ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ
ಉದಯರಶ್ಮಿ ದಿನಪತ್ರಿಕೆ
ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ.
ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ ಅವಶ್ಯಕತೆ ಇರುವಲ್ಲಿ ವಸತಿ ನಿಲಯಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು. ನೂತನ ತಾಲೂಕ ಕೇಂದ್ರದಲ್ಲಿ ಪ್ರಜಾಸೌಧ ನಿರ್ಮಾಣವಾದರೆ ಎಲ್ಲ ಕಚೇರಿಗಳು ಒಂದೇಡೆ ಪ್ರಾರಂಭವಾಗುತ್ತವೆ. ಇದರಿಂದ ಕ್ಷೇತ್ರದ ಜನತೆಗೆ ಅನುಕೂಲವಾಗುತ್ತದೆ. ಅದಕ್ಕಾಗಿ ಸತತ ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಮೌಲಾನ್ ಅಜಾದ್ ಶಾಲೆಗೆ ಮಂಜೂರಾತಿ ದೊರೆತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಪಟ್ಟಣದಲ್ಲಿ ಸುಂದರ ಕಟ್ಟಡ ನಿರ್ಮಾಣಗೊಂಡಿದೆ ಇದರ ಸದುಪಯೋಗವನ್ನು ಇಲ್ಲಿ ಕಲಿಯುವ ಮಕ್ಕಳು ಪಡೆದುಕೊಂಡು ಬದುಕು ಸುಂದರಗೊಳಿಸಿಕೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕಾಧಿಕಾರಿ ರವೀಂದ್ರ ಬಂಥÀನಾಳ. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ. ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ. ಕಾಶೀನಾಥ ಜಮಾದಾರ. ಸಿಂಧೂರ ಡಾಲೇರ. ನಿಲಯ ಮೇಲ್ವಿಚಾರಕ ನಾನಾಗೌಡ ಸಿದ್ದರೆಡ್ಡಿ, ನಿಲಯಪಾಲಕ ಎನ್.ಪಿ.ನಾಸಿ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಇಂಜನೀಯರ ಬಸವರಾಜ. ಪ್ರಕಾಶ ಮಲ್ಲಾರಿ. ಬಸವರಾಜ ದೇವಣಗಾಂವ, ಸೋಮು ದೇವೂರ. ವಿನೋದ ಚವ್ಹಾಣ, ಸೈಫನ್ ಮುಲ್ಲಾ. ಗಿರೀಶ ಕಟಕದೊಂಡ ಇದ್ದರು.

