Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಮಾನವ ಹಕ್ಕುಗಳೇ ನಮ್ಮ ಬದುಕು; ರಕ್ಷಿಸುವುದು ನಮ್ಮೆಲ್ಲರ ಹೊಣೆ
ವಿಶೇಷ ಲೇಖನ

ಮಾನವ ಹಕ್ಕುಗಳೇ ನಮ್ಮ ಬದುಕು; ರಕ್ಷಿಸುವುದು ನಮ್ಮೆಲ್ಲರ ಹೊಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)
ವಿಜಯಪುರ

ಉದಯರಶ್ಮಿ ದಿನಪತ್ರಿಕೆ

ನೆಲ್ಸನ್ ಮಂಡೇಲಾ ಅವರು, ಜನರಿಗೆ ಅವರ ಮಾನವ ಹಕ್ಕುಗಳನ್ನು ನಿರಾಕರಿಸುವುದು ಅವರ ಮಾನವೀಯತೆಯನ್ನು ಸವಾಲು ಮಾಡಿದಂತೆ” ಎಂದು ಹೇಳಿದ್ದಾರೆ. ಈ ಜಗತ್ತಿನಲ್ಲಿ ಪ್ರತಿಯೊಂದು ಜೀವಿಗಳಿಗೂ ಜೀವಿಸುವ ಹಕ್ಕಿದೆ. ಸ್ವತಂತ್ರವಾಗಿ ಬದುಕುವ, ವಾಸಿಸುವ, ಆಚರಿಸುವ, ಮಾತನಾಡುವ ಹಕ್ಕಿದೆ. ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಮಾನವನ ಹಕ್ಕುಗಳು ಸಂರಕ್ಷಿಸಲ್ಪಡಬೇಕು. ಅವು ಯಾರಿಂದಲೂ ಹತ್ತಿಕ್ಕುವ ಅಥವಾ ದಮನಿಸುವಂತಾಗಬಾರದು, ಮಾನವ ಹಕ್ಕುಗಳು ಎಂದರೆ ಜಾತಿ, ಮತ, ಪಂಥ, ಪಂಗಡ, ಜನಾಂಗ, ಲಿಂಗ, ರಾಷ್ಟ್ರೀಯತೆ, ಭಾಷೆ, ಧರ್ಮ ಅಥವಾ ಯಾವುದೇ ಇತರ ಹಿನ್ನೆಲೆಗಳನ್ನು ಪರಿಗಣಿಸದೇ ಎಲ್ಲಾ ಮಾನವರಿಗೆ ಸಹಜವಾಗಿ ದೊರೆಯುವ ಮೂಲಭೂತ ಹಕ್ಕುಗಳು, ಬದುಕುವ ಹಕ್ಕು, ಸಮಾನತೆ, ಸ್ವಾತಂತ್ರö್ಯ, ಅವಕಾಶ, ಶಿಕ್ಷಣ, ಆರೋಗ್ಯ ಮತ್ತು ಘನತೆ-ಗೌರವದ ಹಕ್ಕುಗಳನ್ನು ಒಳಗೊಂಡಿದೆ ಎಂದು ಹೇಳಬಹುದು. ಪ್ರತಿಯೊಬ್ಬ ತನ್ನ ಘನತೆ-ಗೌರವವನ್ನು ರಕ್ಷಿಸಿಕೊಳ್ಳಲು ಜವಾಬ್ದಾರನಾಗಿರುತ್ತಾನೆ. ಹೀಗೆ ಮನುಷ್ಯನಿಗೆ ಜೀವನ ನಿರ್ವಹಣೆಗೆ ಕನಿಷ್ಠ ಅಗತ್ಯತೆಗಳು ಸಿಗಬೇಕು ಮತ್ತು ಅವರ ಹಕ್ಕುಗಳಿಗೆ ಗೌರವ ನೀಡಬೇಕೆಂಬ ಮಹೋನ್ನತವಾದ ಉದ್ಧೇಶದಿಂದ ಡಿಸೆಂಬರ ೧೦ ರಂದು ಪ್ರತಿವರ್ಷ ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.
ಈ ಭೂಮಿಯ ಮೇಲೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯು ನ್ಯಾಯಯುವ, ಶಾಂತಿಯುತ ಮತ್ತು ಸಮೃದ್ಧ ಸಮಾಜವನ್ನು ನಿರ್ಮಿಸಲು ಈ ಮಾನವ ಹಕ್ಕುಗಳು ಅಡಿಪಾಯ ಹಾಕುತ್ತವೆ. ವ್ಯಕ್ತಿಯ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ, ಆರೋಗ್ಯ ಮತ್ತು ವಾಕ್ ಸ್ವಾತಂತ್ರ್ಯದಂತಹ ಮೂಲಭೂತ ಹಕ್ಕುಗಳು ಇಡೀ ಮಾನವ ಸಂಕುಲದ ಅಭಿವೃದ್ಧಿಗೆ ಸಹಕಾರಿಯಾಗಿವೆ. ಮಾನವ ಹಕ್ಕುಗಳು ಕೇವಲ ಆದರ್ಶಗಳಲ್ಲ. ಅವು ಇಡೀ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಆತ್ಮಗೌರವ, ಘನತೆ ಮತ್ತು ಸ್ವಾತಂತ್ರ್ಯ, ನ್ಯಾಯ, ನಿಷ್ಠೆ ಮತ್ತು ಒಟ್ಟಾರೆ ಇಡೀ ಜಗತ್ತನೆಲ್ಲೆಡೆ ವಿಶ್ವಶಾಂತಿಯನ್ನು ಕಾಪಾಡಿಕೊಳ್ಳಲು ಅಗತ್ಯವಾದ ನೈತಿಕ ಆಧಾರಸ್ತಂಭಗಳಾಗಿವೆ ಎಂದರೆ ತಪ್ಪಾಗಲಾರದು.
ಆಚರಣೆಯ ಹಿನ್ನೆಲ್ಲೆ


