Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂದೂ ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ
(ರಾಜ್ಯ ) ಜಿಲ್ಲೆ

ಹಿಂದೂ ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಚಿವ ಡಾ. ಎಂ.ಬಿ.ಪಾಟೀಲ ರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಿವಿಮಾತು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಚಿವ ಡಾ.ಎಂ.ಬಿ. ಪಾಟೀಲರು ಮುಖ್ಯಮಂತ್ರಿಯಾಗಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ತಾವು ಮುಖ್ಯಮಂತ್ರಿಯಾಗಲು ಹಿಂದೂ ಸಮಾಜವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ಈ ಹಿಂದೆಯೂ ಲಿಂಗಾಯತ ಧರ್ಮ ಪ್ರತ್ಯೇಕ ವಿಚಾರ ವಿಷಯ ಮುನ್ನೆಲೆಗೆ ತಂದು ಕೈ ಸುಟ್ಟುಕೊಂಡಿದ್ದೀರಿ, ಈಗ ಪುನಃ ಧರ್ಮ ಒಡೆದು ಮುಖ್ಯಮಂತ್ರಿಯಾಗುವ ಕೆಲಸ ಬೇಡ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗುವ ಇರಾದೆಯಲಿರುವ ಸಚಿವ ಪಾಟೀಲರು ಈ ಧರ್ಮ ವಿಭಜನೆಯಲ್ಲಿ ತೊಡಗಿದ್ದಾರೆ,
೨೦೨೮ ರಲ್ಲಿ ಮುಖ್ಯಮಂತ್ರಿ ಆಗುವ ಕನಸು ಕಾಣಬೇಡಿ, ನವ್ಹೆಂಬರ್ ಕ್ರಾಂತಿಯಲ್ಲಿಯೇ ನೀವು ಮುಖ್ಯಮಂತ್ರಿ ಆಗಬೇಕು ಹೊರತು ಮುಂದೆ ನಾನು ಮುಖ್ಯಮಂತ್ರಿ ಆಗುವೆ ಎಂಬ ಕನಸು ಕಾಣಲು ಹೋಗಬೇಡಿ, ಮುಂದೆ ಬಿಜೆಪಿ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.
ಕನೇರಿ ಶ್ರೀಗಳ ಮನಸ್ಸಿಗೆ ನೋವು ಮಾಡುವ ಕೆಲಸ ನಡೆದಿದೆ, ಇದೇ ರೀತಿ ಪರಿಸ್ಥಿತಿ ಆದರೆ ಜನರೇ ದಂಗೆ ಏಳುತ್ತಾರೆ, ನಾವು ಸಹ ಧರ್ಮಸ್ಥಳ ಮಾದರಿಯಲ್ಲಿ ಹೋರಾಟ ನಡೆಸಲು ಬದ್ದ ಎಂದರು.
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ೩೫ ದಿನಗಳಿಂದ ಹೋರಾಟ ನಡೆಯುತ್ತಿದೆ, ಆ ಸ್ಥಳಕ್ಕೆ ಮುಖ್ಯಮಂತ್ರಿಗಳು ಭೇಟಿ ‌ನೀಡಬೇಕಿತ್ತು, ಆದರೆ ಈ ಸರ್ಕಾರ ಮಾತ್ರ ಯಾರಿಗೂ ಸ್ಪಂದನೆಯೇ ಇಲ್ಲದಂತಾಗಿದೆ ಎಂದರು.
ರೈತ ಮೋರ್ಚಾ ಪ್ರಮುಖ ಹಾಗೂ ನ್ಯಾಯವಾದಿ ಡಿ.ಜಿ. ಬಿರಾದಾರ ಮಾತನಾಡಿ, ರೈತರಿಂದ
ಕಾಲುವೆಗಾಗಿ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ದೊರಕಿಲ್ಲ, ಅತ್ತ ಜಮೀನುಗಳಿಗೆ ನೀರು ದೊರಕಿಲ್ಲ ಈ ರೀತಿಯಾದರೆ ರೈತರು ಎಲ್ಲಿ ಹೋಗಬೇಕು? ವಿಜಯಪುರದಲ್ಲಿಯೇ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ, ಕೋರ್ಟ್ ಪರಿಹಾರ ಆದೇಶ ನೀಡಿದ ಪ್ರಕರಣಗಳಲ್ಲಿಯೂ ಇಂದಿಗೂ ಸರ್ಕಾರ ಪರಿಹಾರ ನೀಡಿಲ್ಲ, ಈ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ರೂ. ಪರಿಹಾರ ರೈತರಿಗೆ ಸೇರಿಲ್ಲ ಇದೊಂದು ದಪ್ಪ ಚರ್ಮದ ಸರ್ಕಾರ ಎಂದರು.
ಜಿ.ಪಂ. ಮಾಜಿ ಸದಸ್ಯ ಸಾಬು ಮಾಶ್ಯಾಳ, ಮುಕಂಡ ಈರಣ್ಣ ರಾವೂರ, ಜಿಲ್ಲಾ ವಕ್ತಾರ ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬಿಲ್ ಪಾವತಿಯಾಗದೆ ಗುತ್ತಿಗೆದಾರರಿಗೆ ಸಂಕಷ್ಟ!

ರಾಜ್ಯ ಅಷ್ಟೇ ಅಲ್ಲ ‌ಜಿಲ್ಲೆಯ ವ್ಯವಸ್ಥೆ ಅಧೋಗತಿಗೆ ಹೋಗಿದೆ, ಬ್ರಿಟಿಷ್ ಆಡಳಿತ ನೆನಪಿಸುತ್ತಿದೆ. ಜಿಲ್ಲೆಯ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಿಲ್ಲ, ಸಾಲದ ಹೊರೆಯಾಗಿ ಅನೇಕ ಗುತ್ತಿಗೆದಾರರು ಊರು ಬಿಡುವಂತಾಗಿದೆ ಇದರ ಬಗ್ಗೆ ಗಮನ ಹರಿಸುವ ಕಾರ್ಯವಾಗಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿ ಅಸಮಾಧಾನ ವ್ಯಕ್ತಪಡಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.