Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಡಗುಂದಿ ಗ್ರಾಮಸ್ಥರಿಂದ ಸಚಿವ ಶಿವಾನಂದ ಪಾಟೀಲರಿಗೆ ಮನವಿ
(ರಾಜ್ಯ ) ಜಿಲ್ಲೆ

ನಿಡಗುಂದಿ ಗ್ರಾಮಸ್ಥರಿಂದ ಸಚಿವ ಶಿವಾನಂದ ಪಾಟೀಲರಿಗೆ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶೀಘ್ರವೇ ತಾಲೂಕು ಕಛೇರಿಗಳನ್ನು ಆರಂಭಿಸುವಂತೆ ಆಗ್ರಹಿಸಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕವಾಗಿ ರಚನೆಗೊಂಡಿರುವ ನಿಡಗುಂದಿ ತಾಲೂಕ ಕೇಂದ್ರದಲ್ಲಿ ಈವರೆಗೂ ತಾಲೂಕ ಕಛೇರಿಗಳನ್ನು ತೆರೆದಿಲ್ಲ. ಆಡಳಿತದ ಹಿತದೃಷ್ಟಿಯಿಂದ ಶೀಘ್ರವೇ ತಾಲೂಕ ಕಛೇರಿಗಳನ್ನು ಆರಂಭಿಸುವಂತೆ ಆಗ್ರಹಿಸಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.
ಭಾನುವಾರ ವಿಜಯಪುರ ನಗರದಲ್ಲಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿಯಾದ ನಿಡಗುಂದಿ ಪಟ್ಟಣ ಪಂಚಾಯತ್ ಸದಸ್ಯರು, ತಾಲೂಕಿನ ಪ್ರಮುಖರು, ಆಡಳಿತ ಹಿತದೃಷ್ಟಿಯಿಂದ ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕಗೊಂಡು ನಿಡಗುಂದಿ ತಾಲೂಕು ರಚನೆಯಾಗಿದೆ. ಆದರೆ ಆಡಳಿತನ ನಿರ್ವಹಣೆಗೆ ತಹಶಿಲ್ದಾರರ ಕಛೇರಿ ಹೊರತಾಗಿ ಇತರೆ ಇಲಾಖೆಗಳ ಕಛೇರಿ ಇಲ್ಲದ ಕಾರಣ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿದೆ ಎಂದು ಸಚಿವರಿಗೆ ಸಮಸ್ಯೆ ನಿವೇದಿಸಿಕೊಂಡರು.
ನಿಡಗುಂದಿ ತಾಲೂಕಿನ ಆಡಳಿತಕ್ಕೆ ವೇಗನೀಡಲು ಮಿನಿ ವಿಧಾನಸೌಧ, ಸಬ್ ರಿಜಿಸ್ಟರ್ ಕಛೇರಿ, ಎಪಿಎಂಸಿ, ಬಸ್ ಡೀಪೋ, ಬಿಇಓ ಕಛೇರಿ, ತಾಲೂಕ ಆರೋಗ್ಯಾಧಿಕಾರಿ ಕಛೇರಿ ಸೇರಿದಂತೆ ಬಹುತೇಕ ಕಛೇರಿಗಳು ತಾಲೂಕ ಕೇಂದ್ರದಲ್ಲಿ ಇಲ್ಲ ಎಂದು ತಾವು ಸಲ್ಲಿಸಿದ ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ತಾಲೂಕಿನ ಅಭಿವೃದ್ಧಿ ಹಿತದೃಷ್ಟಿಯಿಂದ ನಿಡಗುಂದಿ ತಾಲೂಕ ಕೇಂದ್ರದಲ್ಲಿ ತುರ್ತಾಗಿ ತಾಲೂಕ‌ ಕಛೇರಿಗಳನ್ನು ಪ್ರಾರಂಭಿಸುವುದು ಅಗತ್ಯವಾಗಿದೆ. ಈ ಕುರಿತು ನಿಡಗುಂದಿ ಪಟ್ಟಣ ಪಂಚಾಯತ್ ಸರ್ವ ಸದಸ್ಯರು ಹಾಗೂ ಪಕ್ಷಾತೀತವಾಗಿ ಎಲ್ಲ ಮುಖಂಡರು ಪಟ್ಟಣದ ರುದ್ರೇಶ್ವರ ಮಠದಲ್ಲಿ ಸಭೆ ಸೇರಿ ತಾಲೂಕ ಮಟ್ಟದ ಕಛೇರಿಗಳನ್ನು ತೆರೆಯುವಂತೆ ಆಗ್ರಹಿಸಿ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾಗಿ ಹೇಳಿದರು.
