Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
(ರಾಜ್ಯ ) ಜಿಲ್ಲೆ

ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ಮಹಾ ಶಕ್ತಿಯೇ ಗುರು ಅಂತಹ ಸದ್ಗುರುವಿನ ಸನ್ನಿಧಿಯಲ್ಲಿ ಜರುಗುವ ಹುಣ್ಣಿಮೆಯ ಸತ್ಸಂಗ ಮಹಾ ಬೆಳಕು ಎಂದು ಶಿವಬಸಯ್ಯ ಸ್ವಾಮಿ ಕುಕೂನೂರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು ಗುರು ಎಂದರೆ ಅಭಿಮಾನ, ಗುರು ಎಂದರೆ ಆಶಿರ್ವಾದ, ಗುರು ಎಂದರೆ ಚೈತನ್ಯ ಸ್ವರೂಪ, ಎನ್ನುತ್ತಾ, ಜಗದ ಜನರು ಜಂಜಾಟಗಳಿಂದ ಜರ್ಜರಿತವಾದಗ ಜನಜೀವನಕ್ಕೆ ಜೀವಾಮೃತ ತುಂಬಿ ಜಾಗೃತಿಗೊಳಿಸುವ ಜಂಗಮ ಸ್ವರೂಪವೇ ಗುರು ಎಂದವರು, ಸಾಧು, ಸಂತರು, ಸತ್ಪುರುಷರು, ಚಿಂತಕರು, ಶ್ರೇಷ್ಠ ದಾರ್ಶನಿಕರು ತೋರಿದ ಮಾರ್ಗವನ್ನು ಅನುಸರಿಸುತ್ತಾ, ಭಗವಂತನ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾಗುವ ಮೂಲಕ ಸದ್ಭಕ್ತರ ಬಾಳು ಬೆಳಗಲಿ ಎಂಬ ಸದುದ್ದೇಶದಿಂದ ಮಾಸಿಕ ಶಿವಾನುಭವ ಗೋಷ್ಠಿಯನ್ನು ಆಯೋಜಿಸಿ ಅನುಭವದ ಅಮೃತಧಾರೆ ಎರೆಯುವ ಷ ಬ್ರ ಚನ್ನಬಸವ ಶಿವಾಚಾರ್ಯರ ಘನ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಸದ್ಭಕ್ತರಾದ ಮುದುಕಣ್ಣ ಸಾಹುಕಾರ ಹುಣಸಿಗಿ ಮಾತನಾಡಿ, ಭಕ್ತಿಯೇ ಮುಕ್ತಿಗೆ ಮೂಲ ಮಂತ್ರ ಎನ್ನುತ್ತಾ, ಪ್ರತಿಯೊಬ್ಬರ ಬದುಕಿನ ಬವಣೆಗಳು ದೂರಾಗಲು, ಬದುಕಲಿ ಕಠಿಣ ವ್ರತ ಆಚರಣೆಗಳು ಬೇಕು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಾಗ, ಪರಶಿವನ ಕೃಪೆ ಸುಲಭ ಸಾಧ್ಯ. ನೀತಿ ನಿಯಮ, ಚೌಕಟ್ಟುಗಳ ತತ್ವೂಪದೇಶ ಆಲಿಸಲು ಸತ್ಸಂಗದಲ್ಲಿ ಸೇರೋಣ ಎಂದರು.
ಷ ಬ್ರ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಿದ್ದಲಿಂಗ ಸ್ವಾಮಿ ಚಿಂಚೋಳಿ ಹಾಗೂ ರಾಜಶೇಖರ ಸ್ವಾಮಿ ಅಳ್ಳೋಳ್ಳಿ ಇವರಿಂದ ಸಂಗೀತ ಕಾರ್ಯಕ್ರಮ ಮೂಡಿ ಬಂತು. ಪತ್ರಕರ್ತರಾದ ಇಲಿಯಾಸ್ ಪಟೇಲ್, ಪರಶುರಾಮ ಮಾಳಹಳ್ಳಿಕರ್, ವೀರೇಶ ಟಕ್ಕಳಕಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ ಯಂಕನಗೌಡ ಪಾಟೀಲ ನಿರೂಪಿಸಿ ವಂದಿಸಿದರು. ಪ್ರಮುಖರಾದ ಸಾಹಿತಿ ನಿಂಗನಗೌಡ ದೇಸಾಯಿ, ಮಹಾದೇವಪ್ಪ ವಜ್ಜಲ್, ಅಭಿಷೇಕ್ ಪಾಟೀಲ ನಿಜಗುಣಿ ವಿಶ್ವಕರ್ಮ, ಶ್ರೀಮಠದ ಸದ್ಭಕ್ತರು ಸೇರಿದಂತೆ ಮಹಿಳೆಯರು, ಮಕ್ಕಳು, ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
    In (ರಾಜ್ಯ ) ಜಿಲ್ಲೆ
  • ಡಿಜಿ ಪ್ರಶಂಸಾ ಪದಕಕ್ಕೆ ಚೆನ್ನಬಸವಣ್ಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸಂಸ್ಥೆಗಳಿಗೆ ಎಲ್ಲರ ಸಹಕಾರ ಅಗತ್ಯ :ಅಂಗಡಿ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ತುಂಬಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ರಸ್ತೆ ಸುಧಾರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.