೧೯೪೮ ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಡಿಸೆಂಬರ ೧೦ ರಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಸಾರ್ವತ್ರಿಕವಾಗಿ ಆಚರಿಸುವಂತೆ ಕರೆ ಕೊಟ್ಟಿತು. ಜಾಗತಿಕವಾಗಿ ನಾಗರೀಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ. ಜನಜಾಗೃತಿಗಾಗಿ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಾಂಗ, ಲಿಂಗ, ಧರ್ಮ, ರಾಷ್ಟ್ರೀಯತೆಗಳಲ್ಲಿ ಯಾವುದೇ ಭೇದವನ್ನು ಎಣಿಸದೇ ಎಲ್ಲರೂ ಸಮಾನರಾಗಿದ್ದು, ಸಮಾನ ಅವಕಾಶ, ಹಕ್ಕು ಮತ್ತು ಸ್ವಾತಂತ್ರ್ಯವನ್ನು ಹೊಂದಿರುವ ಬಗ್ಗೆ ಖಚಿತಪಡಿಸುತ್ತದೆ.
ಆಚರಣೆಯ ಮಹತ್ವ
ಮಾನವ ಹಕ್ಕುಗಳು ವ್ಯಕ್ತಿಗಳ ಮಧ್ಯೆ ಇರುವ ಅಂತರ್ಗತ ಘನತೆ, ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ರಕ್ಷಿಸುವುದರ ಮೂಲಕ ಪರಸ್ಪರ ಮಾನವೀಯ ಸಂಬಂಧ ಮತ್ತು ಅನ್ಯೋನ್ಯತೆಯನ್ನು ಬೆಳೆಸುತ್ತವೆ. ಜಾತಿ, ಜನಾಂಗ, ಲಿಂಗ, ಧರ್ಮಗಳ ಮಧ್ಯೆ ಇರುವ ಭೇದ-ಭಾವವನ್ನು ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡುತ್ತಾ, ಪರಸ್ಪರ ನಾವೆಲ್ಲರೂ ಒಂದು ಮತ್ತು ಸಮಷ್ಠಿಭಾವದ ಸಂದೇಶವನ್ನು ಸಾರುತ್ತವೆ. ಪ್ರತಿಯೊಬ್ಬ ವ್ಯಕ್ತಿಯು ತಾನು ಸರ್ವತಂತ್ರ ಸ್ವತಂತ್ರನಾಗಿದ್ದೂ ತನ್ನ ಜೀವನ, ವಾಕ್ ಸ್ವಾತಂತ್ರ್ಯ, ನಂಬಿಕೆ ಮತ್ತು ಬದುಕುವ ಸ್ವಾಯತ್ತತೆಯ ಹಕ್ಕನ್ನು ಹೊಂದಿರುತ್ತಾನೆ ಎಂಬುದನ್ನು ಮಾನವ ಹಕ್ಕುಗಳ ದಿನದ ಮೂಲಕ ಅಭಿವ್ಯಕ್ತಗೊಳಿಸುತ್ತದೆ.
ಕೊನೆಯ ನುಡಿ
ಹೋರಾಟಗಾರ್ತಿ ಮಲಾಲಾ ಯುಸುಫ್‌ಜಾಯ್ ಅವರು “ಒಂದು ಪುಸ್ತಕ, ಒಂದು ಪೆನ್ನು, ಒಂದು ಮಗು ಮತ್ತು ಒಬ್ಬ ಶಿಕ್ಷಕ ಈ ಜಗತ್ತನ್ನು ಬದಲಾಯಿಸಬಹುದು ಎಂಬುದನ್ನು ನೆನಪಿನಲ್ಲಿಟ್ಟಿಕೊಳ್ಳಬೇಕು” ಎಂದು ಹೇಳಿದ್ದಾರೆ. ಈ ಮಾನವ ಹಕ್ಕುಗಳ ದಿನವು ಪ್ರತಿ ವ್ಯಕ್ತಿಯ ಗೌರವ, ಸಮಾನತೆ ಮತ್ತು ಬೆಂಬಲ ನೀಡುವ ದಿನವಾಗಿದೆ. ನಾವು ಒಂದಾಗಿ ಎಲ್ಲರ ಹಕ್ಕುಗಳನ್ನು ಗುರುತಿಸುವ, ರಕ್ಷಿಸುವ ಮತ್ತು ಆಚರಿಸುವ ನಾವು ಪ್ರಪಂಚ ನಿರ್ಮಾಣ ಮಾಡಬೇಕಾಗಿದೆ. ಇದು ಕೇವಲ ಒಂದು ಆಚರಣೆಯಲ್ಲ. ಬದಲಾಗಿ ಮಾನವ ಘನತೆಯನ್ನು ಎತ್ತಿ ಹಿಡಿಯುವ ನಮ್ಮ ನಿರಂತರ ಬದ್ಧತೆಯಾಗಬೇಕೆನ್ನುವುದೇ ನನ್ನ ಅಂಬೋಣ..

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.