Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹ ಸಚಿವರ ರಾಜಿನಾಮೆಗೆ ಮಾಜಿ ಸಚಿವ ಪಟ್ಟಣಶೆಟ್ಟಿ ಆಗ್ರಹ
(ರಾಜ್ಯ ) ಜಿಲ್ಲೆ

ಗೃಹ ಸಚಿವರ ರಾಜಿನಾಮೆಗೆ ಮಾಜಿ ಸಚಿವ ಪಟ್ಟಣಶೆಟ್ಟಿ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಪ್ರಕರಣ | ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅಮಾಯಕ ಜನರ ಪ್ರಾಣ ತೆಗೆದ ಮಾನವೀಯತೆಯ ವಿರೋಧಿಗಳಾದ ಭಯೋತ್ಪಾದಕರಿಗೆ ಜೈಲಿನಲ್ಲಿ ರಾಜಾತೀಥ್ಯ ನೀಡಿರುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.
ಭಯೋತ್ಪಾದನ ಚಟುವಟಿಕೆಗಳಲ್ಲಿ ಭಾಗಿಯಾದ ಉಗ್ರರಿಗೆ ಜೈಲಲ್ಲಿ ರಾಜಾತಿಥ್ಯ ನೀಡುವುದರಿಂದ ಇನ್ನೊಬ್ಬ ಉಗ್ರ ತಯಾರಾಗಲು ಪ್ರಚೋದನೆ ನೀಡಿದಂತಾಗುತ್ತದೆ, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜೈಲಿನಲ್ಲಿ ಉಗ್ರರಿಗೂ ರಾಜಾತೀಥ್ಯ ದೊರಕುವ ಮಟ್ಟಿಗೆ ವ್ಯವಸ್ಥೆ ಹಾಳಾಗಿದೆ, ಕೂಡಲೇ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಪಟ್ಟಣಶೆಟ್ಟಿ ಒತ್ತಾಯಿಸಿದರು.
ಭಯೋತ್ಪಾದನಾ ಚಟುವಟಿಕೆ ಸೇರಿದಂತೆ ಗಂಭೀರ ಆರೋಪ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ರಾಜಾರೋಷವಾಗಿ ಮೊಬೈಲ್ ಬಳಕೆ ಹಾಗೂ ವಿಲಾಸಿ ಜೀವನದಲ್ಲಿ ತೊಡಗಿದ್ದಾರೆ, ಐಸಿಸ್ ಸಂಘಟನೆಯ ಸದಸ್ಯರು ಐಷಾರಾಮಿಯಾಗಿ ಎಲ್ಲ ಸವಲತ್ತುಗಳನ್ನು ಉಪಯೋಗಿಸುತ್ತಿರುವುದನ್ನು ನೋಡಿದರೆ ರಾಜ್ಯ ಸರ್ಕಾರ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ತೋರುತ್ತದೆ ಎಂದರು.
ಉಗ್ರರಿಗೆ ಈ ರೀತಿಯಾಗಿ ಐಷಾರಾಮಿ ಸವಲತ್ತುಗಳನ್ನು ನೀಡುವುದರಿಂದ ಮತ್ತೊಬ್ಬ ಉಗ್ರ ಜನ್ಮತಾಳಲು ಹೆದರುವುದಿಲ್ಲ. ಎಷ್ಟೊ ವರ್ಷಗಳಿಂದ ತಲೆಮರಿಸಿಕೊಂಡಿದ್ದ ಉಗ್ರ ವಿಜಯಪುರದಲ್ಲಿ ಅರೆಸ್ಟ್ ಆಗುತ್ತಾನೆ. ವಿಜಯಪುರದಲ್ಲಿಯೇ 20 ವರ್ಷಗಳಿಂದ ವಾಸವಿದ್ದು ಇಲ್ಲಿಯೇ ಅನೇಕ ದಾಖಲೆಗಳನ್ನು ಸಹ ಮಾಡಿಕೊಂಡಿದ್ದಾರೆ, ಒಂದು ರೀತಿಯ ಈ ಎಲ್ಲ ಉದಾಹರಣೆಗಳನ್ನು ಅವಲೋಕಿಸಿದರೆ ಕರ್ನಾಟಕ ಉಗ್ರರ ಪಾಲಿಗೆ ಅಡಗುತಾಣ ಹಾಗೂ ಜೈಲು ಸುರಕ್ಷಿತ ತಾಣವಾಗಿದೆ ಎಂದು ತೋರುತ್ತದೆ ಎಂದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪ್ರತಿಯೊಂದರಲ್ಲಿಯೂ ನಿರ್ಲಕ್ಷö್ಯತನ ಮಾಡುತ್ತಲೇ ಇದೆ, ರೈತರ ವಿಷಯದಲ್ಲಿಯೂ ಈ ಸರ್ಕಾರ ಬೇಜವಾಬ್ದಾರಿ ಪ್ರದರ್ಶಿಸಿದೆ, ಗಾಂಜಾ, ಅಫೀಮು ಮಾದಕ ದ್ರವ್ಯ ರಾಜ್ಯದಲ್ಲಿ ಎಗ್ಗಿಲ್ಲದೇ ಮಾರಾಟವಾಗುತ್ತಿದೆ, ಈ ಬಗ್ಗೆಯೂ ಮುಖ್ಯಮಂತ್ರಿಗಳು ಗಮನ ಕೊಡದೇ ಕೇವಲ ಕುರ್ಚಿ ಉಳಿಸಿಕೊಳ್ಳುವಲ್ಲಿ ತೊಡಗಿದ್ದಾರೆ ಎಂದರು.
ನಮ್ಮ ದೇಶದ ಒಳಗಡೆ ಇರುವಷ್ಟು ಉಗ್ರರು ಪಾಕ್ ಗಡಿಯಲ್ಲೂ ಇಲ್ಲ. ನಮ್ಮ ದೇಶದಲ್ಲಿ ಆಂತರಿಕ ಭಯೋತ್ಪಾದಕರು ಹೆಚ್ಚಾಗಿದ್ದಾರೆ. ಇಲ್ಲಿನ ಯುವಕರ ಮೈಂಡ್ ಸೆಟ್ ಬದಲಾಯಿಸಿ ವ್ಯವಸ್ಥಿತವಾಗಿ ಅವರನ್ನು ತಯಾರಿಸುವ ಕಾರ್ಯ ನಡೆಯುತ್ತಿದೆ ಅದನ್ನು ಮಟ್ಟ ಹಾಕಬೇಕು ಎಂದು ಪಟ್ಟಣಶೆಟ್ಟಿ ಒತ್ತಾಯಿಸಿದರು.
ಮುಗ್ದರನ್ನು ಈ ಚಟುವಟಿಕೆಗಾಗಿ ತಲೆತುಂಬಿ ತೊಡಗಿಸುವಂತಹ ಕೆಲಸ ದೇಶದಲ್ಲಿ ನಡೆಯುತ್ತಿದೆ. ವೈದ್ಯರ ಒಬ್ಬರ ಮನೆಯಲ್ಲಿ ಕೆಜಿಗಟ್ಟಲೇ ಸ್ಪೋಟಕ ವಸ್ತುಗಳು, ಶಸ್ರಾಸ್ತ್ರಗಳು ಸಿಕ್ಕಿರುವುದು ಆತಂಕಕಾರಿ ಸಂಗತಿ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.