Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚನ್ನಬಸವಣ್ಣನವರು ಯುವಕರ ಹೆಗ್ಗುರುತು :ಡಿ.ಎನ್.ಅಕ್ಕಿ
(ರಾಜ್ಯ ) ಜಿಲ್ಲೆ

ಚನ್ನಬಸವಣ್ಣನವರು ಯುವಕರ ಹೆಗ್ಗುರುತು :ಡಿ.ಎನ್.ಅಕ್ಕಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪ್ರತಿಯೊಬ್ಬರೂ ಜ್ಞಾನಿಗಳಾಗಬೇಕೇ ಹೊರತು ಅಜ್ಞಾನಿಗಳಾಗಬಾರದು. ಚನ್ನಬಸವಣ್ಣನವರ ವಚನಗಳನ್ನು ಓದುತ್ತಿದ್ದರೆ ಉತ್ತಮ ಸಂಸ್ಕಾರಗಳು ಒಡಮೂಡಿ,ಉತ್ತಮ ವ್ಯಕ್ತಿತ್ವ ಅರಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಂಶೋಧಕ ಡಿ ಎನ್ ಅಕ್ಕಿ ಹೇಳಿದರು.
ಗುರುವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕದಳಿ ವೇದಿಕೆ ಯುವ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸದಾಚಾರ, ಸದ್ವಿಚಾರಗಳನ್ನು ತಿಳಿಯುವುದು. ಸತ್ಯವನ್ನೇ ನುಡಿಯಬೇಕು, ಹಿಂಸೆಯನ್ನು ಮಾಡಬಾರದು, ಪರೋಪಕಾರ ಬುದ್ಧಿ ಇರಬೇಕು, ಕಾಯಕ ಶ್ರದ್ಧೆ ಬೆಳೆಸಿಕೊಳ್ಳಬೇಕು, ಯಾರಿಗೂ ಕೇಡು ಬಯಸಬಾರದು ಎಂಬ ಚನ್ನಬಸವಣ್ಣನವರ ಜೀವನ ಸಂದೇಶ ಇಂದಿನ ಯುವಪೀಳಿಗೆಗೆ ಪ್ರೇರಕವಾಗಿದೆ ಎಂದು ಹೇಳಿದರು.
ಶಿಕ್ಷಕ ಸಾಹಿತಿ ಸಂತೋಷ ಬಂಡೆ ಉಪನ್ಯಾಸ ನೀಡುತ್ತಾ ಮಾತನಾಡಿ, ಅರಿವು ಮತ್ತು ಆಚಾರದ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ್ದ ಚನ್ನಬಸವಣ್ಣನವರ ಬದುಕು ಬಹು ವಿಶಿಷ್ಟವಾದುದು. ಎಲ್ಲ ವರ್ಗದ, ಎಲ್ಲ ವಯಸ್ಸಿನ ಜನರಿಗೆ ಚನ್ನಬಸವಣ್ಣನವರ ಬದುಕು ಮತ್ತು ವಚನಗಳು ಹೆಗ್ಗುರುತು ಆಗಬೇಕಿದೆ ಎಂದು ಹೇಳಿದರು.
ಅರಿವು, ಆಚಾರ, ಅನುಭಾವಗಳ ಸಂಗಮವಾಗಿದ್ದರೆ ಹಿರಿಯತನ ತನ್ನಿಂದ ತಾನೇ ಬರುವುದು ಎನ್ನುವ ಚನ್ನಬಸವಣ್ಣನವರು ವ್ಯಕ್ತಿ ಸಂಸ್ಕಾರವಂತನಾಗಿ ತನ್ನಲ್ಲಿರುವ ಅವಗುಣಗಳನ್ನು ಕಳೆದುಕೊಂಡು ಸಾತ್ವಿಕ ಬದುಕು ಸಾಗಿಸಬೇಕೆನ್ನುವದು ಅವರ ಸಂದೇಶವಾಗಿದೆ ಎಂದು ಹೇಳಿದರು.
ಹಿರಿಯ ಉಪನ್ಯಾಸಕ ಜಿ ಎಸ್ ಭಾಗೇಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ಎಸ್ ಪಾಟೀಲ ಆಶಯ ನುಡಿಗಳನ್ನಾಡಿದರು.
ಇಂಡಿ ಲಾಯನ್ಸ್ ಕ್ಲಬ್ ಅಧ್ಯಕ್ಷ ಐ ಬಿ ಸುರಪುರ, ಉಪಾಧ್ಯಕ್ಷ ಎಚ್ ಎಸ್ ಎಳೆಗಾಂವ, ಕದಳಿ ವೇದಿಕೆ ಉಪಾಧ್ಯಕ್ಷೆ ರಾಜಶ್ರೀ ಕ್ಷತ್ರಿ, ಡಾ ಸತೀಶ ಈಶ್ವರಗೊಂಡ, ಡಾ ಪ್ರಭು ಭೈರಜಿ, ಎಸ್ ಎಫ್ ಭೈರಜಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ರೇಷ್ಮೆ ಇಲಾಖೆಯ ನಿವೃತ್ತ ನೌಕರ ಪರುತಯ್ಯ ಮಠಪತಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಉಪನ್ಯಾಸಕ ರಮೇಶ ಮೇತ್ರಿ ನಿರೂಪಿಸಿದರು.
ಬಿ ಕೆ ಶಿವೂರ ಸ್ವಾಗತಿಸಿ, ವಂದಿಸಿದರು. ಸಂತೋಷ ಹಟ್ಟಿ, ಭಾಗ್ಯಜ್ಯೋತಿ ಬಿರಾದಾರ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!
    In (ರಾಜ್ಯ ) ಜಿಲ್ಲೆ
  • ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ
    In (ರಾಜ್ಯ ) ಜಿಲ್ಲೆ
  • ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ
    In (ರಾಜ್ಯ ) ಜಿಲ್ಲೆ
  • ತಲ್ಲಣಿಸದಿರು ತಾಳು ಮನವೇ..
    In ಭಾವರಶ್ಮಿ
  • ಮಾನವೀಯತೆ, ಚಾರಿತ್ರ್ಯ ನಿರ್ಮಾಣ ಶಿಕ್ಷಣದ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಶ್ರೀಗಳಿಗೆ ಅಪಮಾನ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೋಟರಿ ಸಂಸ್ಥೆಯಿಂದ ಕಣ್ಣು ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪು.ಕೆ. ಪಟ್ಟಣಕ್ಕೆ ಸಚಿವ ಶಿವಾನಂದರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಚನ್ನಬಸವಣ್ಣನವರು ಯುವಕರ ಹೆಗ್ಗುರುತು :ಡಿ.ಎನ್.ಅಕ್ಕಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.