Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನಪದ ಜಗತ್ತಿನ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ :ಡಾ.ಮಾಗಣಗೇರಿ
(ರಾಜ್ಯ ) ಜಿಲ್ಲೆ

ಜಾನಪದ ಜಗತ್ತಿನ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ :ಡಾ.ಮಾಗಣಗೇರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: “ಎನಿತು ಇನಿದು ಈ ಕನ್ನಡ ನುಡಿಯು, ಮನವನು ತಣಿಸುವ ಮೋಹನ ಸುಧೆಯು” ಎಂಬ ಹಾಡಿನ ಮೂಲಕ ಚಿರಪರಿಚಿತರಾದ ಆನಂದಕಂದರು ತಮ್ಮ ಕವನ, ಸಣ್ಣಕಥೆ, ಕಾದಂಬರಿ, ರೂಪಕ, ಚರಿತ್ರೆ, ಶಿಶು ಸಾಹಿತ್ಯ, ಮೀಮಾಂಸೆ, ವಿಮರ್ಶೆ, ಸಂಶೋಧನೆ, ಸಂಪಾದನೆ, ಜಾನಪದ ಮತ್ತು ಪತ್ರಿಕಾ ಸಂಪಾದನೆಗಳಂತಹ ನಿರಂತರ ಕಾಯಕಗಳ ಮೂಲಕ ಇಡೀ ನಾಡನ್ನು ಬೆಳಗಿ ಕನ್ನಡ ನಾಡಿನ ಅಸಂಖ್ಯಾತ ಪ್ರತಿಭೆಗಳನ್ನೂ ಹುಟ್ಟುಹಾಕಿದ ವಿಶಿಷ್ಟ ಸಾಹಿತಿ ಎಂದು ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ನ ಸದಸ್ಯ ರವೀಂದ್ರ ಕುಲಕರ್ಣಿ ಹೇಳಿದರು.
ಸ್ಥಳೀಯ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಗುರುವಾರ ಆಯೋಜಿಸಿದ ಡಾ. ಬೆಟಗೇರಿ ಕೃಷ್ಣಶರ್ಮ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ ಹಾಗೂ ಕಾವ್ಯ ಗಾಯನ ಕಾರ್ಯಕ್ರಮ ಆಶಯ ನುಡಿಗಳನ್ನಾಡಿದ ಅವರು ಭಾರತದ ಸ್ವಾತಂತ್ರ‍್ಯ ಪ್ರಾಪ್ತಿ, ಕರ್ನಾಟಕತ್ವದ ಜಾಗೃತಿ ಮತ್ತು ಕರ್ನಾಟಕ ಏಕೀಕರಣಗಳಿಗೆ ತಮ್ಮ ಶಕ್ತಿ ಸರ್ವಸ್ವವನ್ನೂ ಧಾರೆಯೆರೆದು ದುಡಿದ ಕನ್ನಡ ಸಾಹಿತಿಗಳಲ್ಲಿ ಇವರದು ಸಿಂಹಪಾಲು ಎಂದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ. ಎಸ್. ಮಾಗಣಗೇರಿ ಬೆಟಗೇರಿ ಕೃಷ್ಣಶರ್ಮ ಕನ್ನಡ ನಾಡು ನುಡಿ ಕಂಡ ಒಬ್ಬ ಶ್ರೇಷ್ಠ ಕವಿ. ಬದುಕಿನುದ್ದಕ್ಕೂ ಸಂಘರ್ಷ, ಹೋರಾಟ, ಸಾವು ನೋವಿನ ಸರಮಾಲೆಯಲ್ಲಿ ರೋಗ ರುಜಿನ,ಆರ್ಥಿಕ ಸಂಕಷ್ಟದ ನಡುವೆಯೂ ಜಾನಪದ ಮಾರ್ಗದ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ. ಅವರ ಹೆಸರಿನಲ್ಲಿ ಸರಕಾರ ಟ್ರಸ್ಟ್ ರಚಿಸಿರುವುದು,ಸಾಹಿತ್ಯದ ಅಧ್ಯಯನಕ್ಕಾಗಿ ಸರ್ಟಿಫಿಕೇಟ್ ಕೋರ್ಸ್ ಆರಂಬಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಸ್. ಆರ್. ಅವಜಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಮಾತನಾಡಿ, ಬೆಟಗೇರಿ ಕೃಷ್ಣಶರ್ಮ ಒಬ್ಬ ಕನ್ನಡ ಕವಿ, ಲೇಖಕ, ಪತ್ರಿಕೋದ್ಯಮಿ ಮತ್ತು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗವಹಿಸಿದ ಅವರು ಕವನ, ಕಾದಂಬರಿ, ಕಥೆ, ವಿಮರ್ಶೆ, ಮತ್ತು ಜನಪದ ಸಾಹಿತ್ಯದಂತಹ ವಿವಿಧ ಪ್ರಕಾರದ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.
ಪ್ರೊ. ಮಹಾಂತೇಶ ಜನವಾಡ ಸ್ವಾಗತಿಸಿದರು, ಪ್ರೊ. ಎಸ್. ಎಫ್. ಬಿರಾದಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಡಾ. ಎಸ್. ಎಸ್. ಚೋರಗಿ, ವಿ. ಎಸ್. ಗಿಡವೀರ, ಸದಸ್ಯರಾದ ಬಾಬುಗೌಡ ಪಾಟೀಲ, ಡಾ. ಎಸ್. ಎಸ್. ದೇಸಾಯಿ, ಡಾ. ಆರ್.ಎಸ್. ಮಾವಿನಮರ, ಪ್ರೊ. ಬಸವರಾಜ ಯಳ್ಳೂರ, ಪ್ರೊ. ಮಯೂರ್ ಕುದುರಿ, ಪ್ರೊ. ಮುರುಗೇಶ್, ಸಂಜಯ ಅವಟಿ, ವಿನೋದ ಘೆವಂಡೆ, ರಾಮಣ್ಣ ನಡಗೇರಿ, ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಾನಪದ ಜಗತ್ತಿನ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ :ಡಾ.ಮಾಗಣಗೇರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಬಂದ್‌ಗೆ ಉಮೇಶ ಕಾರಜೋಳ ಆಕ್ಷೇಪ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರು ಕೂಡಲೇ ಕನೇರಿ ಶ್ರೀಗಳ ಕ್ಷಮೆ ಕೇಳಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.