Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಣಶ್ಯಾಳ – ಕಲಕೇರಿ ಕ್ರಾಸ್‌ ಹಾಳಾದ ರಸ್ತೆಗೆ ಗ್ರಾಮಸ್ಥರಿಂದಲೇ ಕಾಯಕಲ್ಪ
(ರಾಜ್ಯ ) ಜಿಲ್ಲೆ

ಹುಣಶ್ಯಾಳ – ಕಲಕೇರಿ ಕ್ರಾಸ್‌ ಹಾಳಾದ ರಸ್ತೆಗೆ ಗ್ರಾಮಸ್ಥರಿಂದಲೇ ಕಾಯಕಲ್ಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಿಂದ ಕಲಕೇರಿ ಕ್ರಾಸ್‌ವರೆಗೆ ಸಂಪೂರ್ಣ ಹಾಳಾದ ರಸ್ತೆಯನ್ನು ಗ್ರಾಮಸ್ಥರೇ ಹಣ ಸಂಗ್ರಹಿಸುವುದರ ಮೂಲಕ ತಾವೇ ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ.
ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಗ್ರಾಮಸ್ಥರು ಹಲವು ಬಾರಿ ಪತ್ರಿಕೆಯ ಮೂಲಕ ಗ್ರಾಮದ ರಸ್ತೆ ನಿರ್ಮಾಣದ ಕುರಿತು ಶಾಸಕರಿಗೆ ಮನವಿ ಮಾಡಿದ್ದರೂ ಶಾಸಕರು ಸ್ಪಂದಿಸದ ಕಾರಣ ಸ್ವತಃ ತಾವೇ ಪ್ರತಿ ಮನೆಗೆ ೫೦೦ ರೂಗಳ ಹಣ ಸಂಗ್ರಹಿಸುವುದರ ಮೂಲಕ ಗ್ರಾಮದಿಂದ ಕಲಕೇರಿ ಕ್ರಾಸ್‌ವರೆಗಿನ ಅರ್ಧ ಕಿ.ಮೀ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಾಂತಗೌಡ ಕೋಟಿಖಾನಿ ಮಾತನಾಡಿ, ರಸ್ತೆ ಅಭಿವೃದ್ಧಿ ಕುರಿತು ಶಾಸಕರಲ್ಲಿ ಮೊಬೈಲ್ ಮೂಲಕ ವಿನಂತಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಶಾಸಕರ ನಡೆ ನಮಗೆ ಬೇಸರ ತಂದಿದೆ. ಅವರ ಬೇಜವಾಬ್ದಾರಿ ಹೇಳಿಕೆಯಿಂದ ಬೇಸತ್ತು ಕೊನೆಗೆ ಗ್ರಾಮಸ್ಥರ ನೆರವು ಹಾಗೂ ಸಹಕಾರದೊಂದಿಗೆ ರಸ್ತೆ ನಿರ್ಮಿಸಲಾಗುತ್ತಿದೆ. ಈ ಕಾರ್ಯದಲ್ಲಿ ಕಲಕೇರಿ ಗ್ರಾಮದ ಶಿವರಾಯ ಮೋಪಗಾರ ಡಂಪರ್ ನೀಡಿ ಸಹಕಾರ ನೀಡಿದ್ದಾರೆ. ಎಂದರು.
