Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೂಲಭೂತ ಅಭ್ಯಾಸಗಳು ಮತ್ತು ಮಕ್ಕಳು

ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಅಗತ್ಯ :ಪ್ರೊ.ಕೋರಿಶೆಟ್ಟಿ

ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ
(ರಾಜ್ಯ ) ಜಿಲ್ಲೆ

ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ (ಪಿಎಮ್ -ಉಷಾ) ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬೆಂಗಳೂರು ಇವರ ಹಣಕಾಸು ನೆರವಿನೊಂದಿಗೆ ಬುಧವಾರ ಆಯೋಜಿಸಿದ್ದ ‘ಉದ್ಯೋಗನಿರತ ಮಹಿಳೆಯರ ಕೆಲಸ-ಜೀವನ ಸಮತೋಲನ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ವೇಗದ ಜಗತ್ತಿನಲ್ಲಿ ಕೆಲಸ ಮತ್ತು ಜೀವನದ ಸಮತೋಲನ ಅತ್ಯಂತ ಮುಖ್ಯವಾಗಿದೆ. ವಿಶೇಷವಾಗಿ ವೃತ್ತಿನಿರತ ಮಹಿಳೆಯರು ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಜೀವನದ ಬೇಡಿಕೆಗಳು ಮತ್ತು ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಕಲೆ ಅರಿತುಕೊಳ್ಳಬೇಕಾಗಿದೆ. ಇಂದಿನ ಬಹುತೇಕ ಕ್ಷೇತ್ರಗಳಲ್ಲಿ ಕೆಲಸದ ಒತ್ತಡ ಸಾಮಾನ್ಯವಾಗಿದ್ದು, ಅದನ್ನು ಕಡಿಮೆ ಮಾಡಲು ಸಮಯದ ವಿನಿಯೋಗ, ಆದ್ಯತೆಗಳ ನಿರ್ಧಾರ, ಕೆಲಸದ ನಡುವಿನ ವಿರಾಮ, ಸಾಮಾಜಿಕ ಮಾಧ್ಯಮ ಬಳಕೆಯಲ್ಲಿ ಕೆಲಸದ ಯೋಜನೆ ಮತ್ತು ಸ್ವಯಂ ಕಾಳಜಿಯಂತಹ ಅಂಶಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಇವುಗಳ ಮೂಲಕ ಮಹಿಳೆಯರು ತಮ್ಮ ವೃತ್ತಿ ಮತ್ತು ವೈಯಕ್ತಿಕ ಜೀವನದ ನಡುವಿನ ಸಮತೋಲನವನ್ನು ಸಾಧಿಸಬಹುದು ಎಂದರು.
ಇದೇ ಸಂದರ್ಭದಲ್ಲಿ ವಿಜಯಪುರದ ಬಿ.ಎಮ್. ಪಾಟೀಲ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಸಂತೋಷ ರಾಮದುರ್ಗ ಮಾತನಾಡಿ, ಅತಿಯಾದ ಒತ್ತಡದಿಂದ ಮಹಿಳೆಯರು ಆಕ್ರಮಣಕಾರಿ ಮನೋಭಾವ, ಹತಾಶೆ, ಖಿನ್ನತೆ, ರಕ್ತಹೀನತೆ, ಹಾಗೂ ಕೆಲಸದ ನಿರಾಸಕ್ತಿ ಮನೋಸ್ಥಿತಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದರು.
ಕಾರ್ಯಾಗಾರದಲ್ಲಿ ಸಮಾಜಕಾರ್ಯ ವಿಭಾಗದ ನಿವೃತ್ತ ಹಿರಿಯ ಪ್ರಾಧ್ಯಾಪಕ ಪ್ರೊ.ಎಸ್.ಎ.ಖಾÁಜಿ ಮಾತನಾಡಿ, ಮಹಿಳೆಯರ ಒತ್ತಡವು ಅವರ ಭಾವನಾತ್ಮಕ ಮತ್ತು ದೈಹಿಕ ಯೋಗಕ್ಷೇಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇಂತಹ ಒತ್ತಡವು ಆತಂಕ, ಕಿರಿಕಿರಿ ಹಾಗೂ ಮನೋಭಾವದ ಬದಲಾವಣೆಗಳಿಗೆ ಕಾರಣವಾಗುತ್ತದೆ. ಒತ್ತಡವನ್ನು ನಿಭಾಯಿಸಲು ಸ್ವಯಂ ಆರೈಕೆಯ ಚಟುವಟಿಕೆಗಳನ್ನು ಅಭ್ಯಾಸ ಮಾಡುವುದು, ಸಾಮಾಜಿಕ ಬೆಂಬಲವನ್ನು ಪಡೆಯುವುದು, ಸಮಯ ನಿರ್ವಹಣೆ ಹಾಗೂ ಅಗತ್ಯವಿದ್ದಾಗ ವೃತ್ತಿಪರರ ಸಹಾಯ ಮತ್ತು ಆಪ್ತಸಮಾಲೋಚನೆಯ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ಡಿಮೆನ್ಸ್ ಸಂಸ್ಥೆಯ ಮನೋವೈದ್ಯಕೀಯ ಸಮಾಜಕಾರ್ಯಕರ್ತ ಪ್ರಶಾಂತ ಪಾಟೀಲ ಮಾತನಾಡಿ, ಇಂದಿನ ದೈನಂದಿನ ಒತ್ತಡದ ಜೀವನದಲ್ಲಿ ನಾವು ನಮ್ಮ ಬಗ್ಗೆ ಸ್ವಲ್ಪ ಸಮಯ ಮೀಸಲಿಟ್ಟು ಸ್ವ-ಆರೈಕೆ ಮತ್ತು ಸ್ವ-ಅರಿವು ಮಾಡಿಕೊಳ್ಳುವುದು ಅತ್ಯಾವಶ್ಯಕ. ದೈಹಿಕ ಹಾಗೂ ಭಾವನಾತ್ಮಕವಾಗಿ ನಮಗೆ ಸಮಯ ನೀಡದಿದ್ದರೆ, ಅದು ನಮ್ಮ ಆರೋಗ್ಯ ಮತ್ತು ಮನಸ್ಥಿತಿಯ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ಇಂತಹ ಸಂದರ್ಭಗಳಲ್ಲಿ ವ್ಯಕ್ತಿಯು ಉತ್ತಮ ಯೋಗಕ್ಷೇಮವನ್ನು ಹೊಂದಲು ಸಾಧ್ಯವಿಲ್ಲ ಎಂದರು.

