Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಕತ್ತಿದ್ದರೆ ಬೆಳೆಹಾನಿ ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸಿ
(ರಾಜ್ಯ ) ಜಿಲ್ಲೆ

ತಾಕತ್ತಿದ್ದರೆ ಬೆಳೆಹಾನಿ ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಸಕ ಅಶೋಕ ಮನಗೂಳಿ ಗೆ ಮಾಜಿ ಶಾಸಕ ರಮೇಶ ಭೂಸನೂರ ಸವಾಲು

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಮ್ಮ ಮಾತುಗಳಿಗೆ ತಿರುಚಿ ಮಾತನಾಡುವುದನ್ನು ಬಿಟ್ಟು ವಾಸ್ತವಿಕ ವರದಿಯನ್ನು ಜನರಿಗೆ ತಿಳಿಸಬೇಕು. ನಿಮಗೆ ತಾಕತ್ತು ದಮ್ಮು ಇದ್ದರೆ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ದೀಪಾವಳಿ ಬಳಿಕ ಕಬ್ಬು ನುರಿಸುವ ಕಾರ್ಯವನ್ನು ರೈತರು ಪ್ರಾರಂಭ ಮಾಡುತ್ತಾರೆ. ಅದಕ್ಕಾಗಿ ತಾಲೂಕಿನಾದ್ಯಂತ ಬಿದ್ದಿರುವ ರಸ್ತೆ-ಗುಂಡಿಗಳನ್ನು ಮುಚ್ಚಿಸುವಂತ ಕಾರ್ಯ ನಿಮ್ಮಿಂದಾಗಲಿ ಎಂದು ಮಾಜಿ ಶಾಸಕ ರಮೇಶ ಭೂಸನೂರ ಕಿಡಿಕಾರಿದರು.
ಸಿಂದಗಿ ಪಟ್ಟಣದ ತಹಶೀಲ್ದಾರ್ ಆವರಣದಲ್ಲಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡ ಅಹೋರಾತ್ರಿ ೩ನೆಯ ದಿನದ ಧರಣಿ ಸತ್ಯಾಗ್ರಹದ ನೇತೃತ್ವವನ್ನು ವಹಿಸಿ ಮಾತನಾಡಿದ ಅವರು, ಬಿಪಿಎಲ್ ರೇಷನ್ ಕಾರ್ಡ್ನ್ನು ರದ್ದು ಮಾಡುವ ಕಾರ್ಯಕ್ಕೆ ಸರಕಾರ ಕೈಹಾಕಿದ್ದು ಖಂಡನೀಯ. ೨೦೦೯ ಮತ್ತು ೨೦೧೯ರಲ್ಲೂ ಬಂದಿತ್ತು. ಅಂದಿನ ಬಿಜೆಪಿ ಸರಕಾರ ೧ಲಕ್ಷ ಕೋಟಿ ಬಜೆಟ್‌ನಲ್ಲಿ ಸಿಂದಗಿ ತಾಲೂಕಿನ ೮ ಹಳ್ಳಿಗಳನ್ನು ನನ್ನ ಅವಧಿಯಲ್ಲಿ ಸ್ಥಳಾಂತರವನ್ನು ಮಾಡಿದ್ದೇನೆ. ಪ್ರಸ್ತುತ ೩ಲಕ್ಷ ಕೋಟಿಗೂ ಅಧಿಕ ಬಜೆಟ್‌ಯಿದ್ದರೂ ಶಾಸಕರೇ ನಿಮ್ಮಿಂದ ಒಂದು ಕುಮಸಗಿ ಗ್ರಾಮ ಸ್ಥಳಾಂತರ ಮಾಡುವುದು ಆಗುತ್ತಿಲ್ಲ. ರಾಜ್ಯ ಸರಕಾರದ ಬೊಕ್ಕಸ ಖಾಲಿಯಾಗಿ ಹಣವಿಲ್ಲ, ಸಮೀಕ್ಷೆಗೆ ಕೇಂದ್ರ ನಿಯೋಗ ಕಳಿಸಿ ಕೇಂದ್ರ ಸರಕಾರ ಸಹಾಯ ಮಾಡಬೇಕೆಂದು ಪತ್ರ ಬರೆಯಿರಿ. ಏಕೆಂದರೆ ರಾಜ್ಯ ಸರಕಾರದಿಂದ ವಾಸ್ತವ ಸಮೀಕ್ಷೆ ಮಾಡಲು ಸಾಧ್ಯವಾಗದೆ ಇರುವುದರಿಂದ ಸುಖಾ ಸುಮ್ಮನೆ ಬಿಜೆಪಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತರಿದ್ದಾರೆ ಎಂಬುದನ್ನು ಮಾತನಾಡುವುದು ಬೀಡಬೇಕು ಎಂದು ಕುಟುಕಿದರು.
