ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ವಿಜಯಪುರ ಜಿಲ್ಲಾ ಘಟಕದ ಕಾರ್ಯಕಾರಣಿ ಸಮಿತಿ ಸ್ಥಾನಕ್ಕೆ ಪತ್ರಕರ್ತ ಚಿದಂಬರ ಕುಲಕರ್ಣಿ ಆಯ್ಕೆಯಾಗಿದ್ದಾರೆ.
2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಕಾರ್ಯಕಾರಣಿ ಸಮಿತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಚಿದಂಬರ ಕುಲಕರ್ಣಿ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು.
ಅವಿರೋಧವಾಗಿ ಆಯ್ಕೆಯಾದ ಚಿದಂಬರ ಕುಲಕರ್ಣಿ ಅವರಿಗೆ “ಉದಯರಶ್ಮಿ” ಪತ್ರಿಕೆ ಬಳಗವು ಮನದುಂಬಿ ಅಭಿನಂದನೆಗಳನ್ನು ತಿಳಿಸಿದೆ.
ಚಿದಂಬರ ಕುಲಕರ್ಣಿ ಅವರ ತಂದೆ ದಿ. ಬಿ.ಸಿ.ಕುಲಕರ್ಣಿ ಅವರು ಅವರು ಈ ಹಿಂದೆ ಎರಡು ಅವಧಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸಂಘದ ಬೆಳವಣಿಗೆಗೆ ಶ್ರಮಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

