ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಶಿಸಿ ಹೊಗುತ್ತಿರುವ ದೇಶಿ ಕ್ರೀಡೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದು ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ೩ ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸಿಂದಗಿ ನಗರದಲ್ಲಿ ಶಾಸಕ ಅಶೋಕ ಮನಗೂಳಿ ಅವರು ಒಬ್ಬ ಕ್ರೀಡಾಪಟುವಾಗಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಿರುವ ಕಾರ್ಯ ಶ್ಲಾಘನೀಯವಾಗಿದೆ. ಇಂದಿನ ಯುವಜನಾಂಗ ಗ್ರಾಮೀಣ ಮಟ್ಟದ ಕ್ರೀಡೆಗಳ ಕಡೆಗೆ ಒಲವು ಕಡಿಮೆಯಾಗುತ್ತಿದೆ. ಇಂದರಿಂದ ಅವುಗಳ ಅಸ್ಥಿತ್ವ ನಸಿಸಿ ಹೋಗುತ್ತದೆ. ಮೋಬೈಲ್ಗೀಳನ್ನು ಬಿಡಬೇಕು ಇಂತಹ ಕ್ರೀಡೆಗಳ ಕಡೆ ಹೆಚ್ಚು ಆಸಕ್ತಿ ತೋರಬೇಕು ಎಂದರು.
ಈ ವೇಳೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ ಮಾತನಾಡಿ, ಸಿಂದಗಿ ನಗರದಲ್ಲಿ ೩ ದಿನಗಳ ಕಾಲ ಕ್ರೀಡಾ ಹಬ್ಬವಾಗಿ ನಿರ್ಮಾಣವಾಗಿದ್ದು ಸಂತಸ. ಶಾಸಕ ಅಶೋಕ ಮನಗೂಳಿ ಅವರು ಈ ಸಂಸ್ಥೆಯ ಅಧ್ಯಕ್ಷರು ನಾವು ಕ್ರೀಡಾ ಆಯೋಜನೆಗೆ ಮನವಿ ಮಾಡಿದಾಗ ಧನಾತ್ಮಕವಾಗಿ ಸ್ಪಂದಿಸಿ ಕ್ರೀಡಾ ಪಟುಗಳಿಗೆ ಮತ್ತು ತರಬೇತುದಾರರಿಗೆ ೩ ದಿನಗಳ ಉತ್ತರ ಕರ್ನಾಟಕ ಶೈಲಿಯ ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ. ಇಲಾಖೆಯ ಪರವಾಗಿ ಶಾಸಕರಿಗೆ ಧನ್ಯವಾದಗಳು ತಿಳಿಸಿದ ಅವರು ಮುಂದಿನ ದಿನಗಳಲ್ಲಿ ಇಲಾಖೆವತಿಯಿಂದ ನಡೆಯುವ ರಾಷ್ಟçಮಟ್ಟದ ಬಾಲಿಬ್ಹಾಲ್ ಕ್ರೀಡಾಕೂಟ ನೆರವೇರಿಸಲು ಸಮ್ಮತಿ ಸೂಚಿಸಿದ್ದಾರೆ. ಪಂದ್ಯಾವಳಿಯ ಯಶಸ್ವಿಗೆ ಸಹಕರಿಸಿದ ಜಿಲ್ಲೆಯ ದೈಹಿಕ ಉಪನ್ಯಾಸಕರಿಗೆ ಮತ್ತು ಸಾರ್ವಜನಿಕರಿಗೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕ, ನ್ಯಾಯವಾದಿ ಬಿ.ಜಿ.ನೆಲ್ಲಗಿ ಕ್ರೀಡಾ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.
ವೇದಿಕೆ ಮೇಲೆ ಸಂಸ್ಥೆಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ, ವ್ಹಿ.ಬಿ.ಕುರುಡೆ, ಡಾ.ಅರವಿಂದ ಮನಗೂಳಿ, ಇಲಾಖೆಯ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಕೆ.ಎಚ್.ಸೋಮಾಪೂರ, ಎಚ್.ಎಮ್.ಉತ್ನಾಳ, ಎಸ್.ಪಿ.ವಾಲಿಕಾರ, ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ, ಶಾಂತೇಶ ದುರ್ಗಿ, ಕೆ.ಎ.ಉಪ್ಪಾರ, ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಚಾರ್ಯರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಇದ್ದರು.

