Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ಶೌಚಾಲಯ-ನಮ್ಮ ಭವಿಷ್ಯ- ಅಭಿಯಾನ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ನಮ್ಮ ಶೌಚಾಲಯ-ನಮ್ಮ ಭವಿಷ್ಯ- ಅಭಿಯಾನ ಯಶಸ್ವಿಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣರಲ್ಲಿ ಸುರಕ್ಷಿತ ನೈರ್ಮಲ್ಯ ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯ ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ನವೆಂಬರ್ ೧೯ ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ “೧೯ನೇ ನವೆಂಬರ್ ೨೦೨೫ ರಿಂದ ೧೦ನೇ ಡಿಸೆಂಬರ್ ೨೦೨೫ರ ವರೆಗೆ ನಮ್ಮ ಶೌಚಾಲಯ – ನಮ್ಮ ಭವಿಷ್ಯ ಎಂಬ ಶಿರೋನಾಮೆಯಡಿ ವಿಶೇಷ ಅಭಿಯಾನವನ್ನು ಆಯೋಜಿಸಲು ನಿರ್ದೇಶನ ನೀಡಿರುವ ಪ್ರಯುಕ್ತ ಈ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಿ ಎಂದು ಜಿಪಂ ಸಿಇಓ ರಿಷಿ ಆನಂದ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಅಭಿಯಾನವು ಆರೋಗ್ಯ, ಘನತೆ ಮತ್ತು ಸಾಮಾಜಿಕ ಸಮೃದ್ಧಿಗಾಗಿ ನೈರ್ಮಲ್ಯ ಮತ್ತು ಸ್ವಚ್ಛತೆಯ ಪ್ರಾಮುಖ್ಯತೆಯ ಮೇಲೆ ಮಾತ್ರವಲ್ಲದೆ, ವೈಯಕ್ತಿಕ ಮನೆ ಶೌಚಾಲಯಗಳು ಮತ್ತು ಸಮುದಾಯದ ನೈರ್ಮಲ್ಯ ಸಂಕೀರ್ಣಗಳು ಎರಡಕ್ಕೂ ಸಂಬಂಧಿಸಿದಂತೆ, ಕಾರ್ಯಕ್ಷಮತೆಯ ಮೌಲ್ಯಮಾಪನ ಮತ್ತು ಗ್ರಾಮೀಣ ಶೌಚಾಲಯಗಳ ಸೌಂದರ್ಯ ವರ್ಧನೆಯಂತಹ ಅಂಶಗಳಿಗೂ ಒತ್ತು ನೀಡುತ್ತದೆ. ಈ ಅವಧಿಯಲ್ಲಿ ಗ್ರಾಮ ಪಂಚಾಯತಿಗಳು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಒಗ್ಗೂಡಿ ಸಮುದಾಯ ಶೌಚಾಲಯ ಸಂಕೀರ್ಣಗಳ ಕಾರ್ಯಕ್ಷಮತೆ, ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡಲು ಮತ್ತು ಹೆಚ್ಚಿಸಲು ಕ್ರಮವಹಿಸುವಹಿಸಲಾಗುತ್ತದೆ. ಜಿಲ್ಲೆ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ವಿವಿಧ ಜನ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಲು ಕ್ರಮವಹಿಸಲು ತಿಳಿಸಿದೆ. ಸಮುದಾಯದ ಸ್ವಚ್ಛ ಆರೋಗ್ಯಕರ ಮತ್ತು ಉತ್ತಮ ಭವಿಷ್ಯಕ್ಕಾಗಿ ಸಂಪೂರ್ಣ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು, ಗಣ್ಯ ವ್ಯಕ್ತಿಗಳು, ಹಿರಿಯ ನಾಗರಿಕರು, ಮಕ್ಕಳು, ಯುವಕರು, ಸ್ವ-ಸಹಾಯ ಗುಂಪುಗಳು ಒಳಗೊಂಡಿರುವ ಜನರ ಸಹಭಾಗಿತ್ವ (ಎಚಿಟಿ ಃhಚಿgiಜಚಿಡಿi) ಮೂಲಕ ಸಮುದಾಯಗಳಲ್ಲಿ ಕೇಂದ್ರೀಕೃತ ಜಾಗೃತಿ ಮೂಡಿಸುವ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಕ್ರಮವಹಿಸುವುದು. ಈ ಆಂದೋಲನ ಆಯೋಜನೆಗೆ ಸಂಬಂಧಿಸಿದಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸದರಿ ಅಭಿಯಾನದಲ್ಲಿ ಕ್ರೀಯಾಶೀಲತೆಯಿಂದ ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸುವರು.ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ ಸ್ಪರ್ಧೆಯನ್ನು ಆಯೋಜಿಸಲಾಗುವುದು, ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ಆಯೋಜಿಸಿ, ತದನಂತರ, ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ ವಿಜೇತರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುವುದು ತಾಲೂಕು ಮತ್ತು ಗ್ರಾಮ ಪಂಚಾಯತಿಗಳು ಮೊದಲ ಆದ್ಯತೆಯಾಗಿ ಪರಿಗಣಿಸಿ, ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ ೧೯ನೇ ನವೆಂಬರ್ ೨೦೨೫ ರಿಂದ ೧೦ನೇ ಡಿಸೆಂಬರ್ ೨೦೨೫ರವರೆಗೆ “ನಮ್ಮ “ಶೌಚಾಲಯ – ನಮ್ಮ ಭವಿಷ್ಯ” ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಯಶಸ್ವಿಯಾಗಿ ಹಮ್ಮಿಕೊಂಡು ಅದರ ವರದಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಪೋರ್ಟಲ್‌ನಲ್ಲಿ ನಮೂದಿಸಲು ಕ್ರಮವಹಿಸಿ ಎಂದು ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಅದೇ ರೀತಿ ಈ ಅಭಿಯಾನದಲ್ಲಿ ಗ್ರಾಮ ಪಂಚಾಯತಿಯ ಜೊತೆಗೆ ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಯುವಕರು, ಹಿರಿಯರು, ಮಹಿಳೆಯರು, ಸ್ವ-ಸಹಾಯ ಸಂಘದ ಸದಸ್ಯರುಗಳು, ಶಾಲಾ – ಕಾಲೇಜಗಳು, ಎಲ್ಲ ಸಾರ್ವಜನಿಕರು ತಮ್ಮ ಪರಿವಾರದೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಿ, ಈ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿಸಲು ಭಾಗಿದಾರರಾಗಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಅವರು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.