ಸಿಂದಗಿ ತಾಲೂಕಿನಲ್ಲಿ ತೊಗರಿ ೧೬೩೦೦ ಹೆಕ್ಟರ್, ಹತ್ತಿ ೩೦೫೦೦ ಹೆಕ್ಟರ್, ಮೆಕ್ಕೆಜೋಳ ೧೩೦೦ಹೆಕ್ಟರ್, ಆಲಮೇಲದಲ್ಲಿ ತೊಗರಿ ೬೦೬೫ ಹೆಕ್ಟರ್, ಹತ್ತಿ ೨೫ಸಾವಿರ ಹೆಕ್ಟರ್, ಮೆಕ್ಕೆಜೋಳ ೨೮೦ ಹೆಕ್ಟರ್ ಬಿತ್ತನೆಯಾಗಿದೆ. ಒಟ್ಟಾರೆಯಾಗಿ ಆಲಮೇಲ ಮತ್ತು ಸಿಂದಗಿ ಸೇರಿ ೭೯೫೦೦ ಹೆಕ್ಟರ್ ಆಗಿದೆ. ೨೨,೫೦೦ ಹೆಕ್ಟರ್‌ನಲ್ಲಿ ಕಬ್ಬು ಮತ್ತು ಉಳಿದ ಬೆಳೆಗಳೆಲ್ಲಾ ಸೇರಿ ೧ಲಕ್ಷಕ್ಕೂ ಅಧಿಕ ಮುಂಗಾರಿನ ಬಿತ್ತನೆ ಹಾಳಾಗಿದೆ. ಕೇವಲ ಶೇ.೪೦-೫೦ರಷ್ಟು ಮಾತ್ರ ನಷ್ಟ ತೊರಿಸುತ್ತೀರಿ. ಆದರೆ ಇದರಿಂದ ರೈತರಿಗೆ ವಿಮೆ ಮತ್ತು ಕೇಂದ್ರ ಸರಕಾರದಿಂದ ಬರುವ ಎನ್‌ಡಿಆರ್‌ಎಫ್ ಪರಿಹಾರ ಬರದೇ ಎರಡು ರೀತಿಯ ಪೆಟ್ಟು ಬೀಳುತ್ತದೆ ಎಂದು ಹಾಲಿ ಶಾಸಕರ ವಿರುದ್ಧ ಗುಡುಗಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಪಿಪಿ ಮೆಡಿಕಲ್ ಕಾಲೇಜು ಬೇಡವೆಂದು ರೈತ ಸಂಘ ಪ್ರತಿಭಟನೆ ಮಾಡುತ್ತಿದ್ದೆ. ದುರ್ದೈವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಕರುಣೆಯಿಲ್ಲ. ಕಾಂಗ್ರೆಸ್ ಸರಕಾರದ ಪರಿಸ್ಥಿತಿ ಹದಗೆಟ್ಟಿದೆ. ಮುಂಬರುವ ದಿನಮಾನಗಳಲ್ಲಿ ಜಿಲ್ಲೆಯಾದ್ಯಂತ ರೈತರ ಪರವಾಗಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಸುರೇಶ ಬಿರಾದಾರ, ಎಸ್.ಎ.ಪಾಟೀಲ, ಮಲ್ಲಿಕಾರ್ಜುನ ಜೋಗುರ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ರೈತ ಮೋರ್ಚಾ ಅಧ್ಯಕ್ಷ ಪೀರೂ ಕೆರೂರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಮಲ್ಲಿಕಾರ್ಜುನ ಸಾವಳಸಂಗ, ಪ್ರಶಾಂತ ಕದ್ದರಕಿ, ಬಸವರಾಜ ಐರೋಡಗಿ, ಸಿದ್ರಾಮ ಆನಗೊಂಡ, ಶ್ರೀಕಾಂತ ಬಿಜಾಪೂರ, ಶಿಲ್ಪಾ ಕುದರಗೊಂಡ ಸೇರಿದಂತೆ ಜಿಲ್ಲಾ ಬಿಜೆಪಿ ಪಕ್ಷದ ಪದಾಧಿಕಾರಿಗಳು ಹಾಗೂ ತಾಲೂಕಿನ ರೈತರು ಭಾಗವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!
    In (ರಾಜ್ಯ ) ಜಿಲ್ಲೆ
  • ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ
    In (ರಾಜ್ಯ ) ಜಿಲ್ಲೆ
  • ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ
    In (ರಾಜ್ಯ ) ಜಿಲ್ಲೆ
  • ತಲ್ಲಣಿಸದಿರು ತಾಳು ಮನವೇ..
    In ಭಾವರಶ್ಮಿ
  • ಮಾನವೀಯತೆ, ಚಾರಿತ್ರ್ಯ ನಿರ್ಮಾಣ ಶಿಕ್ಷಣದ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಶ್ರೀಗಳಿಗೆ ಅಪಮಾನ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೋಟರಿ ಸಂಸ್ಥೆಯಿಂದ ಕಣ್ಣು ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪು.ಕೆ. ಪಟ್ಟಣಕ್ಕೆ ಸಚಿವ ಶಿವಾನಂದರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಚನ್ನಬಸವಣ್ಣನವರು ಯುವಕರ ಹೆಗ್ಗುರುತು :ಡಿ.ಎನ್.ಅಕ್ಕಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.