Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ

ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ

ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ
(ರಾಜ್ಯ ) ಜಿಲ್ಲೆ

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು | ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮಂಡನೆ

ಬೆಳಗಾವಿ: ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.
ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಅವಕಾಶ ನೀಡುತ್ತದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಇಂದು ವಿಧಾನಸಭೆಯಲ್ಲಿ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ(ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಮಸೂದೆ, 2025’ ಅನ್ನು ಮಂಡಿಸಿದ್ದು, ಅದರಲ್ಲಿ 20 ರೀತಿಯ ಸಾಮಾಜಿಕ ಬಹಿಷ್ಕಾರಗಳನ್ನು ಪಟ್ಟಿ ಮಾಡಿದ್ದಾರೆ.
ಮಸೂದೆಯಲ್ಲಿ ಯಾವುದೇ ವ್ಯಕ್ತಿ, ಕುಟುಂಬದೊಂದಿಗೆ ವ್ಯವಹರಿಸಲು ನಿರಾಕರಿಸುವುದು, ಅವರ ಕೆಲಸ ಮಾಡಲು ಅಥವಾ ವ್ಯಾಪಾರ ಮಾಡಲು ನಿರಾಕರಿಸುವುದು; ಸೇವೆಗಳನ್ನು ನಿರಾಕರಿಸಿದರೆ ಜೈಲು ಶಿಕ್ಷ ಗ್ಯಾರಂಟಿ ಎಂದು ಹೇಳಲಾಗಿದೆ.
ರಾಜ್ಯದ ವಿವಿಧ ಸಮುದಾಯಗಳಲ್ಲಿ ಸಾಮಾಜಿಕ ಬಹಿಷ್ಕಾರ ಹಾಕುವುದು, ಜಾತಿ ಸಭೆ ಅಥವಾ ಸಮುದಾಯ ಪಂಚಾಯತ್‌ಗಳ ಮೂಲಕ ವಿವಿಧ ಶಿಕ್ಷೆಗಳನ್ನು ವಿಧಿಸುವ ಅಸಂವಿಧಾನಿಕ ಪದ್ಧತಿಗಳು ಇನ್ನೂ ಆಚರಣೆಯಲ್ಲಿವೆ. ಇದರ ಪರಿಣಾಮವಾಗಿ ವ್ಯಕ್ತಿಗಳು ಅಥವಾ ಕುಟುಂಬ ತಮ್ಮ ಜೀವನವನ್ನು ಘನತೆಯಿಂದ ನಡೆಸುವಲ್ಲಿ ಹೆಚ್ಚಿನ ಕಿರುಕುಳ ಅನುಭವಿಸುತ್ತಾರೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
“ಗ್ರೇಟರ್ ಬೆಂಗಳೂರು ಆಡಳಿತ(ಎರಡನೇ ತಿದ್ದುಪಡಿ)ಮಸೂದೆ 2025 ಮಂಡನೆ
ಇದೇ ವೇಳೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪರವಾಗಿ ಸಚಿವ ಮಹದೇವಪ್ಪ ಅವರು “ಗ್ರೇಟರ್ ಬೆಂಗಳೂರು ಆಡಳಿತ(ಎರಡನೇ ತಿದ್ದುಪಡಿ)ಮಸೂದೆ 2025 ಅನ್ನು ಮಂಡಿಸಿದರು. ಈ ಮಸೂದೆಯಲ್ಲಿ ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನಸಭೆ ಮತ್ತು ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಸೇರಿಸಲು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ಕ್ಕೆ ತಿದ್ದುಪಡಿ ಮಾಡಲಾಗಿದೆ.
ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಪ್ರಾಧಿಕಾರದ ಎಕ್ಸ್-ಆಫಿಸಿಯೊ ಸದಸ್ಯರನ್ನಾಗಿ ಸೇರಿಸಲು ಸಹ ಇದು ಅವಕಾಶ ನೀಡುತ್ತದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲು ಸಹ ಇದು ಅವಕಾಶ ಕಲ್ಪಿಸುತ್ತದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ

ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ

ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು

ಅಧ್ಯಕ್ಷ ಗದ್ಯಾಳ, ಉಪಾಧ್ಯಕ್ಷ ತುಂಗಳ ಅವಿರೋಧ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷ ಗದ್ಯಾಳ, ಉಪಾಧ್ಯಕ್ಷ ತುಂಗಳ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ-ಬೆಂಗಳೂರ ಕಲ್ಯಾಣ ರಥ ಪ್ರಯಾಣ ದರದಲ್ಲಿ ರಿಯಾಯಿತಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ
    In (ರಾಜ್ಯ ) ಜಿಲ್ಲೆ
  • ಡಿ.೧೩ ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ರಕ್ತ ಅಮೂಲ್ಯ ಜೀವ ಉಳಿಸುವ ವಸ್ತು :ಅಭಿನವ ರುದ್ರಮುನಿ ಶ್ರೀ
    In (ರಾಜ್ಯ ) ಜಿಲ್ಲೆ
  • ಶ್ರೀನಿವಾಸ್ ನಂದಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಂಸ್ಕೃತಿ ಸಂಪ್ರದಾಯ ಉಳಿಯಲಿ :ವೀರಮಹಾಂತ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.