ಈ ರಸ್ತೆಯ ಹೊರತಾಗಿ ಗ್ರಾಮದಿಂದ ಕಾಲುವೆಯವರೆಗಿನ ರಸ್ತೆಯು ಸಹ ಸಂಪೂರ್ಣ ಹಾಳಾಗಿದೆ. ಇಲ್ಲಿ ಖಾಸಗಿವಾಹನ ಅಥವಾ ದ್ವಿಚಕ್ರವಾಹನಗಳ ಮೂಲಕ ಸಂಚರಿಸುವವರ ಪರಿಸ್ಥಿತಿ ಹೇಳತೀರದು. ತಗ್ಗು ದಿನ್ನೆಗಳಿಂದ ಕೂಡಿದ ರಸ್ತೆಯಲ್ಲಿ ವಾಹನಗಳು ಧೂಳ ಎಬ್ಬಿಸುತ್ತಾ, ತೆವಳುತ್ತಾ ನಿಧಾನವಾಗಿ ಚಲಿಸಿದರೆ, ಅದರಲ್ಲಿ ಕುಳಿತವರು ಬೆಳಿಗ್ಗೆ ಶುಭ್ರಬಟ್ಟೆಗಳೊಂದಿಗೆ ಹೊರಟವರು ಧೂಳುಮಯವಾಗಿ ಮರಳುವಂತಾಗಿದೆ. ಇನ್ನೂ ಆನೆಮಡು, ಸಲಾದಹಳ್ಳಿ, ಚಟ್ನಳ್ಳಿ, ಅಸಂತಾಪೂರ ಗ್ರಾಮಗಳಿಂದ ನಿತ್ಯ ಅಗತ್ಯ ಕೆಲಸಗಳಿಗೆ ಪಂಚಾಯಿತಿಗೆ ಬರುವವರು ಸಹ ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ.
ಗ್ರಾಮದಿಂದ ಕಲಬುರಗಿ, ಯಾದಗಿರಿ, ಆಲಗೂರ, ಗೋಲಗೇರಿ, ಮಳ್ಳಿ, ಕೆಂಭಾವಿ, ಯಡ್ರಾಮಿ, ಶಹಾಪೂರಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯೇ ಇದಾಗಿದ್ದು ಇಲ್ಲಿ ನಿತ್ಯ ನೂರಾರು ವಾಹನಗಳು, ದ್ವಿಚಕ್ರ ಸವಾರರು ಪ್ರಯಾಣಿಸುತ್ತಾರೆ. ಇವರ ನಿತ್ಯ ಕೆಲಸಗಳಿಗೆ ಹಾಗೂ ಮುಖ್ಯವಾಗಿ ಸುಗಮ ರಸ್ತೆ ಪ್ರಯಾಣಕ್ಕೆ ಸುಸಜ್ಜಿತ ರಸ್ತೆ ಅಗತ್ಯವಾಗಿದೆ.
ಗ್ರಾಮದ ರಸ್ತೆಗೆ ಕ್ಷೇತ್ರದ ಶಾಸಕರು ಒಂದು ಬಾರಿ ಖುದ್ದಾಗಿ ಬಂದು ರಸ್ತೆಯ ಅನುಭವ ಪಡೆದು ನಂತರವಾದರೂ ರಸ್ತೆ ನಿರ್ಮಿಸಲು ಮುಂದಾಗಬೇಕು ಎಂದು ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಮೈನೂದ್ಧಿನ್ ಬಾಗವಾನ, ಶಫೀಕ್ ಸಿಪಾಯಿ, ಶಂಕ್ರಪ್ಪ ಬಂಗಾರಗುಂಡ, ಶಕೀಲ್ ಪೊಲಾಚಿ, ಮಹಮ್ಮದ್ ಬಾಗವಾನ, ಮಾಂತೇಶ ಮುರುಕನಾಳ, ಸುಭಾಸರೆಡ್ಡಿ ದೇಸಾಯಿ, ಶರಣಗೌಡ ಪಾಟೀಲ, ಇಬ್ರಾಹಿಂ ಹವಾಲ್ದಾರ್, ನಿಂಗಣ್ಣ ಪಾಕಿ ಆಗ್ರಹಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪೋಷಕರು ಮಕ್ಕಳಿಗೆ ಕಲಿಸಬೇಕಾದ ಜೀವನ ಮೌಲ್ಯಗಳು
    In ಭಾವರಶ್ಮಿ
  • ದಡ್ಡತನ ಹಾಗೂ ಪರಿಪೂರ್ಣತೆ
    In ವಿಶೇಷ ಲೇಖನ
  • ಕೊಲ್ಹಾರ ತಾಲೂಕು ಕಾನಿಪ ಸಂಘಕ್ಕೆ ಅರುಣಕುಮಾರ ಸಾರಥ್ಯ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.