Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒನಕೆ ಓಬವ್ವರ ಧೀರತನ ಸ್ಫೂರ್ತಿ :ಸೋಮಲಿಂಗ ಗೆಣ್ಣೂರ
(ರಾಜ್ಯ ) ಜಿಲ್ಲೆ

ಒನಕೆ ಓಬವ್ವರ ಧೀರತನ ಸ್ಫೂರ್ತಿ :ಸೋಮಲಿಂಗ ಗೆಣ್ಣೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಡಳಿತದಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಚಿತ್ರದುರ್ಗದ ಕೋಟೆಗೆ ಸಂಕಷ್ಟ ಎದುರಾಗಿದ್ದಾಗ ಯಾವುದೇ ಯುದ್ಧ ಕೌಶಲ್ಯಗಳಿಲ್ಲದಿದ್ದರೂ ಛಲದಿಂದ ಶತ್ರು ಪಡೆಯ ವಿರುದ್ಧ ಒನಕೆಯನ್ನು ಅಸ್ತçವನ್ನಾಗಿಸಿಕೊಂಡು ಹೋರಾಡಿ, ನಾಡ ರಕ್ಷಣೆ ಮಾಡಿದ ಮಹಿಳೆ ಒನಕೆ ಓಬವ್ವ ಧೀರತನ ನಮಗೆಲ್ಲ ಸ್ಫೂರ್ತಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಮಾತನಾಡಿದ ಅವರು, ಓರ್ವ ಮಹಿಳೆಯಾಗಿದ್ದರೂ ಧೈರ್ಯ, ಸಾಹಸದಿಂದ ಶತ್ರುಗಳ ದಾಳಿಗೆ ಎದೆಗುಂದದೆ ಒನಕೆ ಹಿಡಿದು ಹೋರಾಡಿದ ಓಬವ್ವ ಅವರ ಧೀರತನದ ಜೀವನ ಇಂದಿನ ಪೀಳಿಗೆ ಮಾದರಿಯಾಗಿದೆ. ಸಂಕಷ್ಟದಲ್ಲಿ ಸ್ವಯಂಪ್ರೇರಿತವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವ ಓಬವ್ವರಂತಹ ವೀರರ ಕಥೆಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗುವುದರೊಂದಿಗೆ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದರು.
ಐತಿಹಾಸಿಕ ಕೋಟೆ ಚಿತ್ರದುರ್ಗ ಎಂದರೆ ನೆನಪಾಗುವುದೇ ಒನಕೆ ಓಬವ್ವಳ ಸಾಹಸದ ಕಥೆಗಳು. ಇವರ ಜೀವನ ಚರಿತ್ರೆ ಇತಿಹಾಸ ಪುಟಗಳಲ್ಲಿ ಅಜರಾಮರವಾಗಿವೆ. ವೀರತನದ ಪ್ರತೀಕ ಒನಕೆ ಓಬವ್ವ. ಇವರ ಹೆಸರು ಇಂದಿಗೂ ಇತಿಹಾಸದ ಪುಟಗಳಲ್ಲಿ ರಾರಾಜಿಸುತ್ತಿವೆ. ಒನಕೆ ಓಬವ್ವರಂತಹ ಅನೇಕ ವೀರ-ಶೂರರ ಕಥೆಗಳು ಸದಾ ನಮಗೆಲ್ಲ ಆದರ್ಶಮಯವಾಗಿವೆಎಂದು ಅವರು ಹೇಳಿದರು.
ಶ್ರೀಮತಿ ಉಜ್ವಲಾ ಅ.ಸರನಾಡಗೌಡ ವಿಶೇಷ ಉಪನ್ಯಾಸ ನೀಡಿ, ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯದ ಪ್ರತೀಕವಾಗಿರುವ ವೀರ ಮಹಿಳೆಯರ ಧೈರ್ಯ ಸಾಹಸದ ಜೀವನ ಮೈಗೂಡಿಸಿಕೊಳ್ಳಬೇಕು. ಕಷ್ಟದ ಪರಿಸ್ಥಿತಿಯಲ್ಲಿ ತನ್ನ ಕೋಟೆ ರಕ್ಷಣೆಯ ಹೊಣೆಯನ್ನು ಸ್ವಯಂ ಪ್ರೇರಿತವಾಗಿ ಹೊತ್ತು ಧೈರ್ಯ ಹಾಗೂ ಛಲದಿಂದ ಹೋರಾಡಿದ ವೀರವನಿತೆ ಓಬವ್ವ ನಮ್ಮಗೆಲ್ಲ ಆದರ್ಶ ಪ್ರಾಯವಾಗಿದ್ದಾರೆ ಓಬವ್ವ ಕೇವಲ ದೇಶ ಭಕ್ತಿಯ ಪ್ರತೀಕವಲ್ಲ ಅವರು ಮಹಿಳಾ ಸಬಲೀಕರಣದ ಪ್ರತೀಕ ಎಂದು ಹೇಳಿದರು.
ಕುಮಾರಿ ವೈಷ್ಣವಿ ನಾಯ್ಕೋಡಿ ಮತ್ತು ತಂಡ ವೀರವನಿತೆ ಒನಕೆ ಓಬವ್ವ ಕುರಿತು ನೃತ್ಯ ರೂಪಕ ಪ್ರದರ್ಶಿಸಿದರು.
ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಡಿವೈಎಸ್ ಪಿ ಸುನೀಲ ಕಾಂಬಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು, ಸಮಾಜ ಮುಖಂಡರಾದ ಅಡಿವೆಪ್ಪ ಸಾಲಗಲ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ

ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ವೀರ ವನಿತೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಚಾಲನೆ ನೀಡಿದರು. ಮೆರವಣಿಗೆಯೂ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ವೃತ್ತ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತ್ತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.