Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಮೌಲ್ಯಗಳನ್ನು ಸನ್ಮಾರ್ಗಕ್ಕೆ ಒಯ್ಯುವ ದಾರಿದೀಪ ರಾಮಾಯಣ
(ರಾಜ್ಯ ) ಜಿಲ್ಲೆ

ಸಾಮಾಜಿಕ ಮೌಲ್ಯಗಳನ್ನು ಸನ್ಮಾರ್ಗಕ್ಕೆ ಒಯ್ಯುವ ದಾರಿದೀಪ ರಾಮಾಯಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಖಿಲ ಭಾರತ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭವಗೋಷ್ಠಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶ್ವಕ್ಕೆ ರಾಮಾಯಣ ಮಹಾಕಾವ್ಯದ ಮೂಲಕ ಭಾರತೀಯ ಸಾಂಸ್ಕೃತಿಕ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾಕವಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ ಎಂದು ಹಿರಿಯ ನ್ಯಾಯವಾದಿ ಕೆ.ಎಫ್. ಅಂಕಲಗಿ ಹೇಳಿದರು.
ನಗರದ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣದಲ್ಲಿ ಸರ್ವಕಾಲಿಕ ಮೌಲ್ಯಗಳು, ಜನಪರ ನಿಲವುಗಳು, ಪೂರ್ಣಪ್ರಜ್ಞೆ ವಾಸ್ತವತೆಯ ಪ್ರತಿರೂಪ ಮೌಲ್ಯಗಳ ವಿವಿಧ ಸಂಸ್ಕೃತಿಗಳ ಸಮನ್ವಯತೆ ತಿಳುವಳಿಕೆಯ ವಿಶ್ವಕೋಶವಿದೆ. ರಾಮಾಯಣದ ತತ್ವ ಆದರ್ಶಗಳನ್ನು ಅದರಂತೆ ಮೂಲ ಅಂಶಗಳು ಬೆಳಕಿಗೆ ಬರಬೇಕಾಗಿದೆ. ಮೂಲಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದರು.
ಮಹಾಸಭೆಯ ಕೋಶಾಧ್ಯಕ್ಷ ಮ.ಗು. ಯಾದವಾಡ ಮಾತನಾಡಿ, ಇತಿಹಾಸವನ್ನು ತಿಳಿದುಕೊಂಡು ಸಮಾಜದ ಜನರನ್ನು ಜಾಗೃತಿ ಮಾಡಬೇಕು. ರಾಷ್ಟ್ರೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದರು.
ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡುತ್ತ, ಭಾರತದ ಭವ್ಯ ಪರಂಪರೆಯಲ್ಲಿ ರಚಿತವಾದ ಮೂಲ ರಾಮಾಯಣ ಜ್ಞಾನವನ್ನು ಕುರಿತಾಗಿದೆ. ಮಹರ್ಷಿ ವಾಲ್ಮೀಕಿ ಸಂಸ್ಕೃತವನ್ನು ಕಲಿತು ರಾಮಾಯಣ ರಚಿಸಿದ್ದಾರೆ. ಶ್ರೇಷ್ಠತೆ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನ ಕುರಿತಾಗಿ ಪರಿಚಯಿಸುವಲ್ಲಿ ಸರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ಸನ್ಮಾರ್ಗಕ್ಕೆ ಒಯ್ಯುವ ದಾರಿದೀಪವಾಗಿವೆ. ೨೪ ಸಾವಿರ ಶ್ಲೋಕಗಳನ್ನು ಹೊಂದಿದ ಅವೆಲ್ಲವೂ ಮಾನವ ಕುಲದ ಸೈದ್ದಾಂತಿಕ ವಿಚಾರಧಾರೆಗಳನ್ನು ಜ್ಞಾನದ ಚಿಂತನೆಯನ್ನು ತಿಳಿಸಿಕೊಡುತ್ತದೆ. ಅವುಗಳನ್ನು ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಶರಣೆ ಅಕ್ಕಮಹಾದೇವಿ ಬುರ್ಲಿ, ಬಿ.ಆರ್. ಬನಸೋಡೆ ವಚನಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಡಾ. ವಿ.ಡಿ. ಐಹೊಳ್ಳಿ, ಮಹಾದೇವ ಹಾಲಳ್ಳಿ, ಎಸ್.ಎಸ್. ಪಾಟೀಲ, ಅಪ್ಪಾಸಾಹೇಬ ಕೋರಿ, ಜಂಬುನಾಥ ಕಂಚ್ಯಾಣಿ, ಈರಣ್ಣ ತೊಂಡಿಕಟ್ಟಿ, ಸುಭಾಸ ಯಾದವಾಡ, ಜಗದೀಶ ಮೋಟಗಿ, ಮಲ್ಲಿಕಾರ್ಜುನ ಅಮರಣ್ಣವರ ಉಪಸ್ಥಿತರಿದ್ದರು.
ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಉಪಾಧ್ಯಕ್ಷ ಸಹದೇವ ನಾಡಗೌಡರ ವಂದಿಸಿದರು. ಸಾಹಿತಿ ಸಂಗಮೇಶ ಬದಾಮಿ ಕಾರ್ಯಕ್ರಮ ನಿರ್ವಹಿಸಿದರು. ಶರಣರು, ಶರಣೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.