Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತೇಶ್ವರ ಜಾತ್ರೆಯಲ್ಲಿ ಸಂಭ್ರಮದ ನಂದಿಕೋಲು ಮೆರವಣಿಗೆ
(ರಾಜ್ಯ ) ಜಿಲ್ಲೆ

ಶಾಂತೇಶ್ವರ ಜಾತ್ರೆಯಲ್ಲಿ ಸಂಭ್ರಮದ ನಂದಿಕೋಲು ಮೆರವಣಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶ್ರೀ ಶಾಂತೇಶ್ವರ ಜಾತ್ರೆ ನಿಮಿತ್ಯ ಇಂದು ಬೆಳಗಿನ ಜಾವ ೫ ಗಂಟೆಗೆ ಕಳ್ಳಿಮಠದಿಂದ ನಂದಿಕೋಲುಗಳ ಭವ್ಯ ಮೆರವಣೆಗೆ ನಡೆಯಿತು.
ಮೆರವಣೆಗೆಯಲ್ಲಿ ಬಾಜಾ ಬೆಂಜೋ. ಕರಡಿ ಕುಣಿತ, ನವೀಲು ಕುಣಿತ, ಪುರವಂತರ ಕುಣಿತ ಸೇರಿದಂತೆ ಆಕರ್ಷಕ ಮೆರವಣೆಗೆ ನಡೆಯಿತು.
ಮೆರವಣೆಗೆ ಕಳ್ಳಿಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಯ್ದು ಗುಡಿಗೆ ತಲುಪಿತು.
ಬಾರಾ ಬಲೂತಿ ಚಾಜದವರು, ಪಟ್ಟಣದ ಗೌಡರು,ನಾಡಗೌಡರು, ದೇಶಪಾಂಡೆಯವರು, ಬಗಲಿಯವರು, ದೇವಾಲಯದ ಅರ್ಚಕರು, ಪುರವಂತರು, ಕಂಬಾರರು, ಅಕ್ಕಸಾಲಿಗರು, ಬಡಿಗರು, ಕಂಬಾರರು, ಅಗಸರು, ಮೇತ್ರಿಯವರು ಹೀಗೆ ಹನ್ನೆರಡು ಚಾಜದವರು ಕೂಡಿಕೊಂಡು ಅಪಾರ ಭಕ್ತ ಸಮೂಹದೊಂದಿಗೆ ಮೆರವಣೆಗೆಯಲ್ಲಿ ಪಾಲ್ಗೊಂಡಿದ್ದರು.
ಪುರವಂತರಾದ ವಿಠ್ಠಲ ಅಹಿರಸಂಗ, ಬಸವರಾಜ ಬಳೂರಗಿ, ವೀರಣ್ಣಾ ಬಡಿಗೇರ, ಮಲ್ಲಿಕಾರ್ಜುನ ಬಡಿಗೇರ, ಸಂಗಣ್ಣ ಶಾಬಾದಿ, ಸಿದ್ರಾಮ ಪತ್ತಾರ, ಶರಣಪ್ಪ ಮಲಘಾಣ, ನಿಂಗಣ್ಣ ಬಡಿಗೇರ, ಚೆನ್ನವೀರಯ್ಯ ಹಿರೇಮಠ ಪುರವಂತರ ಕುಣಿತದಲ್ಲಿ ಶಸ್ತç ಪವಾಡ ಮಾಡಿದರು. ಗಲ್ಲಕ್ಕೆ ಒಂದು ತುದಿಯಿಂದ ಶಸ್ತç ಹಚ್ಚಿ ಇನ್ನೊಂದು ತುದಿಗೆ ಶಸ್ತç ತೆಗೆಯುವದು ದೃಶ್ಯ ಜನಸಾಮಾನ್ಯರನ್ನು ಆಕರ್ಷಿಸಿತು.
ವಾದ್ಯ ವೈಭವಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣೆಗೆ ಮುಖಾಂತರ ಗುಡಿಯ ಮಹಾದ್ವಾರಕ್ಕೆ ಬಂದಿತು. ನಂತರ ಬೇಡಿಕೊಂಡ ಭಕ್ತರು ಸಿಡಿಗಾಯಿ ಒಡೆದರು. ಪುರವಂತರು ಆಡುವದು ಆಮೇಲೆ ಬಾಸಿಂಗ ನಂದಿಕೋಲು ಪಲ್ಲಕ್ಕಿ ಗುಡಿಯ ಸುತ್ತ ಪ್ರದಕ್ಷಣೆ ನಡೆದವು. ಬೆಳಿಗ್ಗೆಯಿಂದ ಶ್ರೀ ಸದ್ಗುರು ಶಾಂತೇಶ್ವರ ಕೃಷಿ ಉತ್ಪನ ಮಾರುಕಟ್ಟೆ ಇವರಿಂದ ಪ್ರಸಾದ ಸೇವೆ ನಡೆಯಿತು. ಶ್ರೀ ಶಾಂತೇಶ್ವರ ಕಾಲೇಜು ಮೈದಾನದಲ್ಲಿ ಜಂಗಿ ನಿಕಾಲಿ ಕುಸ್ತಿಗಳು ನಡೆದವು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ , ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಸುಗೌಡ ಬಿರಾದಾರ, ಸಿದ್ದಲಿಂಗ ಹಂಜಗಿ, ಶ್ರೀಕಾಂತ ಕುಡಿಗನೂರ , ಅಶೋಕ ಪಾಟೀಲ, ಈರಣ್ಣ ಮೈದರಗಿ, ರಾಜು ಹದಗಲ್ಲ, ಸೇರಿದಂತೆ ದೇವಸ್ಥಾನ ಸಮಿತಿ ಸದಸ್ಯರು ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಸ್ಪಂದನಾ ಸುಪರ್ ಸ್ಪೇಷಾಲಿಟಿ ಆಸ್ಪತ್ರೆ ಇವರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಬಿ.ಪಿ, ಸುಗರ್, ಮಂಡಿನೋವು, ಹಾಗೂ ಇನ್ನಿತರ ರೋಗಗಳಿಗೆ ಸೂಕ್ತ ಪರಿಹಾರ ಹಾಗೂ ಚಿಕಿತ್ಸೆ ನೀಡಲಾಯಿತು.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.