Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
(ರಾಜ್ಯ ) ಜಿಲ್ಲೆ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಅಪಾರ ಸಂಖ್ಯೆಯಲ್ಲಿರುವ ಬೇವಿನ ಮರಗಳು ಕ್ರಮೇಣ ಯಾವುದೋ ಕಾಯಿಲೆಗೆ ಒಣಗುತ್ತಿದ್ದು, ಎಲೆಗಳೆಲ್ಲಾ ಹಳದಿ ಬಣ್ಣಕ್ಕೆ ತಿರುಗಿವೆ.
ರೋಗ ನಿರೋಧಕ ಶಕ್ತಿ ಹೊಂದಿರುವ ಅನೇಕ ರೋಗಗಳಿಗೆ ಔಷಧಿಯಾಗಿ ಬಳಕೆಯಾಗುವ ಬೇವಿಗೆ ಇಂಥ ಕುತ್ತು ಬಂದಿದೆ. ಸಹಸ್ರಾರು ಬೇರೆ ಬೇರೆ ಜಾತಿಯ ಗಿಡಗಳಿದ್ದರೂ ಕೇವಲ ಬೇವಿನ ಮರಗಳಿಗೆ ಮಾತ್ರ ಈ ರೀತಿಯ ರೋಗ ಕಂಡು ಬಂದಿದ್ದು, ಮರಗಲ ಎಲೆಗಳೆಲ್ಲಾ ಒಣಗಿ ನಿಂತಿವೆ. ಸದ್ಯ ಆಲಮಟ್ಟಿ ರೇಲ್ವೆ ಸ್ಟೇಷನ್ ನಿಂದ ಜವಾಹರ ನವೋದಯ ಶಾಲೆಯ ಮಾರ್ಗದುದ್ದಕ್ಕೂ ಎರಡೂ ಬದಿ ಹತ್ತಾರು ಬೇವಿನ ಮರಗಳು ಸಂಪೂರ್ಣ ಒಣಗಿವೆ. ಆಲಮಟ್ಟಿಯಿಂದ ಸೀತಿಮನಿ ಮಾರ್ಗದುದ್ದಕ್ಕೂ (ರೈಲು ಮಾರ್ಗ) ಅಕ್ಕ ಪಕ್ಕ ಹಚ್ಚಿರುವ ಬೇವಿನ ಗಿಡಗಳೆಲ್ಲವೂ ಒಣಗಿವೆ. ಸಾಲಾಗಿರುವ ಈ ಬೇವಿನ ಮರಗಳು ಒಣಗಿದ್ದು, ಈ ರೋಗ ಇನ್ನೀತರ ಅಕ್ಕ ಪಕ್ಕದ ಬೇವಿನ ಮರಗಳಿಗೆ ಕ್ರಮೇಣ ವಿಸ್ತಾರಗೊಳ್ಳುತ್ತಿವೆ.
ಚಿಕ್ಕ, ಚಿಕ್ಕ ಬೇವಿನ ಗಿಡಗಳು ಸೇರಿ, ೨೦ ವರ್ಷ ಹಳಿತಾದ ದೊಡ್ಡ ದೊಡ್ಡ ಮರಗಳಿಗೂ ಈ ರೋಗದ ಬಾಧೆ ತಗುಲಿದೆ.
ಆಲಮಟ್ಟಿಯಲ್ಲಿ ಸುಮಾರು ೧೦೦ ಕ್ಕೂ ಹೆಚ್ಚು ಮರಗಳಿಗೆ ಈ ರೀತಿಯ ರೋಗ ತಗುಲಿದ್ದು, ಇನ್ನುಳಿದ ಬೇವಿನ ಮರಗಳು ಹಚ್ಚು ಹಸರಾಗಿವೆ. ಅವಕ್ಕೂ ಈ ರೋಗ ತಗಲುವ ಸಾಧ್ಯತೆಯಿದೆ. 
