Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
(ರಾಜ್ಯ ) ಜಿಲ್ಲೆ

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದ ವಾಣಿಜ್ಯ ಮಳಿಗೆಗಳು ಗೌಪ್ಯವಾಗಿ ಹರಾಜು ಮಾಡಲು ಮುಂದು | ಪ.ಪಂ ಸದಸ್ಯ ಸಂಜೀವಕುಮಾರ ಎಂಟಮಾನ ಆರೋಪ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ಬಸವೇಶ್ವರ ವೃತದಲ್ಲಿ ನಿರ್ಮಾಣಗೊಂಡ ಪಟ್ಟಣ ಪಂಚಾಯಿತಿ ವಾಣಿಜ್ಯ ಮಳಿಗೆಗಳು ಗೌಪ್ಯವಾಗಿ ಹರಾಜು ಮಾಡಲು ಮುಂದಾಗಿರುವ ಮುಖ್ಯಾಧಿಕಾರಿ ಮತ್ತು ಅದ್ಯಕ್ಷರು ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದಾರೆ ಎಂದು 2ನೇ ವಾರ್ಡಿನ ಪ.ಪಂ. ಸದಸ್ಯ ಸಂಜೀವಕುಮಾರ ಎಂಟಮಾನ ಹೇಳಿದರು.
ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತ ಹೇಳಿದ ಅವರು, ಪಂಚಾಯತಿಯ ವಾಣಿಜ್ಯ ಮಳಿಗೆಳ ಹಾರು ಪ್ರಕ್ರಿಯೆ ಕಾನೂನು ರೀತಿ ಮೀಸಲಾತಿ ಆದಾರದ ಮೇಲೆ ನಡೆಯಬೇಕು. ಮತ್ತು ಮುಂಚಿತವಾಗಿ ಪ್ರಚಲಿತ ವಿವಿದ ಕನ್ನಡ ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಹರಾಜು ಮಾಡಬೇಕು ಎಂದು ಈ ಹಿಂದೆ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ, ಅದು ಯಾವುದು ಪರಿಗಣನೆ ಮಾಡದೆ ಗೌಫ್ಯವಾಗಿ ಹರಾಜು ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಕೆಲ ವ್ಯಾಪರಸ್ಥರು ಪ.ಪಂ ಸಿ.ಓ ಹೆಸರಿನ ಮೇಲೆ ವಿವಿದ ಬ್ಯಾಂಕುಗಳಲ್ಲಿ ಡಿಡಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕುದ್ದಾಗಿ ಬೇಟಿ ನೀಡಿ ಪರಿಶಿಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಾರ್ವಜನಿಕರೊಂದಿಗೆ ಜಿಲ್ಲಾಧಿಕಾರಿ ಕಛೆರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.
ವಾಣಿಜ್ಯ ಮಳಿಗೆಗಳ ಹರಾಜು ಮಾಡುವ ಬಗ್ಗೆ ಪ.ಪಂ ಸದಸ್ಯರ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆದುಕೊಂಡು ಕಾನೂನು ರೀತಿ ಸಾರ್ವಜನಿಕರಿಗೆ ಮಾಹಿತಿಗಾಗಿ ಪ್ರಚಲಿತ ದಿನ ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸುವದು ಮತ್ತು ಕರ ಪತ್ರಗಳು ಹಂಚುವದು, ಡಂಗುರ ಸಾರುವ ಮೂಲಕ ಹರಾಜು ಮಾಡಬೇಕು ಎಂದು