ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಿಜಯಪುರ ಜಿಲ್ಲಾ ಘಟಕದ ನೂತನ ಕಾರ್ಯದರ್ಶಿಯಾಗಿ ಪತ್ರಕರ್ತ ವಿನೋದ ಸಾರವಾಡ ಆಯ್ಕೆಯಾಗಿದ್ದಾರೆ.
2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ವಿನೋದ ಸಾರವಾಡ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ರವಿವಾರ ಸಂಜೆ ಪ್ರಮಾಣ ಪತ್ರ ವಿತರಿಸಿದರು.
ಕಾನಿಪ ಸಂಘದ ನೂತನ ಕಾರ್ಯದರ್ಶಿ ಪತ್ರಕರ್ತ ವಿನೋದ ಸಾರವಾಡ ಅವರಿಗೆ “ಉದಯರಶ್ಮಿ” ಪತ್ರಿಕಾ ಬಳಗವು ಮನದುಂಬಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