ಮರಗಳ ರಕ್ಷಣೆಗೆ ಆಗ್ರಹ:
ರೋಗದ ಬಗ್ಗೆ ತಜ್ಞರಿಂದ ಪರಿಶೀಲನೆ ನಡೆಸಿ, ಅದಕ್ಕೆ ಕಾರಣ ಏನು? ಎಂಬುದನ್ನು ತಿಳಿದು, ಈಗ ರೋಗ ತಗುಲಿರುವ ಗಿಡಗಳಿಗೆ ಸೂಕ್ತ ರಾಸಾಯನಿಕ ಸಿಂಪಡಣೆ ಮಾಡಿ, ಗಿಡಗಳನ್ನು ರಕ್ಷಿಸಬೇಕು, ಜತೆಗೆ ಇನ್ನುಳಿದ ಗಿಡಗಳಿಗೂ ಈ ರೋಗ ತಗುಲದಂತೆ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರವೇ ಆಲಮಟ್ಟಿ ಘಟಕದ ಅಧ್ಯಕ್ಷ ಫತ್ತೇಸಾಬ್ ಚಾಂದ್, ಉಪಾಧ್ಯಕ್ಷ ಚಂದ್ರಶೇಖರ ಹೆರಕಲ್ಲ ಮತ್ತೀತರರು ಆಗ್ರಹಿಸಿದ್ದಾರೆ. 

ಟೀ ಮಾಸ್ಕ್ಯುಟೋ ಬಗ್ ಕಾಯಿಲೆ

ಆಲಮಟ್ಟಿ ಹಾಗೂ ಸುತ್ತಮುತ್ತ ಬೇವಿನ ಗಿಡಗಳು ಒಣಗುತ್ತಿರುವುದಕ್ಕೆ “ಟೀ ಮಾಸ್ಕ್ಯುಟೋ ಬಗ್’ ಎಂಬ ಕೀಟಗಳ ಕಾಯಿಲೆ ಕಾರಣ. ಈ ಕೀಟಗಳು ಕೇವಲ ಬೇವಿನ ಗಿಡಗಳನ್ನು ಗುರಿಯನ್ನಾಗಿಸಿ, ಆ ಗಿಡಗಳ ಟೊಂಗೆ, ಕಾಂಡಗಳಲ್ಲಿನ ರಸವನ್ನು ಹೀರುತ್ತವೆ. ಕೀಟಗಳು ಸಸ್ಯ ಅಂಗಾಂಶಗಳನ್ನು ಕೊಲ್ಲುವ ಕಿಣ್ವಗಳನ್ನು ಚುಚ್ಚುತ್ತವೆ, ಇದರಿಂದಾಗಿ ಅವು ಕಂದು ಬಣ್ಣಕ್ಕೆ ತಿರುಗಿ ಸುಟ್ಟು ಹೋದಂತೆ ಕಾಣುತ್ತವೆ ಎಂದು ಆಲಮಟ್ಟಿ ಅರಣ್ಯ ಇಲಾಖೆಯ ಆರ್.ಎಫ್.ಓ. ಮಹೇಶ ಪಾಟೀಲ ಹೇಳಿದರು. 
ರೋಗ ತಗುಲಿದ ಮರಗಳನ್ನು ಪರಿಶೀಲಿಸಲಾಗಿದೆ. ಬೇರುಗಳಿಗೆ ಯಾವುದೇ ಹಾನಿಯಾಗಿಲ್ಲ, ಟೊಂಗೆ ಹಾಗೂ ಎಲೆಗಳಿಗೆ ಹಾನಿಯಾಗಿದೆ. ಈಗಾಗಲೇ ತಜ್ಞರನ್ನು ಸಂಪರ್ಕಿಸಲಾಗಿದ್ದು, ಅವರು ಶಿಫಾರಸ್ಸು ಮಾಡುವ ರಾಸಾಯನಿಕವನ್ನು ಸಿಂಪಡಿಸಲಾಗುವುದು ಎಂದು ಅವರು ತಿಳಿಸಿದರು. ರೋಗ ಬಾಧೆಯುಳ್ಳ ಎಲ್ಲಾ ಮರಗಳನ್ನು ರಕ್ಷಿಸಲಾಗುವುದು ಎಂದರು. 
ನಾನಾ ವಿಧದ ಸಸ್ಯಗಳಿಗೆ ರೋಗ ತಗುಲಿದಾಗ ಬೇವಿನ ಎಣ್ಣೆಯನ್ನೇ ಸಿಂಪಡಿಸಲಾಗುತ್ತದೆ. ಆದರೆ ಈಗ ಬೇವಿನ ಎಣ್ಣೆಗೆ ಈ ರೋಗ ಬಾಧೆ ಬಂದಿರುವುದು ಸೋಜಿಗಕ್ಕೆ ಕಾರಣವಾಗಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.