Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ

ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ

ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ಹಿತ ಎರಡು ಮುಖ್ಯ
(ರಾಜ್ಯ ) ಜಿಲ್ಲೆ

ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ಹಿತ ಎರಡು ಮುಖ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಯಮಾವಳಿ ಪರಿಷ್ಕರಣೆ ಮಾಡಬೇಕು, ಇಲ್ಲವಾದರೆ ಸ್ಪಿನ್ನಿಂಗ್ ಮಿಲ್ ಮಾದರಿಯಲ್ಲಿ ಸಕ್ಕರೆ ಕಾರ್ಖಾನೆಗಳು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಅದರಲ್ಲೂ ಸಹಕಾರ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಬೆಳಕು ಚೆಲ್ಲಿದ ಅವರು, ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ಹಿತ ಎರಡು ಮುಖ್ಯ, ಆದರೆ ಕೇಂದ್ರ ಸರ್ಕಾರ ನೀತಿಗಳಿಂದ ಸಹಕಾರ ವಲಯದ ಸಕ್ಕರೆ ಕಾರ್ಖಾನೆಗಳಿಗೆ ದೊಡ್ಡ ಆತಂಕ ಎದುರಾಗಿದೆ.
ಇಳುವರಿ ಆಧರಿಸಿ ಎಫ್.ಆರ್.ಪಿ. ನಿಗದಿಯಾಗುತ್ತದೆ, ಭೀಮಾತೀರದಲ್ಲಿ ಕಬ್ಭಿನ ರಿಕವರಿ ಪ್ರಮಾಣ ಕಡಿಮೆ, ಹೀಗಾಗಿ ಎಫ್.ಆರ್.ಪಿ ನಿಗದಿಗೊಳಿಸಲು ಏಕರೂಫದ ಮಾನದಂಡ ವಿಧಿಸುತ್ತಿರುವುದು ಸರಿಯಲ್ಲ, ಭೌಗೋಳಿಕವಾಗಿ ಭಿನ್ನವಾದ ಪರಿಸ್ಥಿತಿ ಇದೆ, ಹೀಗಾಗಿ ಎಂ.ಎಸ್.ಪಿ. ಘೋಷಣೆ ಮಾಡಬೇಕು, ಇಲ್ಲವಾದರೆ ಸಕ್ಕರೆ ಕಾರ್ಖಾನೆಗಳು ಸ್ಪಿನ್ನಿಂಗ್ ಮಿಲ್ ಮಾದರಿಯಲ್ಲಿ ನಶಿಸಿ ಹೋಗುವ ದಿನ ದೂರವಿಲ್ಲ ಎಂದರು.
ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳಿಂದ ಸಕ್ಕರೆ ಕಾರ್ಖಾನೆ ಉದ್ಯಮ ನೆಲಕಚ್ಚುತ್ತಿದೆ, ಇನ್ನೂ ಸಹಕಾರ ಸಕ್ಕರೆ ಕಾರ್ಖಾನೆಗಳಲ್ಲಿ ಪಾರದರ್ಶಕ ಆಡಳಿತ ಇಲ್ಲದೇ ಹೋದರೆ ಆ ಕಾರ್ಖಾನೆ ಮುಚ್ಚಿ ಹೋಗುತ್ತವೆ,
ನಬಾರ್ಡ್ ಹಾಗೂ ಆರ್.ಬಿ.ಐ. ಸಹ ಕಮರ್ಷಿಯಲ್ ಆಗಿ ಬಿಟ್ಟರೆ ಸಹಕಾರಿ ಸಂಸ್ಥೆಗಳು ಹೇಗೆ ನಡೆಸಲು ಸಾಧ್ಯ? ಸಾಲ ನೀಡುವಲ್ಲಿ ಈ ಎಲ್ಲ ಸಂಸ್ಥೆಗಳು ಸಂಪೂರ್ಣ ಕಮರ್ಷಿಯಲ್ ಆಗಿವೆ ಎಂದರು.
ಸಾಲದ ವಿಷಯದಲ್ಲಿಯೂ ವೈಜ್ಞಾನಿಕ ನಿಯಮವಾಳಿ ಇಲ್ಲ, ಇದರಿಂದಾಗಿಯೇ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಅನೇಕ ತೊಂದರೆ ಎದುರಿಸಿದೆ, ಮೊನ್ನೆ ಸಾಮಾನ್ಯ ಸಭೆಯಲ್ಲಿ ಕಾರ್ಖಾನೆ ಖಾಸಗಿಯವರಿಗೆ ಲೀಜ್ ಕೊಡುವ ಮಟ್ಟಕ್ಕೂ ವಿಷಯ ಪ್ರಸ್ತಾಪಿಸಿರುವೆ ಎಂದರು.
೮ ರಿಂದ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಖಾನೆ ಸ್ಥಾಪನೆಯಾಗುತ್ತಿವೆ, ಬೆಲೆ ನಿರ್ಧಾರದಲ್ಲೂ ಆರೋಗ್ಯಕರ ಸ್ಪರ್ಧೆ ಇಲ್ಲ, ಈ ಎಲ್ಲ ತೊಡಕುಗಳಿಂದ ಸಕ್ಕರೆ ಉದ್ಯಮ ನಲುಗುವಂತಾಗಿದೆ ಎಂದರು.

