ಉದಯರಶ್ಮಿ ದಿನಪತ್ರಿಕೆ
ಯಡ್ರಾಮಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ )ಕಲ್ಬುರ್ಗಿ ಇವರು 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ, ಕವಿಗೋಷ್ಠಿ, ಪುಸ್ತಕ ಬಿಡುಗಡೆ, ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಯಡ್ರಾಮಿ ಪಟ್ಟಣದ ಉದಯೋನ್ಮುಖ ಯುವ ಬರಹಗಾರ, ಡಾ.ಮಲ್ಲಿಕಾರ್ಜುನ ಎಸ್ ಆಲಮೇಲ ರಚಿಸಿರುವ ಫಿಲಿಫೈನ್ ಕಾವ್ಯ ಪ್ರಕಾರವಾದ, ತನಗಾ ಸಂಕಲನ, ‘ಅಂತರಂಗದ ಪ್ರಣತಿ’ ಕಲ್ಬುರ್ಗಿ ಜಿಲ್ಲೆಯ ಪ್ರಪ್ರಥಮ ತನಗ ಸಂಕಲನವಾಗಿ, ಅನ್ನಪೂರ್ಣ ಕ್ರಾಸಲ್ಲಿ ಇರುವ ಕಲಾ ಮಂಡಳ ಸಭಾಭವನದಲ್ಲಿ ಲೋಕಾರ್ಪಣೆಯಾಗಲಿದೆ.
ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮದ ಆಯೋಜಕರಾದ ಬಿ ಹೆಚ್ ನಿರಗುಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

