Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ಇಂಧನ ಚಾಲಿತ ತ್ರಿಚಕ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಮತ್ತು ಜಾಗರೂಕತೆಯಿಂದ ಚಲಾಯಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತ್ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ೧೪ಜನ ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ೨೦೨೩-೨೪ನೆಯ ಸಾಲಿನಿಂದ ಇಲ್ಲಿಯವರೆಗೆ ಸಿಂದಗಿ ಮತಕ್ಷೇತ್ರದಲ್ಲಿ ಬರುವ ವಿಕಲಚೇತನರಿಗೆ ಈಗಾಗಲೇ ೨೯ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಜೊತೆಗೆ ವಿಕಲಚೇತನರ ಜಾವನೋಪಾಯಕ್ಕೆ ಉಪಯೋಗವಾಗುವ ೪೮೦ ಕಿಟ್‌ಗಳನ್ನು ಇಲಾಖೆಯ ವತಿಯಿಂದ ಕೊಡಿಸುವ ಕಾರ್ಯವನ್ನು ಸಹ ಮಾಡಲಾಗಿದೆ. ೨೦೨೫-೨೬ನೆಯ ಸಾಲಿನಲ್ಲಿ ೧೪ತ್ರಿಚಕ್ರ ವಾಹನವನ್ನು ವಿತರಣೆ ಮಾಡಲಾಗಿದೆ. ಇನ್ನೂ ೧೬ ತ್ರಿಚಕ್ರ ವಾಹನಗಳನ್ನು ಮಂಜೂರಾಗಿದ್ದು ಚಳಿಗಾಲ ಅಧಿವೇಶನ ಮುಗಿದ ಬಳಿಕ ವಿತರಣೆ ಮಾಡುವ ಕಾರ್ಯವನ್ನು ಮಾಡುತ್ತೇವೆ. ಕಳೆದ ವರ್ಷ ಆಲಮೇಲದಲ್ಲಿ ವಿಕಲಚೇತನರು ಹಮ್ಮಿಕೊಂಡ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭವನಕ್ಕಾಗಿ ಬೇಡಿಕೆಯನಿಟ್ಟಿದ್ದರು. ಅವರ ಬೇಡಿಕೆಗೆ ಅನುಸಾರವಾಗಿ ಶಾಸಕರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರೂ.೨೦ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಭೂಮಿ ಪೂಜಾ ಸಮಾರಂಭ ಮಾಡಲಾಗುವುದು ಎಂದರು.
ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಜಗದೀಶ ಕೆ, ತಾಪಂ ಇಒ ರಾಮು ಅಗ್ನಿ, ಜಿಲ್ಲಾ ಕೆಡಿಪಿ ಸದಸ್ಯ ಶಿವಣ್ಣ ಕೊಟರಗಸ್ತಿ, ತಾಲೂಕು ಕೆಡಿಪಿ ಸದಸ್ಯ ಸುರೇಶ ಚೌಧರಿ, ಅಯ್ಯಪ್ಪ ಕಟ್ಟಿಮನಿ, ಖಾದಿರ್ ಬಂಕಲಗಿ, ಎಂಆರ್‌ಡಬ್ಲೂö್ಯ ಮುತ್ತು ಸತಿಹಾಳ, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯೆ ಸುನಂದಾ ಯಂಪುರೆ, ಭೀಮು ವಾಲೀಕಾರ, ಐಇಸಿ ಸಂಯೋಜಕ ಭೀಮರಾಯ ಚೌಧರಿ ಸೇರಿದಂತೆ ಅನೇಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.