Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ
(ರಾಜ್ಯ ) ಜಿಲ್ಲೆ

ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಸಂಸ್ಕೃತಿ, ಸಂಸ್ಕಾರಗಳ ಮಹತ್ವ ಸಾರಿ, ಸಾವಯವ ಕೃಷಿಗೆ ಒತ್ತು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧಿಸಿರುವ ಕ್ರಮ ಖಂಡನೀಯ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿ ಶ್ರೀಗಳ ಜಿಲ್ಲಾ ನಿಷೇಧ ಹೇರುವ ಮೂಲಕ ರಾಜ್ಯ ಸರ್ಕಾರ ತನ್ನ ಕುಟೀಲ ನೀತಿಯನ್ನು ಪ್ರಯೋಗಿಸಿದೆ. ಮುಖ್ಯಮಂತ್ರಿಗಳ ಕೃಪಾ ಘೋಷಿತ ಮಂಡಳಿ ಎಂಬ ಸತ್ಯವನ್ನು ಶ್ರೀಗಳು ಹೇಳಿದ್ದಾರೆ, ಇದನ್ನು ಅರಗಿಸಿಕೊಳ್ಳಲಾಗದ ರಾಜ್ಯ ಸರ್ಕಾರ ಶ್ರೀಗಳ ಮೇಲೆ ಈ ರೀತಿ ನಿರ್ಬಂಧ ಆದೇಶ ಹೊರಡಿಸಿದೆ, ಆದರೆ ಶ್ರೀಗಳು ಇದರಿಂದ ಹೆದರುವುದಿಲ್ಲ, ಶ್ರೀಗಳ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸ್ಪಷ್ಟಪಡಿಸಿದರು.
ಕನೇರಿ ಶ್ರೀಗಳ ವ್ಯಕ್ತಿತ್ವ ಶ್ರೇಷ್ಠ, ಅಧ್ಯಾತ್ಮಿಕ ಮನೋಭಾವನೆ, ಸಂಸ್ಕಾರಗಳ ಪ್ರಸಾರ, ಸಾವಯವ ಕೃಷಿ ಮೂಲಕ ರೈತ ಕಲ್ಯಾಣ ಹಾಗೂ ಪ್ರತಿಯೊಬ್ಬರ ಆರೋಗ್ಯ ಕಲ್ಯಾಣ ಕಾಳಜಿಯುಳ್ಳ ಶ್ರೀಗಳ ಕೊಡುಗೆ ದೊಡ್ಡದು, ಸತ್ಯವನ್ನು ನೇರವಾಗಿ ಮಾತನಾಡುವ, ಅನ್ಯಾಯವನ್ನು ವಿರೋಧಿಸುವ ಹೋರಾಟ ಮನೋಭಾವ ಶ್ರೀಗಳಲ್ಲಿದೆ, ಈ ಹಿಂದೆ ವಕ್ಫ್ ಮಂಡಳಿ ಅಮಾಯಕ ರೈತರ ಜಮೀನುಗಳು ಕಬಳಿಸಲು‌ ಮುಂದಾದಾಗ ಅದನ್ನು ಶ್ರೀಗಳು ರೈತರ ಧ್ವನಿಯಾಗಿ ಖಂಡಿಸಿದ್ದರು, ಇದು ಸಹ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅರಗಿಸಿಕೊಳ್ಳಲಾಗದ ತುತ್ತಾಗಿತ್ತು.
ಸಮಾಜ ಒಡಕು ಮೂಡಿಸುವ ಶಕ್ತಿಗಳಿಗೆ ಹಾಗೂ ನಮ್ಮ ದೇವಾನುದೇವತೆಗಳಿಗೆ ಅಪಮಾನಮಾಡುವವರ ವಿರುದ್ದ ಅವರು ಗುಡುಗಿದ್ದಾರೆ, ಯಾರ ವಿರುದ್ದವೂ ಮಾತನಾಡಿಲ್ಲ, ನಮ್ಮ ದೇವಾನುದೇವತೆಗಳಿಗೆ ಅಪಮಾನ ಮಾಡುವುದನ್ನು ಸಹಿಸಿಕೊಳ್ಳಬೇಕೆ? ಲಿಂಗಾಯತ ವೀರಶೈವ ಎಂದು ಬೇಧ ಮೂಡಿಸಿ ದ್ವೇಷ ಮೂಡಿಸುತ್ತಿರುವವರ ವಿರುದ್ಧ ಶ್ರೀಗಳು ಖಂಡನೆ ಮಾಡಿದ್ದಾರೆ, ದೇವರೇ ಇಲ್ಲ, ಗುಡಿಗೆ ಹೋಗಬೇಡಿ ಎಂದು ಹೇಳಿ ನಮ್ಮ ಧಾರ್ಮಿಕ ಭಾವನೆಗಳಿಗೆ ನೋವು ತರಿಸುವ ಮಾತುಗಳು ಆಡಿದವರ ವಿರುದ್ದ ಕ್ರಮವೇಕಿಲ್ಲ? ಹಿಂದೂಗಳ ಬಗ್ಗೆ, ಹಿಂದೂ ದೇವತೆಗಳ ಬಗ್ಗೆ ಮಾತನಾಡಿದರನ್ನು ಖಂಡಿಸುವ ಕಾರ್ಯವೂ ಮಾಡಬಾರದೇ? ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ದಿನದಿಂದಲೇ ಈ ರೀತಿ ಹಿಂದೂ ದಮನಕಾರಿ ನೀತಿ, ಮಠಾಧೀಶರಿಗೆ ಅಗೌರವ ತೋರುವ ಕಾರ್ಯ ನಡೆಯುತ್ತಿದೆ, ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು, ಇಲ್ಲವಾದರೆ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!

ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ

ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ

ತಲ್ಲಣಿಸದಿರು ತಾಳು ಮನವೇ..

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ನಗರ ಬಂದ್ ಸಂಪೂರ್ಣ ಯಶಸ್ವಿ!
    In (ರಾಜ್ಯ ) ಜಿಲ್ಲೆ
  • ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಭೂಸಗೊಂಡ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರೇಮಚಂದ್ ಕಾದಂಬರಿಗಳು ಸಾಮಾಜಿಕ ಜೀವನದ ವಾಸ್ತವ ಚಿತ್ರಣ :ಪ್ರೊ.ಪೀರಾ
    In (ರಾಜ್ಯ ) ಜಿಲ್ಲೆ
  • ಕನೇರಿ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧ ಖಂಡನೀಯ
    In (ರಾಜ್ಯ ) ಜಿಲ್ಲೆ
  • ತಲ್ಲಣಿಸದಿರು ತಾಳು ಮನವೇ..
    In ಭಾವರಶ್ಮಿ
  • ಮಾನವೀಯತೆ, ಚಾರಿತ್ರ್ಯ ನಿರ್ಮಾಣ ಶಿಕ್ಷಣದ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಶ್ರೀಗಳಿಗೆ ಅಪಮಾನ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೋಟರಿ ಸಂಸ್ಥೆಯಿಂದ ಕಣ್ಣು ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪು.ಕೆ. ಪಟ್ಟಣಕ್ಕೆ ಸಚಿವ ಶಿವಾನಂದರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಚನ್ನಬಸವಣ್ಣನವರು ಯುವಕರ ಹೆಗ್ಗುರುತು :ಡಿ.ಎನ್.ಅಕ್ಕಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.