Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
(ರಾಜ್ಯ ) ಜಿಲ್ಲೆ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಡಬ್ಲೂಡಿ ಇಲಾಖೆಯ ಪತ್ರ ನಿರ್ಲಕ್ಷಿಸಿ ರಸ್ತೆಯ ಪಕ್ಕ ಅಳವಡಿಸಿದ ಪೈಪಲೈನ್ | ಪೈಪಲೈನ್ ಅಳವಡಿಕೆ ಪ್ರದೇಶದಲ್ಲಿ ಮಳೆಗಾಲದಲ್ಲಿ ವಾಹನ ಸಿಕ್ಕಿಕೊಳ್ಳುವ ಆತಂಕ | ಎಚ್ಚರಿಸಿದ ಗ್ರಾಮಸ್ಥರ ಮೇಲೆ ದೂರು ದಾಖಲು

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸರ್ಕಾರದ ನಿರ್ದೇಶನ ಪಾಲಿಸದೇ ಜಿಲ್ಲಾ ಮುಖ್ಯರಸ್ತೆಯ ಬದಿಯಲ್ಲಿ ರಸ್ತೆ ಅಗೆದು ಪೈಪ್‌ಲೈನ್ ಅಳವಡಿಸುವ ಮೂಲಕ ಜಲಧಾರೆ ಕಾಮಗಾರಿ ಕೈಗೊಂಡಿರುವ ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳ ನಡೆಗೆ ಗ್ರಾಮಸ್ಥರು ಹಾಗೂ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಮೂಲಕ ತಾಳಿಕೋಟೆ ಸಂಪರ್ಕಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜಲಧಾರೆ ಕಾಮಗಾರಿಯ ಪೈಪಲೈನ್ ರಸ್ತೆ ಪಕ್ಕವೇ ಅಳವಡಿಸಿದ್ದು ಸರ್ಕಾರದ ನಿಯಮ ಹಾಗೂ ಲೋಕೋಪಯೋಗಿ ಇಲಾಖೆಯ ಪತ್ರವನ್ನು ಗಾಳಿಗೆ ತೂರಿದೆ. ಈ ಬಗ್ಗೆ ಮುಖಂಡ ನಾನಾಗೌಡ ಬಿರಾದಾರ(ಗೊಟಗಣಕಿ) ಮಾತನಾಡಿ, ಸರ್ಕಾರ ಯಾವುದೇ ಜಿಲ್ಲಾ ರಸ್ತೆಯ ಮಧ್ಯೆ ಭಾಗದಿಂದ ೧೫ ಮೀ ಅಂತರದಲ್ಲಿ ಪೈಪಲೈನ್ ಕಾಮಗಾರಿ ಕೈಗೊಳ್ಳತಕ್ಕದ್ದು ಎಂಬ ಸ್ಪಷ್ಟ ನಿರ್ದೇಶನವಿದೆ. ಆದರೆ ಹಂಚಲಿ ಗ್ರಾಮದ ಹತ್ತಿರ ಜಲಧಾರೆ ಕಾಮಗಾರಿಯನ್ನು ರಸ್ತೆಪಕ್ಕವೇ ಕೈಗೊಂಡಿದ್ದು ಪೈಪಲೈನ್ ಅಳವಡಿಸಿದ್ದಾರೆ. ಇದು ಸರ್ಕಾರದ ನಿರ್ದೇಶನಕ್ಕೆ ವಿರುದ್ಧವಾಗಿರುವುದರ ಜೊತೆಗೆ ಮುಂದಿನ ದಿನಗಳಲ್ಲಿ ಮಳೆಯಾದಾಗ ವಾಹನಗಳು ಅಪಘಾತಕ್ಕೆ ಒಳಗಾಗಲು ಅವಕಾಶ ಕಲ್ಪಿಸಿದಂತಾಗಿದೆ. ಈ ಕುರಿತು ಲೋಕೋಪಯೋಗಿ ಇಲಾಖೆ ಸಿಂದಗಿ ಉಪವಿಭಾಗದ ಅಧಿಕಾರಿಗಳು ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಿಗೆ ಪತ್ರ ಬರೆದು ಎಚ್ಚರಿಸಿದ್ದರು ಸಹ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಂದಗಿ ಉಪವಿಭಾಗದ ಎಇಇ ತಾರಾನಾಥ ರಾಠೋಡ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಪೈಪಲೈನ್ ಕಾಮಗಾರಿ ನಡೆಸಿ ಪ್ರಶ್ನಿಸಿದವರ ಮೇಲೆ ದೂರು ನೀಡಿದ್ದಾರೆ.
ಕಳೆದ ೨ ವರ್ಷದ ಹಿಂದೆ ಅಂದಿನ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಸುಸಜ್ಜಿತ ರಸ್ತೆ ನಿರ್ಮಿಸಿ ಅನುಕೂಲ ಮಾಡಿದ್ದರು. ಈಗ ಅವೈಜ್ಞಾನಿಕ ಪೈಪಲೈನ್ ಕಾಮಗಾರಿಯಿಂದ ರಸ್ತೆ ಹಾಳಾಗಿ ಅಪಘಾತಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಬೇಕಾಬಿಟ್ಟಿ ಕಾಮಗಾರಿ ಕೈಗೊಳ್ಳುವ ಎಇಇ ತಾರಾನಾಥ ಅವರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣಗೌಡ ಗ್ವಾತಗಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ದೊಡಮನಿ, ಮಹಾಂತೇಶ ಬಿರಾದಾರ, ಸುರೇಶಕುಮಾರ ಇಂಗಳಗೇರಿ(ಪೀರಾಪುರ), ಚಿದುಗೌಡ ಬಿರಾದಾರ, ರಮೇಶ ಹಂಚಲಿ ಸಹಿತ ಹಂಚಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.