Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನ ಮಕ್ಕಳಿಗಾಗಿ ಬದುಕನ್ನೇ ಮೀಸಲಿಟ್ಟ ಮಹಾತಾಯಿ ಸುಜಾತ ರೇಶ್ಮಿ
(ರಾಜ್ಯ ) ಜಿಲ್ಲೆ

ವಿಕಲಚೇತನ ಮಕ್ಕಳಿಗಾಗಿ ಬದುಕನ್ನೇ ಮೀಸಲಿಟ್ಟ ಮಹಾತಾಯಿ ಸುಜಾತ ರೇಶ್ಮಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾತು ಬಾರದ, ಕಿವಿ ಕೇಳದ ಬಡ ಮಕ್ಕಳಿಗಾಗಿ ತಮ್ಮ ಬದುಕನ್ನೇ ಮೀಸಲಿಟ್ಟು, ಆ ಮಕ್ಕಳಿಗೆ ಧ್ವನಿಯಾಗಿರುವ ಸುಜಾತ ರೇಶ್ಮಿ ಅವರು ಮಹಾತಾಯಿಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘಿಸಿದರು.
ನಗರದ ಸಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸೋಮವಾರ ಸಂಜೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
೨೦೦೯ ರಲ್ಲಿ ಯಾರ ಸಹಾಯವೂ ಇಲ್ಲದೆ ಕೇವಲ ಮೂರು ಮಕ್ಕಳಿಂದ ಆರಂಭಗೊಂಡ ಈ ಶಾಲೆ ಇಂದು ೧೩೦ ಮಕ್ಕಳಿಗೆ ಆಶ್ರಯಧಾಮವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ನೀಡುವುದು ತುಂಬ ಕಷ್ಟದ ಕೆಲಸ. ಆದರೆ ಈ ಶಾಲೆಯ ಸಂಸ್ಥಾಪಕಿ ಸುಜಾತ ರೇಶ್ಮಿ ಅವರು ತಾವೇ ಮೂರು ವರ್ಷ ಮೈಸೂರಿನಲ್ಲಿ ಸ್ಪೀಚ್ ಥೆರೆಪಿ ತರಬೇತಿ ಪಡೆದು, ಇಲ್ಲಿಯ ಸುಮಾರು ೨೫ ಶಿಕ್ಷಕರಿಗೆ ತರಬೇತಿ ನೀಡಿ ಪರಿಣಾಮಕಾರಿ ಶಿಕ್ಷಣದೊಂದಿಗೆ ಮಕ್ಕಳಿಗೆ ಊಟ-ವಸತಿಯ ಹೊಣೆಯನ್ನು ಹೊತ್ತು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರ ಈ ಸೇವೆ ಭಗವಂತನ ಪೂಜೆಯಷ್ಟೇ ಪವಿತ್ರವಾಗಿದೆ. ಅವರ ಈ ಸೇವಾಕಾರ್ಯದಲ್ಲಿ ಸರಕಾರ ಮತ್ತು ಸಂಘ-ಸಂಸ್ಥೆಗಳು ನೆರವಿನ ಹಸ್ತ ಚಾಚಬೇಕೆಂದು ಕರೆ ನೀಡಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಈ ಶಾಲೆಯ ಬೆಳವಣಿಗೆಗಾಗಿ ಹಾಗೂ ಶೈಕ್ಷಣಿಕ ಸೌಲಭ್ಯಗಳ ನೆರವಿಗಾಗಿ ಕಾರ್ಯನಿರತ ಪತ್ರಕರ್ತರ ಸಂಘವು ರೇಷ್ಮೆ ಕುಟುಂಬದೊಂದಿಗೆ ಸದಾ ಕೈಜೋಡಿಸುವುದಾಗಿ ಭರವಸೆ ನೀಡಿದರು.
ಸಂಘದ ಮಾಜಿ ಜಿಲ್ಲಾಧ್ಯಕ್ಷ ಶರಣು ಮಸಳಿ, ಶಾಲೆಯ ಮುಖ್ಯ ಗುರು ಸುಜಾತ ಬಿರಾದಾರ (ರೇಶ್ಮಿ) ಮಾತನಾಡಿದರು.
ಹಿರಿಯ ಪತ್ರಕರ್ತರಾದ ಮಹೇಶ ಶೆಟಗಾರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ರಾಜು ಕೊಂಡಗೂಳಿ, ವಿಠ್ಠಲ ಲಂಗೋಟಿ, ಸಂಸ್ಥೆಯ ಅಧ್ಯಕ್ಷ ಶಿವಾನಂದ ರೇಶ್ಮಿ, ಉಪಾಧ್ಯಕ್ಷ ಪ್ರಬಣ್ಣ ಬಿರಾದಾರ, ಕಾರ್ಯದರ್ಶಿ ಅವಿನಾಶ ಬಿದರಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಬಸವರಾಜ ರೇಶ್ಮಿ, ರಮೇಶ ರೇಶ್ಮಿ, ಸುನೀಲ್ ಬಿರಾದಾರ, ಸುಧೀರ ರೇಶ್ಮಿ ವೇದಿಕೆ ಮೇಲಿದ್ದರು.
ಶಿಕ್ಷಕಿ ರುಕ್ಮಿಣಿ ಕೋಳಿ ನಿರೂಪಿಸಿ, ವಂದಿಸಿದರು. ಶಿಕ್ಷಕಿ ಹೇಮಾ ಕೆಂಗಸೂರ ಸ್ವಾಗತಿಸಿದರು.
ಗಣ್ಯರಾದ ವಿಶ್ವನಾಥ ರೇಶ್ಮಿ, ಅಭಿಯಂತರ ಪ್ರಶಾಂತ ಸಾಲಿಮಠ, ಚಂದ್ರು ನಿಂಬರಗಿಮಠ, ರಾಜು ಕೆರುಟಗಿ, ಅಜಯ ಕುಲಕರ್ಣಿ ಮತ್ತು ಶಿಕ್ಷಕರಾದ ಆಕಾಶ ರೇಶ್ಮಿ, ಲಕ್ಷ್ಮಿ ಉಕ್ಕಲಿ, ಗಾಯತ್ರಿ ಪತ್ತಾರ, ಲಕ್ಕಮ್ಮ ಎಮ್ಮಿ, ಕಿರಣ್ ಐಹೊಳೆ, ಸೌಮ್ಯ ರೇಶ್ಮಿ, ಶ್ವೇತಾ ಕೊಪ್ಪಳ ಸೇರಿದಂತೆ ಶಿಕ್ಷಕೇತರ ಸಿಬ್ಬಂದಿ, ಮಕ್ಕಳು ಇದ್ದರು.

