Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು
(ರಾಜ್ಯ ) ಜಿಲ್ಲೆ

ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಸಮುದಾಯದ ಭಾಗವಹಿಸುವಿಕೆಯು ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳ ಶೈಕ್ಷಣಿಕ ಉನ್ನತಿಗೆ ಪಾಲಕರ ಪಾತ್ರ ಬಹು ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.
ಅವರು, ನಗರದ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ ೪೯ರ ಅಫಜಲಪುರ ಟಕ್ಕೆ ವಿಜಯಪುರ ನಗರ ವಲಯದ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಶಾಲಾ ಪೋಷಕರ-ಶಿಕ್ಷಕರ ಮಹಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಂಡ ವಿಶೇಷ ಮಹಾ ಪೋಷಕರ ಸಭೆಗೆ ಅಫಜಲಪುರ ಟಕ್ಕೆಯ ಬಹತೇಕ ಎಲ್ಲ ಪಾಲಕರು ಪಾಲ್ಗೊಂಡು ತಮ್ನ ಮಗುವಿನ ಶೈಕ್ಷಣಿಕ ಪ್ರಗತಿ ತಿಳಿದುಕೊಳ್ಳಲು ಇದೊಂದು ಸದಾವಕಾಶ ಒದಗಿಸಿದೆ. ಮನೆಯೇ ಮೊದಲ ಪಾಠ ಶಾಲೆ, ಜನನಿ ಮೊದಲ ಗುರು ಎಂಬಂತೆ ಮಕ್ಕಳು ಶಾಲೆಯಲ್ಲಿ ಕಲಿತ ದೈನಂದಿನ ವಿಷಯಗಳ ಕುರಿತಾಗಿ, ಪಾಲಕರು ಮಕ್ಕಳೊಂದಿಗೆ ಬೆರೆತು ಪ್ರೋತ್ಸಾಹಿಸಬೇಕು. ಮಗು ಮತ್ತಷ್ಟು ಪ್ರೇರಣೆ ಹೊಂದಿ, ತನ್ನ ಕಲಿಕೆಯಲ್ಲಿ ಉತ್ಸುಕತೆ ತೋರಿ, ವಿಷಯ ಕರಗತ ಮಾಡಿಕೊಳ್ಳಲು ಪಾಲಕರ ಕಕುಲಾತಿ ಅತ್ಯಂತ ಅವಶ್ಯವಿದೆ. ಸರಕಾರಿ ಶಾಲೆಗಳಲ್ಲಿ ಶೇ.ನೂರರಷ್ಟು ಹಾಜರಾತಿ ಇರಬೇಕು ಮತ್ತು ಶಾಲೆಗೆ ಆಗಮಿಸಿದ ಪ್ರತಿ ಮಗು ಅತ್ಯಂತ ಉತ್ಸಾಹದಿಂದ ಕಲಿಕೆಯಲ್ಲಿ ಭಾಗವಹಿಸಲು ಶಿಕ್ಷಕರ ಕಲಿಕಾ ಬೋಧನೆ ಪರಿಣಾಮಕಾರಿಯಾಗಲು ಕಲಿಕಾ ಬೋಧನಾ ಅಂಶಗಳು ಸಮ್ಮಿಳಿತಗೊಳಿಸಿ ಬೋಧನೆ ಮಾಡಬೇಕು. ಇಲಾಖೆಯಿಂದ ಪ್ರತಿ ತಿಂಗಳು ಪಾಲಕರ ಸಭೆಯನ್ನು ಆಯೋಜನೆ ಮಾಡಲಾಗುತ್ತಿದೆ. ಎಲ್ಲಾ ಪಾಲಕರು ಈ ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಅಗತ್ಯ ಸಲಹೆ ಸೂಚನೆ ನೀಡಬೇಕು ಎಂದರು.
ಇಂದು ಹಮ್ಮಿಕೊಂಡ ಮಹಾಸಭೆಯು ರಾಜ್ಯದ ಪ್ರತಿಯೊಂದು ಸರಕಾರಿ ಶಾಲೆ ಮತ್ತು ಸರಕಾರಿ ಕಾಲೇಜಿನಲ್ಲಿ ಏಕಕಾಲಕ್ಕೆ ನಡೆಯುತ್ತಿದೆ.ಇದರ ಮುಖ್ಯ ಉದ್ದೇಶ ಸರಕಾರ ಶಿಕ್ಷಣಕ್ಕಾಗಿ ಒದಗಿಸುತ್ತಿರುವ ಸೌಲಭ್ಯಗಳ ಮಾಹಿತಿ ಪಾಲಕರು ಹೊಂದಬೇಕು. ಜೊತೆಗೆ ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪಾಲಕರ ಹಾಗೂ ಜವಾಬ್ದಾರಿ ಕುರಿತ ಮಾಹಿತಿ ವಿನಿಮಯ ಮಾಡಿಕೊಳ್ಳುವುದಾಗಿದೆ ಎಂದರು.
ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ವ್ಹಿ ಹೊಸೂರ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಯೋಗೆಶಕುಮಾರ ನಡುವಿನಕೇರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಲಕರಿಗೆ ಮತ್ತು ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಲ್ತಾಫ ಇಟಗಿ, ಶಾಲೆಯ ಮುಖ್ಯ ಗುರುರುಗಳಾದ ಚಂದ್ರಕಾಂತ ಕನಸೆ, ಎ ಕೆ ದಳವಾಯಿ, ಶಿಕ್ಷಣ ಸಂಯೋಜಕರು, ರಾಜು ಮಸೂತಿ, ಬಿ ಆರ್ ಪಿ, ಬಸವರಾಜ ಪಡಗಾನೂರ, ಸಿ ಆರ್ ಪಿ, ಮತ್ತು ಎಸ್ ಬಿ ಐ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕರಾದ ವಿಕಾಸ ಸೇರಿದಂತೆ ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಸದಸ್ಯರು, ಅಫಜಲಪುರ ಟಕ್ಕೆ ನಿವಾಸಿ ಭಾಗವಹಿಸಿದರು.
ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುರುಗಳಾದ ಚಂದ್ರಕಾಂತ ಕನಸೆ ಸ್ವಾಗತಿಸಿದರು. ಮಲ್ಲಯ್ಯ ಸ್ವಾಮಿ ಶಿಕ್ಷಕರು ವಂದಿಸಿದರು ಹಾಗೂ ಸವಿತಾ ತಿಗಡಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.