ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ೧೧೦/೩೩/೧೧ಕೆವ್ಹಿ ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಫ್-೧೩ ಕಲ್ಯಾಣ ನಗರ ಹಾಗೂ ಸಿಂದಗಿ ನಗರ-೦೧ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಬಂದಾಳ ರಸ್ತೆ, ಗೋಲಿಬಾರ ಮಡ್ಡಿ, ಬಿ.ಟಿ.ಸುಣಗಾರ, ಗಣೇಶ ಲೇಔಟ್ ಮತ್ತು ಸಿಂದಗಿ ನಗರ-೦೧ರ ಮಾರ್ಗದ ಮೇಲೆ ಬರುವ ಬಂದಾಳ ರೋಡ, ಸ್ವಾಮಿ ವಿವೇಕಾನಂದ ವೃತ್ತ, ಬಜಾರ್ ಏರಿಯಾ, ಕನಕದಾಸ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.೧೮ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪ-ವಿಭಾಗ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
