ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಮುಖಂಡರು, ಯಾವುದೇ ಶರತ್ತುಗಳನ್ನು ನೀಡದೆ ರೈತರು ಬೆಳೆದಿರುವಂತಹ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿ ಇರುವಂತಹ ಗೊಂದಲಗಳನ್ನ ನಿವಾರಿಸಿ ಧಾರವಾಡಕ್ಕೆ ಸಾಂಪಲ್ ಕಳಿಸೊದ್ದು ಆಗಂಗಿಲ್ಲ ಕೂಡಲೇ ಇಲ್ಲೇ ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಒಬ್ಬ ರೈತರ ಖಾತೆಗೆ 2000 ಕೆ. ಜೀ ಅಂತಾ ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು, ಸರಕಾರ ಕೇವಲ ನೆಪ ಮಾತ್ರಕ್ಕೆ ರೈತ ಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ, ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು, ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ಅವರು ಮನವಿ ಸ್ವೀಕರಿಸಿ ಆಗಾಗಲೇ ಸರ್ಕಾರಕ್ಕೆ 3 ಭಾರಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ವರದಿ ಕಳುಹಿಸಿ ಶೀಘ್ರವಾಗಿ ಖರೀದಿ ಕೇಂದ್ರ ಆರಂಭಸುವಂತೆ ನಾವೂ ಕೂಡಾ ತಿಳಿಸಿದ್ದೇವೆ, ಕೆ. ಎಂ. ಎಫ್, ಡಿಸ್ಟಿಲರಿ, ಹಾಗೂ ಪೋಲ್ಟ್ರಿ ಫುಡ್ ಸೇರಿದಂತೆ ಸಾಧ್ಯವಿರುವ ಎಲ್ಲಾ ಕಡೆಗೂ ಖರೀದಿ ಕೇಂದ್ರ ಆರಂಭಸಲು ಪ್ರಯತ್ನ ಮಾಡಲಾಗುತ್ತಿದೆ, ಮೆಕ್ಕೆಜೋಳ ಬೆಳೆಗರಾರ ಸಮಸ್ಯೆ ಕುರಿತು ಆರೀತಿರುವ ನಾವೂ ಆದಷ್ಟು ಬೇಗ ಪ್ರಾರಂಭ ಮಾಡುವಂತೆ ಪ್ರಯತ್ನ ಮಾಡುತ್ತೇನೆ ಎಂದರು,
ಈ ವೇಳೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ್, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಇತರರು ಇದ್ದರು

