Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಥಮ ಚಿಕಿತ್ಸೆ ಕ್ರಮದಿಂದ ಗಾಯಾಳುಗಳ ಜೀವ ರಕ್ಷಿಸಬಹುದು
(ರಾಜ್ಯ ) ಜಿಲ್ಲೆ

ಪ್ರಥಮ ಚಿಕಿತ್ಸೆ ಕ್ರಮದಿಂದ ಗಾಯಾಳುಗಳ ಜೀವ ರಕ್ಷಿಸಬಹುದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ವಿಶ್ವ ಆಘಾತ ದಿನ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಮುಂದುವರೆದ ಆಘಾತ ಜೀವನ ಆಸರೆ(ATLS) ಮತ್ತು ಹೃದಯ ಶ್ವಾಸಕೋಷಗಳ ಪುನರುಜ್ಜೀವನ(CPR) ತರಬೇತಿ ಶಿಬಿರ ನಡೆಯಿತು.
ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಈ ತರಬೇತಿ ಶಿಬಿರದಲ್ಲಿ ಜಿಲ್ಲಾ ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ ನೀಡಲಾಯಿತು.
ಈ ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹತ್ತಿ, ರಸ್ತೆ ಅಪಘಾತ ಮತ್ತೀತರ ತುರ್ತು ಸಂದರ್ಭಗಳಲ್ಲಿ ಪ್ರತ್ಯಕ್ಷದರ್ಶಿಗಳು ಆಪತ್ಭಾಂದವರಂತೆ ಪ್ರಥಮ ಚಿಕಿತ್ಸೆ ಕ್ರಮಗಳನ್ನು ಅನುಸರಿಸಿದರೆ ಗಾಯಾಳುಗಳ ಜೀವ ರಕ್ಷಿಸಬಹುದು. ಈ ನಿಟ್ಟಿನಲ್ಲಿ ಬಿ.ಎಲ್.ಡಿ.ಈ ಆಸ್ಪತ್ರೆಯ ವೈದ್ಯರ ತಂಡವು ಜಿಲ್ಲಾ ಪೊಲೀಸ್ ಸಿಬ್ಬಂದಿಗಾಗಿ ತರಬೇತಿ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ, ಡಾ. ಮಂಜುನಾಥ.ಕೋಟೆಣ್ಣವರ, ಜನಸಾಮಾನ್ಯರಲ್ಲಿ ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪ್ರಥಮ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಸಂಭವನೀಯ ಮರಣ ಪ್ರಮಾಣವನ್ನು ತಗ್ಗಿಸುವುದು ವಿಶ್ವ ಆಘಾತ ದಿನಾಚರಣೆಯ ಉದ್ದೇಶವಾಗಿದೆ. ರಸ್ತೆ ಅಪಘಾತ ಸಂದರ್ಭಗಳಲ್ಲಿ ಸಂಚಾರಿ ಅಥವಾ ಸಿವಿಲ್ ಪೊಲೀಸರು ಮೊದಲಿಗೆ ಘಟನಾ ಸ್ಥಳಕ್ಕೆ ಧಾವಿಸುತ್ತಾರೆ. ಆಪದ್ಙಾಂಧವರಂತೆ ಇವರು ಕಾರ್ಯ ನಿರ್ವಹಿಸಲು ನೆರವಾಗಲು ಈ ತರಬೇತಿ ಶಿಬಿರ ಆಯೋಜಿಸಲಾಗಿದೆ. ಎಲ್ಲ ಸಿಬ್ಬಂದಿ ಶಿಬಿರದ ಸದುಪಯೋಗ ಪಡೆದು ಗಾಯಾಳುಗಳ ಪಾಲಿಗೆ ದೇವರಾಗು ಎಂದು ಹೇಳಿ ಜೀವರಕ್ಷಣೆಗೆ ಪ್ರಥಮ ಚಿಕಿತ್ಸೆಯ ಕ್ರಮಗಳನ್ನು ವಿವರಿಸಿದರು.
ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಸಹಪ್ರಾಧ್ಯಾಪಕ ಹಾಗೂ ವಿಜಯಪುರ ಜಿಲ್ಲಾ ಜಿಲ್ಲಾ ವೈದ್ಯಕೀಯ ಸಂಘದ ನಿಕಟಪೂರ್ವ ಅಧ್ಯಕ್ಷ ಡಾ. ದಯಾನಂದ ಬಿರಾದಾರ ಅವರು ರಸ್ತೆ ಅಪಘಾತದ ಸಂದರ್ಭಗಳಲ್ಲಿ ಪ್ರತ್ಯಕ್ಷದರ್ಶಿಗಳು ಗಾಯಾಳುಗಳ ಫೋಟೋ ಮತ್ತು ವಿಡಿಯೋ ಮಾಡುವುದು ಬಿಟ್ಟು, ಗಾಯಾಳುವಿನ ಬಾಯಲ್ಲಿ ನೀರನ್ನು ಹಾಕದೆ, ಆ್ಯಂಬುಲನ್ಸ್ ಗೆ ಕರೆ ಮಾಡಬೇಕು. ಅಲ್ಲದೇ, ಗಾಯಕ್ಕೆ ಬಟ್ಟೆಯನ್ನು ಕಟ್ಟಿ ಸಂಗಡಿಗರ ಸಹಾಯದಿಂದ ರಕ್ತಸ್ರಾವ ತಡೆಯಲು ಮತ್ತು ಇತರ ಪ್ರಥಮ ಚಿಕಿತ್ಸೆಯನ್ನು ನೀಡಿ ಅಮೂಲ್ಯ ಸಮಯದಲ್ಲಿ ಗಾಯಾಳುವಿನ ಜೀವ ಉಳಿಸಿ ಪುಣ್ಯಕಟ್ಟಿಕೊಳ್ಳಬೇಕು ಎಂದು ಹೇಳಿ, ಮನುಷ್ಯ ಪ್ರತಿರೂಪಗಳ ಮೇಲೆ ಮುಂದುವರೆದ ಆಘಾತ ಜೀವನ ಆಸರೆ ಮತ್ತು ಹ್ರದಯ ಶ್ವಾಸಕೋಶಗಳ ಪುನರುಜ್ಜೀವನ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾದ ಡಾ. ಗಿರೀಶ.ಕುಲ್ಲೊಳ್ಳಿ, ಡಾ. ವಿಕ್ರಂ.ಸಿಂದಗಿಕರ, ಅರಿವಳಿಕೆಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ.ಕಟ್ಟಿ, ಡಾ. ಸಂತೋಷ.ಕರ್ಜಗಿ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ, ಪೋಲಿಸ್ ಅಧಿಕಾರಿ ಎಸ್. ಕೆ. ಗೋಟ್ಯಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ.ಬಳೂರಕರ, ನ್ಯಾಯವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಉದಯಕುಮಾರ.ನುಚ್ಚಿ ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ಪ್ರಾಯೋಗಿಕ ತರಬೇತಿಯನ್ನು ಪಡೆದ ಸಂಪನ್ಮೂಲ ವ್ಯಕ್ತಿಗಳಾದ ವೈದ್ಯರೊಂದಿಗೆ ಸಂವಾದ ನಡೆಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ
    In (ರಾಜ್ಯ ) ಜಿಲ್ಲೆ
  • ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ದೇಶದ ಸಹಕಾರಿ ರಂಗದಲ್ಲೇ ಕರ್ನಾಟಕ ಬೆಸ್ಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಪಾಠ ಕಲಿಸಬೇಕಿದೆ :ಹಗೇದಾಳ
    In (ರಾಜ್ಯ ) ಜಿಲ್ಲೆ
  • ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ಆದೇಶ ಉಲ್ಲಂಘನೆ: ಯುಕೆಪಿ ಜೀಪ್, ಕಂಪ್ಯೂಟರ್ ಜಪ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.