Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಪರಿಹಾರ ಸಿಗೋವರೆಗೂ ಧರಣಿ ಕೈಬಿಡೊಲ್ಲ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ರೈತರಿಗೆ ಪರಿಹಾರ ಸಿಗೋವರೆಗೂ ಧರಣಿ ಕೈಬಿಡೊಲ್ಲ :ಸಂಸದ ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಮಂಡಲ ಮತ್ತು ರೈತ ಮೋರ್ಚಾ ವತಿಯಿಂದ ಅಹೋರಾತ್ರಿ ಧರಣಿ | ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅತಿವೃಷ್ಟಿಯಿಂದ ಉತ್ತರ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರ ಬಗ್ಗೆ ಯೋಚನೆ ಮಾಡದೆ ಅಧಿಕಾರಕ್ಕಾಗಿ ಸಭೆ ಮಾಡುತ್ತಿರುವ ಸರಕಾರವನ್ನು ನನ್ನ ನಿರಂತರ ೪೫ ವರ್ಷಗಳ ರಾಜಕಾರಣದಲ್ಲಿ ಇಂತಹ ಹೊಲಸು ಸರಕಾರವನ್ನು ನಾನು ಎಂದು ನೋಡಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಂದಗಿ ಪಟ್ಟಣದ ತಹಶೀಲ್ದಾರ್ ಆವರಣದಲ್ಲಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀವು ಏನಾದರೂ ಮಾಡಿಕೊಂಡ ಹಾಳು ಬಾವಿಗೆ ಬಿಳಿ, ರೈತರ ಕಣ್ಣಿರಿನಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬಿಟ್ಟು ನೀವು ಕುರ್ಚಿಗಾಗಿ ಬಡೆದಾಡುತ್ತಿರುವುದು ಸರಿಯಲ್ಲ. ರೈತರು ಬೆಳೆದ ಬೆಳೆಯಲ್ಲ ಹಾಳಾಗಿ ಹೋಗಿದೆ. ಸರಕಾರದ ಬೆಳೆಹಾನಿ ಸಮೀಕ್ಷೆಯ ವರದಿ ತಪ್ಪಾಗಿದ್ದು, ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕು. ರೈತರಿಗೆ ಪರಿಹಾರ ಸಿಗುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಜಾತಿ ಜಾತಿಗಳ ಮಧ್ಯದಲ್ಲಿ ಜಗಳ ಹಚ್ಚುವ ಜಾತಿಗಣತಿಯನ್ನು ಕೈಬಿಟ್ಟು, ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಬಿಡುಗಡೆಗೊಳಿಸಿ ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಇಡೀ ರಾಜ್ಯದ ಬೊಕ್ಕಸ ಬರಿದಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡು ರಾಜ್ಯ ಸರಕಾರ ದಿವಾಳಿಯತ್ತ ಸಾಗುತ್ತಿದೆ. ೬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರಕಾರದ ನೀತಿಯನ್ನು ಖಂಡಿಸಿ ಅಹೋರಾತ್ರಿ ಧರಣಿ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಬೆಳೆಹಾನಿಯ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ನಮ್ಮ ರೈತರಿಗೆ ದೊರೆಯಬೇಕಾದ ಬೆಳೆಹಾನಿ ಪರಿಹಾರ ದೊರೆಯುತ್ತಿಲ್ಲ. ನೆರೆಯ ಮಹಾರಾಷ್ಟç ಸರ್ಕಾರ ೩೧ಸಾವಿರ ಕೋಟಿ ಬೆಳೆಹಾನಿ ಪರಿಹಾರ ಘೋಷಣೆ ಮಾಡಿದೆ. ಆದರೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಘೋಷಣೆ ಮಾಡಿದ್ದು ಮಾತ್ರ ಕೇವಲ ೨ಸಾವಿರ ಕೋಟಿ ಪರಿಹಾರ ಮಾತ್ರ ನೀಡಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ರೈತ ಮೋರ್ಚಾ ಅಧ್ಯಕ್ಷ ಪೀರೂ ಕೆರೂರ, ಮಲ್ಲನಗೌಡ ಪಾಟೀಲ, ಈರಣ್ಣ ರಾವೂರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಎಂ.ಎಸ್.ಮಠ, ಮಲ್ಲಿಕಾರ್ಜುನ ಸಾವಳಸಂಗ, ಪ್ರಶಾಂತ ಕದ್ದರಕಿ, ಗುರು ತಳವಾರ, ಎಸ್.ಎನ್.ಹಿರೇಮಠ, ಬಸವರಾಜ ಐರೋಡಗಿ, ಕಲ್ಯಾಣಿ ಬಿರಾದಾರ, ಸಿದ್ರಾಮ ಆನಗೊಂಡ, ಶಿಲ್ಪಾ ಕುದರಗೊಂಡ, ರಾಜಶೇಖರ ಪೂಜಾರಿ, ಅಶೋಕ ನಾರಾಯಣಪೂರ, ಬಂಗಾರೆಪ್ಪ ಬಿರಾದಾರ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು, ವಿವಿಧ ತಾಲೂಕಿನ ರೈತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.