ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ಚುನಾವಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು “ಉದಯರಶ್ಮಿ” ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಹಿರಿಯ ಪತ್ರಕರ್ತರಾದ ಅಶೋಕ ಯಡಳ್ಳಿ, ಮಹೇಶ ಶೆಟಗಾರ, ಶರಣು ಮಸಳಿ, ಪ್ರಕಾಶ ಬೆಣ್ಣೂರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಸಂಗನಗೌಡ ಪಾಟೀಲ, ಗುರು ಗದ್ದನಕೇರಿ, ಶಶಿ ಮೆಂಡೆಗಾರ, ರಾಹುಲ್ ಆಪ್ಟೆ, ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಗೋಪಾಲ ಕನಿಮಣಿ, ಚಿದಂಬರ (ಪುಟ್ಟು) ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಸುನೀಲ ಭಾಸ್ಕರ, ಪವನ ಕುಲಕರ್ಣಿ, ರಾಜೇಂದ್ರಕುಮಾರ ಹಜೇರಿ, ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರಿದ್ದರು.

ಹದಿನೆಂಟು ನಾಮಪತ್ರ ಸಲ್ಲಿಕೆ :ಮಲಗೊಂಡ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಸ್ಪರ್ಧಿಸಲು ಅ. 24 ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ವಿವಿಧ 26 ಸ್ಥಾನಗಳಿಗಾಗಿ ಒಟ್ಟು ಹದಿನೆಂಟು 18 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.
ರಾಜ್ಯ ಕಾರ್ಯಕಾರಣಿ ಸ್ಥಾನಕ್ಕೆ ಎರಡು, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಒಂದು, ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಮೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಒಂದು, ಖಜಾಂಚಿ ಸ್ಥಾನಕ್ಕೆ ಒಂದು, ಕಾರ್ಯದರ್ಶಿ ಸ್ಥಾನಕ್ಕೆ ಎರಡು, ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ಎಂಟು ಹೀಗೆ ಒಟ್ಟು ಹದಿನೆಂಟು ನಾಮಪತ್ರಗಳು ಸಲ್ಲಿಸಿದ್ದಾರೆಂದು ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ಕಾಲಾವಕಾಶವಿದೆ. ಅ.28 ರಂದು ನಾಮಪತ್ರ ಪರಿಶೀಲನೆ, 30/10/2025 ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ಇದೆ. ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರಿಗೆ ಮತದಾನವಿದ್ದು, ಅಂದೇ ಮಧ್ಯಾಹ್ನ 3/30 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಹಿರಿಯ ಪತ್ರಿಕೋದ್ಯಮಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆಅಶೋಕ ಯಡಳ್ಳಿ ನಾಮಪತ್ರ ಸಲ್ಲಿಕೆ
ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಹಿರಿಯ ಪತ್ರಕರ್ತ ಹಾಗೂ ಟಿವಿ೯ ಜಿಲ್ಲಾ ವರದಿಗಾರ ಅಶೋಕ ಯಡಳ್ಳಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಖಜಾಂಚಿ ಸ್ಥಾನಕ್ಕಾಗಿ ಸ್ಪರ್ಧಿಸಲು ನಾಡೋಜ ಪತ್ರಿಕೆಯ ಜಿಲ್ಲಾ ವರದಿಗಾರ ರಾಹುಲ್ ಆಪ್ಟೆ ಅವರು ತಮ್ಮ ನಾಮಪತ್ರ ಸಲ್ಲಿಸಿದರು.
ಈ ವೇಳೆ ಹಿರಿಯ ಪತ್ರಕರ್ತರಾದ ಇಂದುಶೇಖರ ಮಣೂರ, ಮಹೇಶ ಶೆಟಗಾರ, ಶರಣು ಮಸಳಿ, ಪ್ರಕಾಶ ಬೆಣ್ಣೂರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಸಂಗನಗೌಡ ಪಾಟೀಲ, ಗುರು ಗದ್ದನಕೇರಿ, ಶಶಿ ಮೆಂಡೆಗಾರ, ರಾಹುಲ್ ಆಪ್ಟೆ, ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಗೋಪಾಲ ಕನಿಮಣಿ, ಚಿದಂಬರ (ಪುಟ್ಟು) ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಸುನೀಲ ಭಾಸ್ಕರ, ಪವನ ಕುಲಕರ್ಣಿ, ರಾಜೇಂದ್ರಕುಮಾರ ಹಜೇರಿ, ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರಿದ್ದರು.

