ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿಜಯಪುರ ನಗರದ ಪ್ರಮುಖ ಬೀದಿಗಳಲ್ಲಿರುವ ಎಲ್ಲ ಅಂಗಡಿಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಶೇ.೬೦ ರಷ್ಟು ನಾಮಫಲಕಗಳ ಅಳವಡಿಸುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅ.೨೭ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಬಿಎಲ್ಡಿಇ ಆಸ್ಪತ್ರೆಯಿಂದ ಗಾಂಧಿ ವೃತ್ತದವರೆಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಐಡಿ ಕಾರ್ಡ್ನೊಂದಿಗೆ ಭಾಗವಹಿಸಬೇಕು. ಈ ಕುರಿತು ಹಾಜರಾತಿ ಪುಸ್ತಕವನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಅಭಿಯಾನಕ್ಕೆ ಗೈರಾದ ಅಧಿಕಾರಿಗಳ ಹೆಸರುಗಳನ್ನು ಮರುದಿನ ಎಲ್ಲ ಪತ್ರಿಕೆಗಳಲ್ಲಿ ಪ್ರಕಟಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ ಅವರು ಎಚ್ಚರಿಕೆ ನೀಡಿದ್ದಾರೆ.
