ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಜಿಪಂ ಸಿಇಓ ರಿಷಿ ಆನಂದ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಸೋಮವಾರ ನಗರದಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆಯಬೇಕು. ಜಿಲ್ಲೆಯ ೫ ತಾಲೂಕುಗಳಲ್ಲಿ ವಿಕಲಚೇತನರ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ತಾಲೂಕು ಮಟ್ಟದಲ್ಲಿ ಆಯೋಜಿಸಿದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿ ಇದೀಗ ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗಿಯಾಗಿರುವ ತಾವುಗಳು, ವಿಜೇತರಾಗಿ ರಾಜ್ಯ, ರಾಷ್ಟç ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ, ಜಿಲ್ಲೆಗೆ ಕೀರ್ತಿ ತರಬೇಕು ಎಂದು ಅವರು ಹೇಳಿದರು.
ಕ್ರೀಡೆಗಳು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ವಿಶೇಷ ಚೇತನರು ಕಿಳರಿಮೆಯನ್ನು ತೊಡೆದು ಹಾಕಿ, ಎಂದು ಅವರು ಹೇಳಿದರು.
ಡಾ.ಜಾವೆದ್ ಜಮಾದಾರ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಸಮಾಜದಲ್ಲಿ ಗುರುತಿಸಿಕೊಳ್ಳಬಹುದಾಗಿದೆ.ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ. ನಿರಂತರ ಪರಿಶ್ರಮ, ಸಮಯ ಪರಿಪಾಲನೆ ಕೌಶಲ್ಯಗಳ ರೂಢಿಸಿಕೊಳ್ಳುವಿಕೆ ಕ್ರೀಡಾ ಸಾಧನೆಗೆ ಪೂರಕವಾಗಿ ಪ್ರೇರಕವಾಗಿವೆ. ಪರಸ್ಪರ ಸಹಕಾರ ಮನೋಭಾವನೆ ಹೊಂದಿ, ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆಂಪಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ, ಸಂಜೀವ ಖೋತ್, ಸುಮಿತ ಪಾಂಡಿಚೇರಿ, ವಿನೋದ ಖೇಡ, ನಿಮಿಷಾಚಾರ್ಯ, ಮಹೇಶ ಮುಧೋಳ, ವಿಠ್ಠಲ ಹಂಚನಾಳ, ಮಹೇಶ ತೋಟದ, ಶ್ರೀಪಾದ ಜೋಶಿ, ಜಿಲ್ಲಾ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಸ್ಥಿತರಿದ್ದರು.