ಪ್ರೊ.ಎಸ್.ಬಿ.ಮಾಡಗಿ, ಡಾ.ಕಲಾವತಿ ಎಚ್ ಕಾಂಬಳೆ, ಡಾ.ರಮೇಶ ಎಮ್ ಸೋನಕಾಂಬಳೆ, ಶರಣಬಸು ಕೊಡಬಾಗಿ. ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಬಿ.ಸೋನಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ. ಶಿವಲಿಂಗ ಎಸ್ ಮೇತ್ರಿ ಸ್ವಾಗತಿಸಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಲಭೂತ ಅಭ್ಯಾಸಗಳು ಮತ್ತು ಮಕ್ಕಳು

ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಅಗತ್ಯ :ಪ್ರೊ.ಕೋರಿಶೆಟ್ಟಿ

ಅ.೨೫ ರಂದು ತಾತ್ಕಾಲಿಕ ನೇಮಕಾತಿಗೆ ನೇರ ಸಂದರ್ಶನ

ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೂಲಭೂತ ಅಭ್ಯಾಸಗಳು ಮತ್ತು ಮಕ್ಕಳು
    In ವಿಶೇಷ ಲೇಖನ
  • ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಅಗತ್ಯ :ಪ್ರೊ.ಕೋರಿಶೆಟ್ಟಿ
    In (ರಾಜ್ಯ ) ಜಿಲ್ಲೆ
  • ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅ.೨೫ ರಂದು ತಾತ್ಕಾಲಿಕ ನೇಮಕಾತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮದರಸಾಗಳಲ್ಲಿ ಬೋಧಿಸಲು ಅತಿಥಿ ಶಿಕ್ಷಕರ ಆಯ್ಕೆ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಳ್ಳಲು ಅವಕಾಶ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಸ್ವಾಗತ-ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕುರುಬರ ಎಸ್ಟಿ ಮೀಸಲಾತಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಕನ್ಹೇರಿ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಆಧಾರ ಸ್ಥಂಬ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.