Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಅಗತ್ಯ :ಪ್ರೊ.ಕೋರಿಶೆಟ್ಟಿ
(ರಾಜ್ಯ ) ಜಿಲ್ಲೆ

ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಅಗತ್ಯ :ಪ್ರೊ.ಕೋರಿಶೆಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಮಾಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ ವಿಭಾಗ ಪ್ರಧಾನ ಮಂತ್ರಿ ಉಚ್ಚತಾರ ಶಿಕ್ಷಾ ಅಭಿಯಾನ (Pಒ-UShಚಿ) ಉನ್ನತ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಅವರ ಅನುದಾನ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ‘ಜೀವ ವಿಜ್ಞಾನ ಹಾಗೂ ವೈದ್ಯಕೀಯ ವಿಜ್ಞಾನದಲ್ಲಿ ಜೈವಿಕ ಮಾಹಿತಿ ವಿಜ್ಞಾನ ಉಪಯೋಗತೆ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೌಶಲ್ಯಾಭಿವೃದ್ಧಿಯು ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಈ ಕೌಶಲ್ಯಗಳು ನೆರವಾಗುತ್ತವೆ. ಇದರಿಂದ ದೇಶದ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೊತೆಗೆ ನಿರುದ್ಯೋಗ ಸಮಸ್ಯೆಯು ಕೂಡ ಕಡಿಮೆಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಡಾ. ಮಹಾಂತೇಶ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನದಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ವಿಸ್ತಾರವಾಗಿ ವಿವರಿಸಿ, ವಿದ್ಯಾರ್ಥಿಗಳಿಗೆ ಈ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಉದ್ಯಮಶೀಲತೆಯ ಮಹತ್ವ ಮತ್ತು ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಬಿ.ಎಸ್. ಎಮ್‌ಐಟಿ ಮಣಿಪಾಲ್‌ನ ಡಾ. ರವೀಂದ್ರನಾಥ ಮಾತನಾಡಿ, ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನದ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂಬುದರಲ್ಲಿ ಸಹಕಾರ ನೀಡುವ ರೀತಿಯನ್ನು ವಿವರಿಸಿದರು.
ಈ ಕ್ಷೇತ್ರದಲ್ಲಿ ಅಗತ್ಯವಿರುವ ಹಲವು ಕೌಶಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜೊತೆಗೆ ಇತ್ತೀಚಿನ ಹೊಸ ಹೊಸ ಆವಿಷ್ಕಾರಗಳ ಕುರಿತು ಬೆಳಕು ಚೆಲ್ಲಿದರು.
ಇದೇ ಸಂದರ್ಭದಲ್ಲಿ ಜೈವಿಕ ಮಾಹಿತಿ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಸ್.ಬಿ.ಮಾಡಗಿ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರದ ಮಹತ್ವ ಮತ್ತು ಅವಶ್ಯಕತೆಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಕೌಶಲ್ಯಗಳನ್ನು ಕಲಿಯುವುದರಿಂದ ಅವರ ವೃತ್ತಿಜೀವನಕ್ಕೆ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಹೇಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಳ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದರು. ಕಾರ್ಯಕ್ರಮದ ಸಂಯೋಜಕ ಡಾ.ಬಾಬು ಆರ್.ಎಲ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೈವಿಕ ಮಾಹಿತಿ ಅಧ್ಯಯನ ವಿಭಾಗದ ವಿದ್ಯಾರ್ಥಿ ಪ್ರಿಯಂಕಾ ನಾಯ್ಕ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಜಾಯ್. ಹೊಸಕೇರಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.