ಅಮೇರಿಕೆಯಿಂದ ಎಥೆನಾಲ್ ಆಮದು ಸಲ್ಲದು

ಎಥೆನಾಲ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ನೀತಿ ನಿಯಮವಾವಳಿಗಳು ದೊಡ್ಡ ತೊಡಕಾಗಿವೆ, ಈ ಎಲ್ಲವೂ ಮಾರ್ಪಾಡಬೇಕು, ಈ ಹಿಂದೆ ಎಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡಿದ ಪರಿಣಾಮ ದೊಡ್ಡ ಮಟ್ಟವನ್ನು ಎಥೆನಾಲ್ ಉತ್ಪಾದನೆಯಾಗುತ್ತಿದೆ, ಆದರೆ ಬೆಲೆ ಕಡಿಮೆ ಎಂದು ಅಮೇರಿಕೆಯಿಂದ ಆಮದು ಮಾಡಿಕೊಳ್ಳಲು ಮುಂದಾಗಿರುವುದು ದೊಡ್ಡ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಮೇರಿಕೆಯಿಂದ ಎಥೆನಾಲ್ ಆಮದು ಮಾಡಿಕೊಳ್ಳುವುದು ಬೇಡ ಎಂದರು.
ಉತ್ಪಾದನೆ ಮಾಡಿದ ಎಥೆನಾಲ್ ಹಾಗೂ ಪೂರಕವಾದ ಉತ್ಪನ್ನಗಳನ್ನು ಕೇಂದ್ರ ಸರ್ಕಾರ ಖರೀದಿ ಮಾಡುತ್ತಿಲ್ಲ, ಈ ರೀತಿಯಾದರೆ ಉತ್ಪಾದನೆ ಮಾಡಲು ಉತ್ತೇಜನ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ

ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ

ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ

ಶುಶ್ರೂಷ ಪರಿಷತ್ತಿನ ಸದಸ್ಯರಾಗಿ ಡಾ.ತಡಲಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ
    In (ರಾಜ್ಯ ) ಜಿಲ್ಲೆ
  • ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ
    In (ರಾಜ್ಯ ) ಜಿಲ್ಲೆ
  • ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ
    In (ರಾಜ್ಯ ) ಜಿಲ್ಲೆ
  • ಶುಶ್ರೂಷ ಪರಿಷತ್ತಿನ ಸದಸ್ಯರಾಗಿ ಡಾ.ತಡಲಗಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಶಾರ್ಟ್ ಸರ್ಕ್ಯೂಟ್ :ಸಂಪೂರ್ಣ ಕಬ್ಬು ಭಸ್ಮ
    In (ರಾಜ್ಯ ) ಜಿಲ್ಲೆ
  • ಬೆರಗು ಪ್ರಶಸ್ತಿ: ಡಾ.ನಾಗರಾಳಗೆ ಸಮಗ್ರ ಸಾಹಿತ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಬಾನಂಗಳದಲ್ಲಿ ಚಿತ್ರ ವಿಚಿತ್ರ ಚಿತ್ತಾರ ಬಿಡಿಸಿದ ಪಟಾಕಿಗಳು
    In (ರಾಜ್ಯ ) ಜಿಲ್ಲೆ
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.