ಉದಯರಶ್ಮಿ ದಿನಪತ್ರಿಕೆ
ಇಂಡಿ: ರಾಣಿ ಚನ್ನಮ್ಮಳ ಜೀವನವು ಧೈರ್ಯ ದೇಶಭಕ್ತಿಯ ಪ್ರತೀಕ.ಕಿತ್ತೂರು ರಾಣಿ ಚನ್ನಮ್ಮಳ ಜೀವನವು ಧೈರ್ಯ ತ್ಯಾಗ ಮತ್ತು ದೇಶಭಕ್ತಿಯ ಪ್ರತೀಕವಾಗಿದೆ. ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಸ್ಥಿರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ ಹೇಳಿದರು.
ಅವರು ಇಂಡಿ ನಗರದಲ್ಲಿ ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ 247 ನೇ ಜಯಂತಿ ಹಾಗೂ ವಿಜಯಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ವಿ ಎಚ್ ಬಿರಾದಾರ, ನಿವೃತ್ತ ಪ್ರೌಢಶಾಲೆ ಸಹ ಶಿಕ್ಷಕ ಆರ್ ಬಿ ಬಿರಾದಾರ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ ಹಿಕ್ಕನಗುತ್ತಿ ಲಿಂಗಾಯತ ಮಾಹಾಮಠದ ಪ್ರಭುಲಿಂಗ ಶರಣರು ಮಾತನಾಡಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ದಂಡಾಧಿಕಾರಿ ಎಸ್ ಬಿ ಕಡಕಬಾವಿ, ಗ್ರೇಡ್ -2 ತಹಶೀಲ್ದಾರ ಧನಪಾಲ್ ಶೆಟ್ಟಿ ದೇವೂರ, ಮಾದೇವಪ್ಪ ಏವೂರ ಆರ್ ಬಿ ಗದ್ಯಾಳ ಇಂಡಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ನಂದೀಪ್ ರಾಠೋಡ, ಇಂಡಿ ಶಿಕ್ಷಣಾಧಿಕಾರಿ ಸೈಯಿದಾ ಅನಿಸಾ ಮುಜಾವರ ಇಂಡಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ರಾವೂರ ಇಂಡಿ ತಾಲೂಕು ಪಂಚಮಸಾಲಿ ಸಂಘದ ಕಾರ್ಯದರ್ಶಿ ಶಿವಾನಂದ ಚಾಳಿಕಾರ ರಾಮಸಿಂಗ್ ಕನ್ನೊಳ್ಳಿ ಸುಧಾಕರಗೌಡ ಬಿರಾದಾರ ಪ್ರಭು ಹೊಸಮನಿ ಅನೀಲಗೌಡ ಬಿರಾದಾರ ಆರ್ ಬಿ ಪಾಟೀಲ ಶರಣಗೌಡ ಬಂಡಿ ಬಾಳು ಮುಳಜಿ ಶಿವಾನಂದ ದೇವರ ಹಾಗೂ ಕಂದಾಯ ಇಲಾಖೆಯ ಸಂತೋಷ ಹೊಟಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಇಸಿಓ ಎ ಸಿ ಹುಣಸಗಿ ಅವರು ನಿರೂಪಿಸಿದರು.

