Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಮುಖಂಡ ಅನೀಲ್ ಹೊಸಮನಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಮತ್ತಷ್ಟು ಚುರುಕು ನೀಡಲಾಗುತ್ತಿದ್ದು, ಡಿ.೧ ರಂದು ೨೫ ಸಾವಿರಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಅನೀಲ್ ಹೊಸಮನಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೆ ಬಡವರಿಗೆ ಆರೋಗ್ಯ ಹಾಗೂ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಎರಡೂ ಗಗನಕುಸುಮ, ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್‌ಗಾಗಿ ನಮ್ಮ ಹೋರಾಟ ನಡೆದಿದೆ, ಇದು ಜನರ ಹೋರಾಟ, ಜನಪರವಾದ ಹೋರಾಟ, ಕಳೆದ ಸೆಪ್ಟೆಂಬರ್ ೧೮ ರಿಂದ ಹೋರಾಟ ಆರಂಭವಾಗಿದೆ, ಕಳೆದ ೭೨ ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ, ಎಲ್ಲ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ ಎಂದರು.
ಡಿ.೧ ರ ಹೋರಾಟ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದು, ವಿವಿಧ ಕಾರ್ಮಿಕ, ಮಹಿಳಾ, ವಿದ್ಯಾರ್ಥಿಗಳು, ದಲಿತ, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಈಗಾಗಲೇ ಸಕ್ರಿಯವಾಗಿ ಸಿದ್ಧತೆಯಲ್ಲಿ ತೊಡಗಿದ್ದು, ವ್ಯಾಪಾರಸ್ಥರು ಸೇರಿದಂತೆ ಎಲ್ಲೆಡೆ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದರು.
ಇಬ್ಬರು ಸಚಿವರು ಹಾಗೂ ಇಬ್ಬರು ಶಾಸಕರು ಈಗಾಗಲೇ ಈ ವಿಷಯಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ನಾಲ್ವರು ಶಾಸಕರು ಇದುವರೆಗೂ ಯಾಕೆ ಬೆಂಬಲ ಕೊಡುತ್ತಿಲ್ಲ ಎಂಬುದು ಗೊತ್ತಿಲ್ಲ. ಅಧಿವೇಶನದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಪರವಾಗಿ ಧ್ವನಿ ಎತ್ತಬೇಕು. ಮುಂದಿನ ದಿನಗಳಲ್ಲಿ ಶಾಸಕರ, ಸಚಿವರ ಮನೆ ಮುಂದೆ ಧರಣಿ ಕೂರುವ ಹೋರಾಟ ನಡೆಸಲಾಗುವುದು ಎಂದರು.
ಹೋರಾಟಗಾರ ಬಿ.ಭಗವಾನ್ ರೆಡ್ಡಿ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಎಲ್ಲ ಸೌಕರ್ಯ ಇದೆ. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ವೈದ್ಯಕೀಯ ಕಾಲೇಜು ಬರುವಲ್ಲಿ ಹಿನ್ನಡೆ ಆಗುತ್ತಿದೆ. ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಮಾಡಿದರೆ, ಇದಕ್ಕೆ ೬೦, ೯೦ ವರ್ಷಗಳ ಕಾಲ ಒಪ್ಪಂದ ಇರುತ್ತದೆ. ಒಮ್ಮೆ ಈ ಒಪ್ಪಂದ ಮಾಡಿಕೊಂಡರೆ, ಬಳಿಕ ಸರ್ಕಾರ ಸಹ ಮಧ್ಯಪ್ರದೇಶ ಮಾಡಲು ಸಹ ಸಾಧ್ಯವಾಗುವುದಿಲ್ಲ. ಅಲ್ಲದೇ, ಸಚಿವರ ಮಾತಿಗೂ ಕೃತಿಗೂ ವ್ಯತ್ಯಾಸ ಇದೆ. ಹೀಗಾಗಿ ಜನಪ್ರತಿನಿಧಿಗಳು ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನಮ್ಮ ಹೋರಾಟಕ್ಕೆ ಜನಪ್ರತಿನಿಧಿಗಳು ಬೆಂಬಲ ಕೊಡಬೇಕು.
ನಗರ ಶಾಸಕರು ದೇಶ, ವಿದೇಶಗಳ ಬಗ್ಗೆ ಮಾತನಾಡುತ್ತಾರೆ. ತಮ್ಮದೇ ಮತಕ್ಷೇತ್ರದ ವಿಷಯ ಮುಂದಿಟ್ಟುಕೊಂಡು ಹೋರಾಟ ನಡೆಯುತ್ತಿದ್ದರೂ ಒಂದೂ ಮಾತನಾಡುತ್ತಿಲ್ಲ ಎಂದರು.
ಮುಖಂಡರಾದ ಅಕ್ರಂ ಮಾಶ್ಯಾಳಕರ, ಭರತ ಕುಮಾರ್ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ ಬಟಗಿ, ಶ್ರೀನಾಥ ಪೂಜಾರಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಹುಲ್ ಭೇಟಿಗೆ ಪ್ರಯತ್ನ

ಸಿಎಂ ಭೇಟಿ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ಬೆಂಗಳೂರಿಗೆ ಕರೆದುಕೊಂಡು ಹೋದರು. ಬಹಳ ಗೌರವದಿಂದಲೇ ಸಚಿವರು ನಡೆದುಕೊಂಡರು. ಆದರೆ, ಸಿಎಂ ಭೇಟಿ ಸಮಯದಲ್ಲಿ ಅವರು ಯಾವುದೇ ಮಾತನಾಡಲಿಲ್ಲ. ಸಿಎಂ ಜತೆಗೆ ಚರ್ಚಿಸಲು ಸಮಯವೂ ಸಿಗಲಿಲ್ಲ. ಜನತಾ ದರ್ಶನದಲ್ಲಿ ಮನವಿ ಸ್ವೀಕರಿಸುವಂತೆ ಸಿಎಂ ನಮ್ಮ ಮನವಿ ಸ್ವೀಕರಿಸಿದರು. ಇದರಿಂದ ನಿರಾಸೆಯಿಂದ ವಾಪಸ್ ಬರುವಂತಾಗಿದೆ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಒಂದು ವಾರದಲ್ಲಿ ಭೇಟಿಯ ಸಮಯ ನಿಗದಿಯಾಗುವ ಸಾಧ್ಯತೆ ಇದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಅನೀಲ್ ಹೊಸಮನಿ ಹೇಳಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಮೂಡದ ಒಮ್ಮತ | ಈರೇಗೌಡ ವಿರುದ್ಧ ಮಾಜಿ ಕಾರ್ಯದರ್ಶಿ ಜಯಮ್ಮ ಆರೋಪ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026
    In ದಿನಪತ್ರಿಕೆ
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.