Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್‌ ನಿಂದ ಸ್ವಾರ್ಥಕ್ಕಾಗಿ ಸಂವಿಧಾನ ತಿದ್ದುಪಡಿ :ಸೂಲಿಬೆಲೆ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್‌ ನಿಂದ ಸ್ವಾರ್ಥಕ್ಕಾಗಿ ಸಂವಿಧಾನ ತಿದ್ದುಪಡಿ :ಸೂಲಿಬೆಲೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ಸಂವಿಧಾನ ತಿದ್ದುಪಡಿ ಮಾಡಿದ್ದರು. ಸಂವಿಧಾನವನ್ನು ಯಾರು ಎಷ್ಟು ಬಾರಿ ತಿದ್ದುಪಡಿ ಮಾಡಿದರು, ಏತಕ್ಕಾಗಿ ಮಾಡಿದರು ಎಂಬುದು ಮುಖ್ಯ ಎಂದು ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ಸಿಂದಗಿ ಯುವಾ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳ ಅನಾವರಣ ಹಾಗೂ ಹೊಸ ಬೆಳಕು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ೧೯೭೫ರ ತುರ್ತು ಪರಿಸ್ಥಿತಿ, ೧೯೫೧ರಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೆರಲು ಮಾಡಿದ ತಿದ್ದುಪಡಿ ಸೇರಿದಂತೆ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ೭೬ಬಾರಿ ಸಂವಿಧಾನ ತಿದ್ದುಪಡಿ ಮಾಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದು ಕಾಂಗ್ರೆಸ್ ಎಂದು ಆರೋಪ ಮಾಡಿದರು.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ವಿರುದ್ಧ ಚುನಾವಣಾ ತಕರಾರು ಪ್ರಕರಣ ದಾಖಲಿಸಲು ನಿರ್ಬಂಧ ವಿಧಿಸುವ ತಿದ್ದುಪಡಿ ತಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡುವಂತಿಲ್ಲ ಎಂದಿದ್ದು ಕಾಂಗ್ರೆಸ್. ಕಾಂಗ್ರೆಸ್ ಸೇರುವುದೆಂದರೆ, ಅದು ಆತ್ಮಹತ್ಯೆ ಮಾಡಿಕೊಂಡಂತೆ” ಎಂಬ ಅಂಬೇಡ್ಕರ್ ಮಾತು ಇಲ್ಲಿ ಉಲ್ಲೇಖಾರ್ಹ. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತ ಎಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿ ಅವರನ್ನು ಸಂಸತ್ತಿಗೆ ಬರಬಾರದೆಂದು ಅವರ ವಿರುದ್ಧ ಅವರ ಆಪ್ತ ಸಹಾಯಕರನ್ನೇ ಸ್ಪರ್ದಿಸಿ ಕಣಕ್ಕಿಳಿಸಿ ಸೋಲುವಂತೆ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ನಾಯಕ ನೆಹರು ಅವರು ಮುಸ್ಲಿಮರ ಬಗ್ಗೆ ಅನುಕಂಪ ಹೊಂದಿದ್ದರೂ ಒಮ್ಮೆಯೂ ಪರಿಶಿಷ್ಟ ಜಾತಿಗಳ ಕಲ್ಯಾಣದ ಬಗ್ಗೆ ಮಾತನಾಡಿಲ್ಲ ಎಂದು ಅಂಬೇಡ್ಕರ್ ಅವರೇ ಖುದ್ದು ಬರೆದಿದ್ದಾರೆ ಎಂದು ಪ್ರತಿಪಾದಿಸಿದ ಸೂಲಿಬೆಲೆ, ಇನ್ನು ದಲಿತರು ಕಾಂಗ್ರೆಸ್ ಪಕ್ಷದಿಂದ ಯಾವ ಅನುಕಂಪವನ್ನು ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ. ಅತಿ ಹೆಚ್ಚು ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ೫೦ ವರ್ಷ ದೇಶ ಆಳಿದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ೭೫ಬಾರಿ, ವಾಜಪೇಯಿ ಪ್ರಧಾನಿಯಾಗಿದ್ದಾಗ ೧೪ಬಾರಿ, ನರೇಂದ್ರ ಮೋದಿಯವರು ಪ್ರಧಾನಿಯಾಗಿ ೮ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ ಎಂದರು.
ಈ ವೇಳೆ ಮಾಜಿ ಸಚಿವ ಎನ್.ಮಹೇಶ ಬಾಬಾಸಾಹೇಬರ್ ೬ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅಂಬೇಡ್ಕರ ಅವರ ವ್ಯಕ್ತಿತ್ವ ಕ್ರಿಯಾಶೀಲತೆಯಿಂದ ಕೂಡಿತ್ತು. ಇಡೀ ಸಮಾಜವನ್ನು ತಮ್ಮ ಗುರಿಯೆಡೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯಯುಳ್ಳವರಾಗಿದ್ದರು. ಭಾರತ ತುಂಬಾ ಕ್ರಿಯಾಶೀಲ ದೇಶ ಎಂದವರು ಬಾಬಾಸಾಹೇಬರು. ಅವರ ವಿಚಾರಗಳನ್ನು ಹೊಸ ಬೆಳಕು ಕಾರ್ಯಕ್ರಮಗಳ ಮೂಲಕ ಪರಿಚಯಿಸುತ್ತಿರುವ ಯುವಾ ಬ್ರಿಗೇಡ್ ಕಾರ್ಯ ಶ್ಲಾಘನೀಯ. ನಮ್ಮ ದೇಶದ ಸ್ವಾತಂತ್ರ‍್ಯ ಉಳಿಸುಕೊಳ್ಳಲು ನಮ್ಮ ದೇಹದ ರಕ್ತ ಕೊಟ್ಟಾದರೂ ಉಳಿಸಿಕೊಳ್ಳಬೇಕು ಎಂದು ಕರೆ ಕೊಟ್ಟವರು ಬಾಬಾಸಾಹೇಬರು. ಯುವಾ ಬ್ರಿಗೇಡ್ ಈ ನಡೆಗೆ ನಮ್ಮ ಬೆಂಬಲ ಯಾವಾಗಲು ಇದೆ. ಹೊಸ ಬೆಳಕು ಕಾರ್ಯಕ್ರಮ ನಿರಂತರವಾಗಿರಲಿ ಎಂದರು.
ಈ ವೇಳೆ ಬಾಬಾಸಾಹೇಬರ ೬ ಪುಸ್ತಕಗಳನ್ನು ಮಾಜಿ ಸಚಿವ ಎನ್.ಮಹೇಶ, ಚಕ್ರವರ್ತಿ ಸೂಲಿಬೆಲೆ ಹಾಗೂ ಅಭಿನವ ರುದ್ರಮುನಿ ಶಿವಾಚಾರ್ಯರು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು. ಕಾರ್ಯಕ್ರಮ ದಲ್ಲಿ ಗುರುದೇವಾಶ್ರಮದ ಶಾಂತಗಂಗಾಧರ ಶ್ರೀಗಳು, ಮಾಜಿ ಶಾಸಕ ರಮೇಶ ಭೂಸನೂರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಅಶೋಕ ಅಲ್ಲಾಪುರ, ಸಂತೋಷ ಪಾಟೀಲ ಡಂಬಳ, ಶ್ರೀಕಾಂತ ಬಿಜಾಪುರ, ಯುವಾ ಬ್ರಿಗೇಡ್ ವಿಭಾಗೀಯ ಸಂಚಾಲಕ ರಾಜು ಪಾಟೀಲ ಸೇರಿದಂತೆ ಅನೇಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.