗೊಂಡು, ರಾಷ್ಟ್ರೀಯ ಹೆದ್ದಾರಿ ತಡೆದು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಸೋಮವಾರ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಸಭೆ ಸೇರಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹೊರಟು ಮೊಹರೆ ಹಣಮಂತ್ರಾಯ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾ. ಅಂಬೇಡ್ಕರ್ ವೃತ್ತ ತಲುಪಿ ಹೆದ್ದಾರಿಯಲ್ಲಿ ಧರಣಿ ಕುಳಿತರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ, ರಾಜಕುಮಾರ ಸಿಂದಗೇರಿ, ರಾಘವೇಂದ್ರ ಗುಡಿಮನಿ, ರಮೇಶ ದಳವಾಯಿ, ಹುಯೋಗಿ ತಳ್ಳೋಳ್ಳಿ, ಅಜೀಜ್ ಯಲಗಾರ, ಲಕ್ಕಪ್ಪ ಬಡಿಗೇರ ಮಾತನಾಡಿದರು.
ಬಸವರಾಜ ಇಂಗಳಗಿ, ಶರಣು ಜಮಖಂಡಿ, ಭೀರು ಹಳ್ಳಿ, ಪರಶುರಾಮ ನಾಯ್ಕೋಡಿ, ಬಸವರಾಜ ತಳಕೇರಿ, ಇಕ್ಬಾಲ್ ಬಿಜಾಪೂರ, ಚಂದ್ರಶೇಖರ ಕಡಕೋಳ, ನಜೀರ ಬೀಳಗಿ, ಮಲ್ಕಪ್ಪ ಬಾಗೇವಾಡಿ, ನವೀನ ಗುತ್ತೇದಾರ, ದೇವೇಂದ್ರ ಹಡಪದ, ಯಮನಪ್ಪ ಭೂತಾಳಿ, ಬಸವರಾಜ ಕಡಕೋಳ, ಪ್ರಕಾಶ ಶಾಂತಗಿರಿ, ಶರಣು ಪೂಜಾರಿ, ಪರಶುರಾಮ ಬಡಿಗೇರ, ಶಿವು ವಾಲೀಕಾರ, ಶಿವು ಹೊಸಮನಿ, ರಾಜು ರಾಠೋಡ, ಮಹೇಶ ಗುಡಿಮನಿ, ಮಾಂತೇಶ ಚಲವಾದಿ, ಪ್ರಕಾಶ ತಳ್ಳಿಕೇರಿ ಇದ್ದರು.