ನಿಡಗುಂದಿ ತಾಲೂಕಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರೇ ಹೆಚ್ಚಿನ ಸಂಖ್ಯೆಯಲ್ಲಿ, ತಾಲೂಕ ಕೇಂದ್ರದ ಸುತ್ತಲೂ ಹತ್ತಾರು ಪುನರ್ವಸತಿ ಗ್ರಾಮಗಳಿವೆ. ತಾಲೂಕ ಕೇಂದ್ರದ ಕಛೇರಿಗಳು ಇಲ್ಲದ ಕಾರಣ ಸಂತ್ರಸ್ತರು ಹಲವು ರೀತಿಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ ಎಂದು ಸಮಸ್ಯೆಗಳನ್ನು ಸಚಿವರ ಎದುರು ಬಿಚ್ಚಿಟ್ಟರು.
ಹೀಗಾಗಿ ಬರುವ ಒಂದು ತಿಂಗಳೊಳಗೆ ನಿಡಗುಂದಿ ತಾಲೂಕ ಮಟ್ಟದ ಕಛೇರಿಗಳನ್ನು ತೆರೆಯುವ ಕುರಿತು ಕಂದಾಯ ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸುವಂತೆ ಮನವಿ ಮಾಡಿದರು.
ನಿಡಗುಂದಿ ನಾಗರಿಕರ ಬೇಡಿಕೆಗಳನ್ನು ಸಮಚಿತ್ತದಿಂದ ಆಲಿಸಿದ ಸಚಿವ ಶಿವಾನಂದ ಪಾಟೀಲ ಅವರು, ನಮ್ಮ ಸರ್ಕಾರ ಬಜೆಜನಲ್ಲಿ ನಿಡಗುಂದಿ ತಾಲೂಕಿನ ಪ್ರಜಾಸೌಧ ನಿರ್ಮಾಣಕ್ಕೆ 8.60 ಕೋಟಿ ಅನುದಾನ ಒದಗಿಸಿದೆ. ಈಗಾಗಲೇ ಅನುಮೋದನೆಗಾಗಿ ಸಮಗ್ರ ಯೋಜನಾ ವರದಿ ಸಲ್ಲಿಸಲಾಗಿದ್ದು, ಶೀಘ್ರವೇ ಯೋಜನೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.
ತಾಲೂಕ ಪ್ರಜಾಸೌಧ ನಿರ್ಮಾಣದ ಬಳಿಕ ತಾಲೂಕ ಆಡಳಿತಕ್ಕೆ ಅಗತ್ಯ ಇರುವ ಕಛೇರಿಗಳು ಕಾರ್ಯಾರಾಂಭ ಮಾಡಲಿವೆ ಎಂದರು.
4.85 ಕೋಟಿ ರೂ. ವೆಚ್ಚದಲ್ಲಿ ನಿಡಗುಂದಿ ಪಟ್ಟಣದಲ್ಲಿ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕ ಪಂಚಾಯತ್ ಹಾಗೂ ಪಶು ಆಸ್ಪತ್ರೆ, ಸರ್ಕಾರಿ ಐಐಟಿ ಕಾಲೇಜು ಕಾರ್ಯಾರಂಭ ಮಾಡಿವೆ. ಅಗ್ನಿಶಾಮಕ ಠಾಣೆ ಮಂಜೂರಾಗಿದ್ದು, ಅಮೃತ 2.0 ಯೋಜನೆ ಅಡಿಯಲ್ಲಿ ಪಟ್ಟಣದ ಕುಡಿಯುವ ನೀರಿನ ಆಂತರಿಕ ಕೊಳವೆ ಮಾರ್ಗ ನಿರ್ಮಾಣಕ್ಕೆ 34.20 ಕೋಟಿ ರೂ. ಅನುದಾನದಲ್ಲಿ ಕಾಮಗಾರಿಗೆ ಟಂಡರ್ ಕರೆದು, ಕಾರ್ಯಾದೇಶ ನೀಡಲಾಗಿದೆ ಎಂದು ವಿವರಿಸಿದರು.
ಉಳಿದಂತೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ತ್ವರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಿಡಗುಂದಿ ಪ್ರಮುಖರಾದ ಸಂಗಣ್ಣ ಕೋತಿನ, ಶಿವಾನಂದ ಮುಚ್ಚಂಡಿ, ಎಸ್.ಜಿ. ನಾಗಠಾಣ, ಶಂಕ್ರಪ್ಪ ರೇವಡಿ, ತಮ್ಮಣ್ಣ ಬಂಡಿವಡ್ಡರ, ಶೇಖರ ದೊಡಮನಿ, ಬಸವರಾಜ ಕುಂಬಾರ, ಶಿವಾನಂದ ಅವಟಿ, ಸಂಗಮೇಶ ಗೂಗ್ಯಾಳ, ಬಸಯ್ಯ ಪತ್ರಿಮಠ, ಬಸವರಾಜ ವಂದಾಲ, ಸುರೇಶ ಬಾಗೇವಾಡಿ, ಹನುಮಂತ ಬೇವಿನಕಟ್ಟಿ, ಈರಪ್ಪ ಗೋನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.