Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟಗಾರರಿಂದ ಕಲ್ಲು ಹೊತ್ತು ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟಗಾರರಿಂದ ಕಲ್ಲು ಹೊತ್ತು ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ವಿಳಂಬ ನೀತಿ ಅನುಸರಿಸುತ್ತಿರುವುದು ವಿರೋಧಿಸಿ ಜನಪ್ರತಿನಿಧಿಗಳ ಪಿಂಡ ಪ್ರದಾನ ಹಾಗೂ ಪ್ರತಿಕೃತಿ ದಹನ ಮಾಡಲು ಹೋರಾಟಗಾರರು ಅಣಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಪಗಾವಲು ಹಾಕಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಹೋರಾಟಗಾರರು ಹೋರಾಟವನ್ನು ತೀವ್ರಗೊಳಿಸಿದ್ದು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದರು.
ಹೋರಾಟಗಾರರಾದ ಅರವಿಂದ ಕುಲಕರ್ಣಿ, ಮಲ್ಲಿಕಾರ್ಜುನ ಬಟಗಿ, ಅಕ್ರಂ ಮಾಶ್ಯಾಳಕರ ಸೇರಿದಂತೆ ಅನೇಕ ಹೋರಾಟಗಾರರು ಕಲ್ಲು ಹೊತ್ತುಕೊಂಡು ಪ್ರತಿಭಟನೆ ಕುಳಿತರು.
ಕಲ್ಲು ಹೊತ್ತಿಕೊಂಡೇ ಅಸಮಾಧಾನ ವ್ಯಕ್ತಪಡಿಸಿದ ರೈತ ಮುಖಂಡ ಅರವಿಂದ ಕುಲಕರ್ಣಿ, ಸರ್ಕಾರಿ ಮೆಡಿಕಲ್ ಕಾಲೇಜ್ ಜಿಲ್ಲೆಯ ಬಡಜನತೆಯ ಹಿತಕ್ಕಾಗಿ ಸ್ಥಾಪನೆಯಾಗಬೇಕು, ಈ ಉದ್ದೇಶಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ, ಆದರೆ ಈ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದರು.
ರಾಜ್ಯ ಸರ್ಕಾರವು ಪೊಲೀಸ್ ಬಲವನ್ನೇ ಇಂದು ದುರುಪಯೋಗಪಡಿಸಿಕೊಂಡು ಹೋರಾಟವನ್ನು ದಮನ ಮಾಡುವ ಹುನ್ನಾರ ನಡೆಸುತ್ತಿದೆ, ಹೋರಾಟಗಾರರ ಸುತ್ತಲೂ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿ ಸರ್ಪಗಾವಲು ಒಡ್ಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಈ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೋರ್ವ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ವಿಜಯಪುರ ಜಿಲ್ಲೆಯ ಜನತೆ, ಜಿಲ್ಲೆಯ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜು ಕೇಳುತ್ತಿರುವುದು ಯಾವುದೇ ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ, ಆದರೆ ಈ ನ್ಯಾಯಯುತ ಬೇಡಿಕೆಯನ್ನು ದಬ್ಬಿ, ಖಾಸಗಿ ವ್ಯಾಪಾರಿ ಆಸಕ್ತಿಗೆ ಧಕ್ಕೆ ಬರದಂತೆ ನೋಡಿಕೊಳ್ಳಲು ಸಚಿವರೇ ಪೊಲೀಸ್ ಬಲ ಪ್ರಯೋಗದ ಮೂಲಕ ಹೋರಾಟವನ್ನು ದಮನ ಮಾಡುವ ಪ್ರಯತ್ನಕ್ಕೆ ಕೈ ಹಾಕಿರುವುದು ಸರಿಯಲ್ಲ, ಈ ಕೂಡಲೇ ಪೊಲೀಸರ ಸರ್ಪಗಾವಲು ಹಿಂಪಡೆಯಬೇಕು ಎಂದರು.
ಹೋರಾಟಗಾರರಾದ ಸಿದ್ಧಲಿಂಗ ಬಾಗೇವಾಡಿ, ಭೋಗೇಶ ಸೊಲ್ಲಾಪೂರ ಸೇರಿದಂತೆ ಅನೇಕ ಹೋರಾಟಗಾರರು ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಶ್ವಿನಿ ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ :ನಿಮಾದಾರ
    In (ರಾಜ್ಯ ) ಜಿಲ್ಲೆ
  • ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.