Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ, ಹತ್ತಿ, ಮೆಕ್ಕೆಜೋಳ ಮತ್ತು ಸಜ್ಜಿ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ. ದ್ರಾಕ್ಷಿ, ದಾಳಿಂಬೆ, ಲಿಂಬೆ ಹಾಗೂ ಬಾಳೆ ನೀರು ನಿಂತು ಹಾಳಾಗಿವೆ. ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ, ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ ೧೫ದಿನದೊಳಗಾಗಿ ಜಿಲ್ಲೆಯ ಎಲ್ಲರಿಗೂ ರೈತರಿಗೆ ಪರಿಹಾರ ಬರಲೇಬೇಕೆಂದು ರೈತ ಸಂಘ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ರೈತರಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ತಾಲೂಕು ದಂಡಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ ೫೦,೦೦೦ ಹಾಗೂ ನೀರಾವರಿ ಭೂಮಿಗೆ ೧ಲಕ್ಷ ರೂ., ಬಹುವಾರ್ಷಿಕ ಬೆಳೆಗಳಿಗೆ ೨ಲಕ್ಷ ಪರಿಹಾರವನ್ನು ಕೊಡಬೇಕೆಂದು ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ. ಎಲ್ಲ ಬೆಳೆಗಳು ನಷ್ಟಗೊಂಡಿರುವ ಹಿನ್ನೆಲೆಯಲ್ಲಿ ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ಪರಿಹಾರವನ್ನು ಹಾಕಬೇಕು ಅದೇ ರೀತಿಯಾಗಿ ಫಸಲು ಭೀಮಾ ಯೋಜನೆಯ ವಿಮೆವೂ ಕೂಡ ಆದಷ್ಟು ಬೇಗನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಜಿಲ್ಲಾ ಸಂಚಾಲಕ ರಾಜು ಚವ್ಹಾಣ, ಶೈಲಜಾ ಸ್ಟಾವರಮಠ ಮಾತನಾಡಿ, ನೆಪ ಮಾತ್ರಕ್ಕೆ ಸಮೀಕ್ಷೆ ಮಾಡಿ ಕಣ್ಣಿಗೆ ಕಾಣಬರುವ ಕೆಲವೇ ರೈತರಿಗೆ ಪರಿಹಾರ ಕೊಡುವುದಾಗಿ ವರದಿ ತಯಾರಿಸಿದ್ದೀರಿ. ಆದರೆ ತಾಲೂಕಿನ ಎಲ್ಲಾ ಹಳ್ಳಿಯ ರೈತರಿಗೆ ಮಳೆಯಿಂದ ನಷ್ಟವಾಗಿದೆ. ಮತ್ತೊಮೆ ಸಮೀಕ್ಷೆ ಮಾಡಿ ಅವರೆಲ್ಲರಿಗೂ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ನೀಡುವುದು ತಡವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಅಶೋಕ ಅಲ್ಲಾಪುರ, ಜಿಲ್ಲಾ ಕಾರ್ಯಧ್ಯಕ್ಷ ಪ್ರಕಾಶ ತೇಲಿ, ತಿಕೋಟಾ ತಾಲೂಕಾಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಪ್ರಕಾಶ ದಾಸರ, ರಿಯಾಜ್‌ಪಟೇಲ್ ಪಾಟೀಲ್, ಖಾದಿರಭಾಷಾ ವಾಲಿಕಾರ, ಸಂತೋಷ್ ಹೋನವಾಡ, ಬಸಪ್ಪ ನೆಸೂರ್, ಖಾದರಬಾಷಾ ಪೋಲಾಸಿ, ಲಾಲಮಹ್ಮದ ಪೋಲಾಸಿ, ಪ್ರಶಾಂತ ನಂದಿಕೋಲ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಾನಪದ ಜಗತ್ತಿನ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ :ಡಾ.ಮಾಗಣಗೇರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಬಂದ್‌ಗೆ ಉಮೇಶ ಕಾರಜೋಳ ಆಕ್ಷೇಪ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರು ಕೂಡಲೇ ಕನೇರಿ ಶ್ರೀಗಳ ಕ್ಷಮೆ ಕೇಳಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.