ಮನಸೂರೆಗೊಂಡ ಮಕ್ಕಳ ನೃತ್ಯಗಳು

ಹಾಡು ಸಂಗೀತ ತಮಗೆ ಕೇಳದಿದ್ದರೂ ಸಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ತಮ್ಮೆದುರು ಕುಳಿತ ಶಿಕ್ಷಕಿಯ ಸಂಜ್ಞೆಯನ್ನು ಅರ್ಥೈಸಿಕೊಂಡು ಹಾಡು ಮತ್ತು ತಾಳಕ್ಕೆ ತಕ್ಕಂತೆ ಮಾಡಿದ ಸಮೂಹ ನೃತ್ಯಗಳು ಎಲ್ಲರ ಮನಸೂರೆಗೊಂಡವು. ಉಳಿದ ಮಕ್ಕಳಿಗಿಂತ ತಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬಂತೆ ತಮ್ಮ ಪ್ರತಿಭೆ ಪ್ರದರ್ಶಿಸಿದ ಮಕ್ಕಳು ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿದರು.
ಮಕ್ಕಳ ಈ ಸಾಧನೆ ಅಲ್ಲಿಯ ಶಿಕ್ಷಕ-ಶಿಕ್ಷಕಿಯರ ಮೊಗದಲ್ಲಿ ಸಾರ್ಥಕ ಭಾವ ಮೂಡಿಸಿತ್ತು. ಅವರ ಕಣ್ಣಂಚು ಹಸಿಯಾಗಿತ್ತು.

ಪ್ರಕಾಶಕಿಯರಿಗೆ ಗೌರವ ಸನ್ಮಾನ

ಸಮಾರಂಭದಲ್ಲಿ ’ಬಿಜಾಪುರ ವಾರ್ತಾ’ ದಿನಪತ್ರಿಕೆ ಪ್ರಕಾಶಕಿ ಶೈಲಜಾ ಬಸವರಾಜ ಬಿದರಿ, ’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶೈಲಾ ಇಂದುಶೇಖರ ಮಣೂರ ಹಾಗೂ ರುದ್ರಮ್ಮ ಮುರಿಗೆಪ್ಪ ರೊಳ್ಳಿ ಅವರನ್ನು ಸಂಸ್ಥೆಯ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿರಾದಾರ (ರೇಶ್ಮಿ) ಸನ್ಮಾನಿಸಿ ಗೌರವಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಉಪಾಧ್ಯಕ್ಷ ಶಶಿಕಾಂತ ಮೆಂಡೆಗಾರ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ವಿನೋದ ಸಾರವಾಡ, ಸದ್ದಾಂ ಜಮಾದಾರ, ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಗದ್ದನಕೇರಿ, ಸುರೇಶ ತೆರದಾಳ, ಚಿದಂಬರ ಬಿ. ಕುಲಕರ್ಣಿ, ಸಂಜಯ ಟಿ. ಕೋಳಿ, ಶ್ರೀನಿವಾಸ ಡಿ. ಸೂರಗೊಂಡ, ಗೋಪಾಲ ಜಿ. ಕನಿಮಣಿ, ಶಿವಾನಂದ ಡಿ. ಶಿವಶರಣ ಮತ್ತು ಪ್ರಭು ಕುಮಟಗಿ ಅವರನ್ನು ಸಂಸ್ಥೆಯ ಚೇರಮನ್ ಶಿವಾನಂದ ರೇಶ್ಮಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಸನ್ಮಾನಿಸಿ ಗೌರವಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.