ಆಗ್ರಹಿಸಿದರು. ಒಟ್ಟು 21 ವಾಣಿಜ್ಯ ಮಳಿಗೆಗಳು ನಿರ್ಮಾಣ ಮಾಡಬೇಕಿದ್ದು ಅದರಲ್ಲಿ 17 ಮಾತ್ರ ನಿರ್ಮಿಸಿದ್ದಾರೆ ಅದರ ಕಾಮಗಾರಿ ಇನ್ನು ಪೂರ್ಣಗೊಳಿಸದೆ ಆತುರದಲ್ಲಿ ಮಳಿಗೆಗಳು ಪ್ರಾರಂಬಿಸಲು ಮುಂದಾಗಿದ್ದಾರೆ. ಪಟ್ಟಣ ಪಂಚಾಯಿತಿ ಅಧಿಕಾರಿ ಮತ್ತು ಅದ್ಯಕ್ಷರು ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದು ಪಂಚಾಯಿತಿ ಎಲ್ಲ ವ್ಯವಹಾರಗಳು ಅವ್ಯವಹಾರ ನಡೆದಿದೆ. ಆಲಮೇಲದ ಕೆಪಿಆರ್ ಸಕ್ಕರೆ ಕಾರ್ಖಾನೆಯಿಂದ ಪ್ರತಿ ವರ್ಷ 7.45 ಲಕ್ಷ ತೆರಿಗೆ ಹಣ ಮತ್ತು ಪಟ್ಟಣದ ಕಾಯಿಪಲ್ಯ ಮಾರುಕಟ್ಟೆಯ ನಿಲಾವಿನ 5.40 ಲಕ್ಷ ಹಣ ಸೇರಿದಂತೆ ಪಂಚಾಯಿತಿಗೆ ಬರುವ ಆದಯವನ್ನು ಸಂಪೂರ್ಣವಾಗಿ ಅವ್ಯವಹಾರ ಮಾಡಲಾಗಿದೆ ಈ ಬಗ್ಗೆ ಸದಸ್ಯರು ಲೆಕ್ಕಪತ್ರ ಕೆಳಿದರೆ ಸರಿಯಾದ ಮಾಹಿತಿ ನಿಡುವದಿಲ್ಲ ಸದಸ್ಯರ ಗಮನಕ್ಕೆ ಬಾರದೆ ಅದ್ಯಕ್ಷ ಮತ್ತು ಮುಖ್ಯಾಧಿಕಾರಿ ಅವ್ಯವಹಾರ ಮಾಡಿದ್ದು ಈ ಬಗ್ಗೆ ಲೋಕಾಯುಕ್ತರು ಸ್ವಯಂ ಪ್ರೇರಣೆ ಯಿಂದ ತನಿಕೆ ಮಾಡಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಾಣಿಜ್ಯ ಮಳಿಗೆಗಳು ಕಾನೂನು ರೀತಿ ಮಿಸಲಾತಿ ಆದಾರದ ಮೇಲೆ ಹರಾಜು ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿರವ ಮತ್ತು ಕೆಪಿಆರ್ ತೆರಿಗೆ ತುಂಬಿರುವ ಮತ್ತು ತರಕಾರಿ ಮಾರುಕಟ್ಟೆಯ ಹರಾಜಿನಿಂದ ಬಂದ ಹಣದ ಕರಪತ್ರಗಳನ್ನು ಪ್ರದರ್ಶಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂತೋಷ ಜರಕರ ಇದ್ದರು.

“ವಾಣಿಜ್ಯ ಮಳಿಗಳ ಹರಾಜು ಪ್ರಕ್ರಿಯೆ ಕಾನೂನು ರೀತಿ ಮಾಡುತ್ತೆವೆ. ಅದಕ್ಕೆ ಸಂಬಂದಿಸಿದ ಬ್ಯಾಂಕಿನಲ್ಲಿ ಡಿಡಿ ಪಡೆದುಕೊಂಡಿರುವದು ನನಗೆ ಯಾವುದೆ ಮಾಹಿತಿ ಇಲ್ಲ. ಕಾನೂನು ರೀತಿಯಲ್ಲಿ ಹರಾಜು ಮಾಡಲಾಗುತ್ತೆ.

-ಸುರೇಶ ನಾಯಕ
ಪ.ಪಂ. ಸಿಒ ಆಲಮೇಲ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು

ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ನಬೀಸಾಬ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ & ಸೌಹಾರ್ದಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
  • ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.